Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೆಲಸ ಕೇಳಲು ಹೋದರೆ ಕಾಲಲ್ಲಿ ಒದ್ದ ಪ್ರತಿಮಾ : ಕೊಲೆ ಸತ್ಯ ಬಾಯ್ಬಿಟ್ಟ ಆರೋಪಿ

Facebook
Twitter
Telegram
WhatsApp

 

ಬೆಂಗಳೂರು: ಭೂವಿಜ್ಞಾನ ಇಲಾಖೆಯ ಅಧಿಕಾರಿಯ ಕೊಲೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿ, ತನಿಖೆ ನಡೆಸುತ್ತಿದ್ದಾರೆ. ಪ್ರತಿಮಾ ಕಾರು ಡ್ರೈವರ್ ಆಗಿದ್ದ ಕಿರಣ್ ಈ ಕೊಲೆ ಮಾಡಿದ್ದಾನೆ. ಇದೀಗ ಈ ತನಿಖೆಯಲ್ಲಿ ಪ್ರತಿಮಾ ಕಾಲಿನಲ್ಲಿ ಒದ್ದಿದ್ದೆ ಕೊಲೆಗೆ ಕಾರಣ ಎಂದು ತಪ್ಪೊಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

ಪ್ರತಿಮಾ ಅವರ ಕೊಲೆಯ ಸುಳಿವೇ ಸಿಗದಂತೆ ಕೊಲೆ ಮಾಡಿದ್ದ ಕಿರಣ್, ಮಹದೇಶ್ವರ ಬೆಟ್ಟದಲ್ಲಿ ಪೊಲೀಸರ ಕೈಗೆ ತಗಲಾಕಿಕೊಂಡಿದ್ದ. ಪ್ರತಿಮಾ ಅವರನ್ನು ವೇಲಿನಿಂದ ಬಿಗಿದು, ಚಾಕುವಿನಲ್ಲಿ ಚುಚ್ಚಿ ಕೊಲೆ‌ ಮಾಡಿದ್ದ. ವಿಚಾರಣೆ ವೇಳೆ ಪ್ರತಿಮಾ ಅವರನ್ನು ಕೊಲೆ ಮಾಡಿದ್ದು ಯಾಕೆ ಎಂಬ ಸತ್ಯವನ್ನು ಬಾಯ್ಬಿಟ್ಟಿದ್ದಾನೆ. ಕೊಲೆ ಮಾಡುವ ಉದ್ದೇಶ ಕೂಡ ಇರಲಿಲ್ಲ ಎಂದಿದ್ದಾನೆ.

ಕಿರಣ್, ಹಲವು ವರ್ಷಗಳಿಂದ ಪ್ರತಿಮಾ ಬಳಿ ಕಾರು ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ. ಆದರೆ ಯಾವುದೋ ಆಕ್ಸಿಡೆಂಟ್ ಕಾರಣಕ್ಕೆ ಕಿರಣ್ ನನ್ನು ಕೆಲಸದಿಂದ ತೆಗೆದಿದ್ದಾರೆ. ಸರ್ಕಾರಿ ಕೆಲಸ ಎಂದೇ ಮನೆಯವರಿಗೆಲ್ಲಾ ಹೇಳಿಕೊಂಡಿದ್ದರಂತೆ ಕಿರಣ್. ಆದರೆ ಕೆಲಸ ಹೋದ ಮೇಲೆ ಮನೆಯಲ್ಲಿ ನೆಮ್ಮದಿಯೇ ಇಲ್ಲದಂತೆ ಆಗಿತ್ತಂತೆ. ಗರ್ಭಿಣಿಯಾಗಿದ್ದ ಹೆಂಡತಿ ಕೂಡ ತವರಿಗೆ ಹೋಗಿ ಕೂತಿದ್ದಳಂತೆ. ಈ ಎಲ್ಲಾ ಸಮಸ್ಯೆಯಿಂದ ನೊಂದ ಕಿರಣ್, ಮತ್ತೆ ಕೆಲಸ ಕೇಳುವುದಕ್ಕೆ ಹೋಗಿದ್ದಾನೆ. ಪ್ರತಿಮಾರ ಮನೆಗೆ ಹೋಗಿ ಕಾಲು ಹಿಡಿದು ಬೇಡಿದ್ದನಂತೆ. ಆದರೆ ಪ್ರತಿಮಾ ಕಾಲಿನಲ್ಲಿಯೇ ಒದ್ದಿದ್ದಾರೆ. ಆ ಕ್ಷಣಕ್ಕೆ ಕಿರಣ್ ಕೋಪ ಜಾಸ್ತಿಯಾಗಿ ಕೊಲೆ ಮಾಡಿದ್ದಾನಂತೆ. ಪೊಲೀಸರು ವಿಚಾರಣೆ ನಡೆಸಿದಾಗ ತಾನೇ ಕೊಲೆ ಮಾಡಿದ್ದು ಎಂಬ ಸತ್ಯವನ್ನು ಒಪ್ಪಿಕೊಂಡಿದ್ದಾನೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಂದು ಟೀಂ ಇಂಡಿಯಾದ ಉಪನಾಯಕನಾಗಿದ್ದ ಕೆ ಎಲ್ ರಾಹುಲ್ ಈ ಬಾರಿ ತಂಡದಿಂದಾನೇ ಔಟ್..!

