Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರತಿಭಟನೆ ನಡೆಸುವ ಕಾಂಗ್ರೆಸ್ ವರ್ತನೆ ಹಾಸ್ಯಾಸ್ಪದ- ಕ್ಯಾಪ್ಟನ್ ಗಣೇಶ್ ಕಾರ್ಣಿಕ್

Facebook
Twitter
Telegram
WhatsApp

ಬೆಂಗಳೂರು: ನಮ್ಮ ಪಕ್ಷದ ರಾಜ್ಯಾಧ್ಯಕ್ಷರಾದ ನಳಿನ್‍ಕುಮಾರ್ ಕಟೀಲ್ ಅವರು 2001ರಲ್ಲಿ ನಡೆದ ಒಂದು ಘಟನೆ ಹಾಗೂ ಅದರ ಬಗ್ಗೆ ಮಾನ್ಯ ಸಂಸದರಾದ ಸುಬ್ರಹ್ಮಣ್ಯನ್ ಸ್ವಾಮಿ ಅವರು ದೃಶ್ಯ ಮಾಧ್ಯಮಕ್ಕೆ ಕೊಟ್ಟ ಹೇಳಿಕೆ ಮತ್ತು ಅದನ್ನು ಆಧರಿಸಿ ಅನೇಕ ಪತ್ರಿಕೆಗಳಲ್ಲಿ, ಮಾಧ್ಯಮಗಳಲ್ಲಿ ವರದಿ ಆದ ಸುದ್ದಿಯನ್ನು ಒಂದು ವಾಕ್ಯದಲ್ಲಿ ಹೇಳಿದ್ದಾರೆ. ಅದನ್ನು ನೆಪವಾಗಿ ಇಟ್ಟುಕೊಂಡು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ವರ್ತನೆ ಹಾಸ್ಯಾಸ್ಪದ ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರರು ಮತ್ತು ವಿಧಾನಪರಿಷತ್ ಮಾಜಿ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರು ತಿಳಿಸಿದರು.

ಈ ವೇಳೆ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾನ್ಯ ಸಂಸದರಾದ ಸುಬ್ರಹ್ಮಣ್ಯನ್ ಸ್ವಾಮಿ ಅವರು ಝೀ ನ್ಯೂಸ್‍ನಲ್ಲಿ ಹೇಳಿಕೆ ನೀಡುತ್ತ “2001ರಲ್ಲಿ ರಾಹುಲ್ ಗಾಂಧಿ ಅವರನ್ನು ಮಾದಕ ವಸ್ತು ಪ್ರಕರಣಕ್ಕೆ ಸಂಬಂಧಿತ ಪ್ರಕರಣಗಳಲ್ಲಿ ಅಮೆರಿಕದಲ್ಲಿ ಫೆಡರಲ್ ಬ್ಯೂರೊ ಆಫ್ ಇನ್‍ವೆಸ್ಟಿಗೇಷನ್ (ಎಫ್‍ಬಿಐ) ಅಧಿಕಾರಿಗಳು ವಶಕ್ಕೆ ಪಡೆದಿದ್ದರು.

1.60 ಲಕ್ಷ ಅಮೆರಿಕನ್ ಡಾಲರ್ ಮೌಲ್ಯದ ಮಾದಕ ವಸ್ತು ಹೊಂದಿದ್ದ ಆರೋಪ ಅವರ ಮೇಲಿತ್ತು. ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಮತ್ತು ಯುಪಿಎ ಅಧ್ಯಕ್ಷೆಯಾಗಿದ್ದ ಶ್ರೀಮತಿ ಸೋನಿಯಾ ಗಾಂಧಿ ಅವರ ವಿನಂತಿಯ ಮೇರೆಗೆ ಅಂದಿನ ಪ್ರಧಾನಿಗಳಾದ ಸನ್ಮಾನ್ಯ ಶ್ರೀ ವಾಜಪೇಯಿಯವರು ಅಮೆರಿಕದ ಅಂದಿನ ಅಧ್ಯಕ್ಷ ಜಾರ್ಜ್ ಬುಷ್ ಜೊತೆ ಮಾತನಾಡಿ, ರಾಹುಲ್ ಗಾಂಧಿಯವರಿಗೆ ಬಿಡುಗಡೆಯ ಭಾಗ್ಯ ಒದಗಿಸಿದ್ದರು ಎಂದು ತಿಳಿಸಿದ್ದು ಇದು ಪತ್ರಿಕೆಗಳು, ಮಾಧ್ಯಮಗಳಲ್ಲಿ ವರದಿಯಾಗಿತ್ತು ಎಂದರು.