ಟ20 ವೇಳೆ ಶ್ವಕಪ್ ಟೂರ್ನಿಗೆ ಆಟಗಾರರನ್ನು ಆಯ್ಕೆ ಮಾಡಲಾಗಿದ್ದಿ, ಕನ್ನಡಿಗ ಕೆ ಎಲ್ ರಾಹುಲ್ ಗೆ ಸ್ಥಾನವನ್ನೇ ನೀಡಿಲ್ಲ. ತಂಡಿದಿಂದ ಹೊರಗೆ ಉಳಿದಿದ್ದಾರೆ. ಈ ಬಾರಿಯ ಐಪಿಎಲ್ ಮ್ಯಾಚ್ ನೆಲ್ಲಾ ಯಾರೆಲ್ಲಾ ಉತ್ತಮ ಪ್ರದರ್ಶ‌

ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್ ಹಾಗೂ ರೇವಣ್ಣರಿಗೆ ನೋಟೀಸ್ ನೀಡಿದ ಎಸ್ಐಟಿ..!

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ತನಿಖೆ ನಡೆಸುತ್ತಿದೆ. ವಿಡಿಯೋದಲ್ಲಿ ಗುರುತು ಸಿಕ್ಕವರನ್ನು ಕರೆಸಿ , ವಿಚಾರಣೆ ನಡೆಸುತ್ತಿದ್ದಾರೆ. ರಾಜಕೀಯ ನಾಯಕರ ಕೆಸೆರೆಚಾಟದ ನಡುವೆ ತನಿಖೆ ತೀವ್ರಗೊಂಡಿದೆ. ಎಡಿಜಿಪಿ ಬಿಜಯ್

ಚಿತ್ರದುರ್ಗ | ಮೇ 1ರಂದು ವಿದ್ಯುತ್ ವ್ಯತ್ಯಯ

ಚಿತ್ರದುರ್ಗ. ಏ.30: ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ ಪಂಡರಹಳ್ಳಿ ಲೈನ್‍ನ ಟ್ಯಾಪಿಂಗ್ ಪಾಯಿಂಟ್‍ನಿಂದ ಪಂಡರಹಳ್ಳಿ 66/11 ಕೆವಿ ವಿ.ವಿ ಕೇಂದ್ರದವರೆಗೆ ಡ್ರೇಕ್ ಕಂಡಕ್ಟರ್ ಬಳಸಿ ಉದ್ದೇಶಿತ 66 ಕೆವಿ ಲೈನ್ ಮತ್ತು ಕೊಯೊಟ್ ಕಂಡಕ್ಟರ್ ಬಳಸಿ

error: Content is protected !!