ಇದ್ದದ್ದನ್ನು ಇದ್ದಂಗೆ ಹೇಳಿದ್ರೆ ಎದ್ದು ಬಂದು ಎದೆಗೆ ಒದ್ದರಂತೆ ಎಂಬ ಗಾದೆಮಾತಿನಂತಾಗಿದೆ ಕಾಂಗ್ರೆಸ್‍ನ ಪರಿಸ್ಥಿತಿ ಎಂದ ಅವರು, ಕಾಂಗ್ರೆಸ್ ಪಕ್ಷ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರು ಈ ಕುರಿತಂತೆ ಚಕಾರ ಎತ್ತಿಲ್ಲ. ಆದ್ದರಿಂದ ಇದು ಸತ್ಯ ಎಂದು ಅನಿಸುವುದಿಲ್ಲವೇ ಎಂದು ಪ್ರಶ್ನಿಸಿದರು. ಒಂದು ಕುಟುಂಬದ ಅಡಿಯಾಳಾಗಿ ಗುಲಾಮಿ ಮಾನಸಿಕತೆ ಹೊಂದಿರುವ ಕಾಂಗ್ರೆಸ್ ಪಕ್ಷದವರು ಪ್ರತಿಭಟನೆ ಮಾಡಿ ಖುಷಿ ಪಡಿಸುವ ಕೆಲಸ ಮಾಡುತ್ತಿದ್ದಾರೆಯೇ ಹೊರತು ಅವರ ಪ್ರತಿಭಟನೆಯಲ್ಲಿ ಯಾವುದೇ ಹುರುಳಿಲ್ಲ ಎಂದು ಹೇಳಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ಚಿನ ಶುಲ್ಕ ವಸೂಲಿ – ಶಿಕ್ಷಣ ಸಂಸ್ಥೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ : ಟಿ.ವೆಂಕಟೇಶ್

ಚಿತ್ರದುರ್ಗ : ಮೇ 21: ಜಿಲ್ಲೆಯಲ್ಲಿ ಶೈಕ್ಷಣಿಕ ಚಟುವಟಿಕೆಯಲ್ಲಿ ಸಕ್ರಿಯವಾಗಿರುವ ಹಲವು ಶಿಕ್ಷಣ ಸಂಸ್ಥೆಗಳು ಮಕ್ಕಳ ದಾಖಲಾತಿಗಾಗಿ ಮಾನವೀಯತೆ ಮರೆತು ಸರ್ಕಾರ ನಿಗಧಿಪಡಿಸಿದ್ದಕ್ಕಿಂತ ಹೆಚ್ಚಿನ ಶುಲ್ಕ ವಸೂಲಿ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು

ಜವಾಬ್ದಾರಿಯುತವಾಗಿ ಎಚ್ಚರಿಕೆಯಿಂದ ಮತ ಎಣಿಕೆಕಾರ್ಯ ನಿರ್ವಹಿಸಲು ಸೂಚನೆ : ಟಿ.ವೆಂಕಟೇಶ್

ಚಿತ್ರದುರ್ಗ : ಮೇ 21 : ಏಪ್ರಿಲ್ 26ರಂದು ನಡೆದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯವು ಜೂನ್ 04ರಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ನೂತನ ಕಟ್ಟಡದಲ್ಲಿ ನಡೆಯಲಿದ್ದು, ಚುನಾವಣೆಯ

ಬರ್ತ್ ಡೇ ಮುಗಿದು ವಾರವಾದರೂ ಬರ್ತಿವೆ ಗಿಫ್ಟ್ : ಅಷ್ಟೊಂದು ಸೀರೆಗಳನ್ನು ಸಂಗೀತಾಗೆ ಗಿಫ್ಟ್ ಮಾಡಿದ್ದು ಯಾರು..?

ಸಂಗೀತಾ ಶೃಂಗೇರಿ ಈಗ ಯಾರನ್ನೇ ಕೇಳಿದರೂ ಹೇಳುತ್ತಾರೆ. ಬಿಗ್ ಬಾಸ್ ನಲ್ಲಿ ತಮ್ಮದೇ ಆದ ವ್ಯಕ್ತಿತ್ವದಿಂದ ಗುರುತಿಸಿಕೊಂಡವರು. ಎದುರಾಳಿಗಳಿಗೆ ತಿರುಗೇಟು ಕೊಟ್ಟವರು. ಗೆದ್ದೆ ಗೆಲ್ಲುತ್ತಾರೆ ಎಂದುಕೊಂಡಿದ್ದಾಗಲೇ ಕೊನೆಯ ಮೆಟ್ಟಿಲಿನ ತನಕ ಹೋಗಿ ವಾಪಾಸ್ ಬಂದವರು.

error: Content is protected !!