Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ದರ್ಶನ್ ಗೆ ಜಾಮೀನು ಸಿಕ್ಕ ಹಿನ್ನೆಲೆ ಚಾಮುಂಡಿ ಬೆಟ್ಟದಲ್ಲಿ ಹರಕೆ ತೀರಿಸಿದ ವಿಜಯಲಕ್ಷ್ಮಿ..!

---Advertisement---

ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಿಗೆ ಸಂಬಂಧಿಸಿದಂತೆ ದರ್ಶನ್ ಜೈಲು ವಾಸ ಅನುಭವಿಸಿದರು. ಸುಮಾರು ಐದು ತಿಂಗಳ ಕಾಲ ಜೈಲಿನಲ್ಲಿಯೇ ಇದ್ದರು. ಬಳಿಕ ಅನಾರೋಗ್ಯದ ಕಾರಣದಿಂದ ಮಧ್ಯಂತರ ಜಾಮೀನು ಪಡೆದು ಬಿಜಿಎಸ್ ಆಸ್ಪತ್ರೆಗೆ ದಾಖಲಾದರು. ಇದೋಗ ರೆಗ್ಯುಲರ್ ಬೇಲ್ ಸಿಕ್ಕಿದ್ದು, ಮೈಸೂರಿನ ತೋಟದ ಮನೆಯಲ್ಲಿದ್ದಾರೆ. ಅಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ.‌ ಇದರ ನಡುವೆ ಪತ್ನಿ ವಿಜಯಲಕ್ಷ್ಮಿ ದೇವಸ್ಥಾನಗಳಿಗೆ ಹರಕೆ ತೀರಿಸುತ್ತಿದ್ದಾರೆ.

ಇಂದು ಚಾಮುಂಡಿ ಬೆಟ್ಟಕ್ಕೆ ತಮ್ಮ ಅತ್ತೆ ಮೀನಾ ತೂಗುದೀಪ ಅವರೊಟ್ಟಿಗೆ ಭೇಟಿ ನೀಡಿ, ತಾಯಿಗೆ ವಿಶೇಷ ಪೂಜೆ ಮಾಡಿಸುವ ಮೂಲಕ ಹರಕೆ ತೀರಿಸಿದ್ದಾರೆ. ದರ್ಶನ್ ಜೈಲಿನಿಂದ ಹೊರಗೆ ಬಂದರೆ, ಬೇಲ್ ಸಿಕ್ಕರೆ ಪೂಜೆ ಸಲ್ಲಿಸುವ ಹರಕೆ ಹೊತ್ತಿದ್ದರು. ಇಂದು ಅದನ್ನು ಪೂರ್ಣಗೊಳಿಸಿದ್ದಾರೆ. ಮೈಸೂರು ಹುಟ್ಟೂರು. ಚಾಮುಂಡೇಶ್ವರಿಗೆ ಯಾವಾಗಲೂ ಹೋಗುತ್ತಾ ಇರುತ್ತಾರೆ. ಹೀಗಾಗಿ ಮೀನಾ ತೂಗುದೀಪ ಅವರು ಕೂಡ ಹರಕೆ ಹೊತ್ತಿದ್ದರು.

ಇನ್ನು ದರ್ಶನ್ ಜೈಲು ಸೇರಿದಾಗಿನಿಂದ ವಿಜಯಲಕ್ಷ್ಮಿ ತಮ್ಮ ಪತಿಗಾಗಿ ಹೋರಾಟ ಮಾಡಿದ್ದಾರೆ. ಕಾನೂನಿನ ಹೋರಾಟದ ಜೊತೆಗೆ ದೇವರುಗಳ ಬಳಿ ಮನವಿ ಮಾಡಿಕೊಂಡಿದ್ದೇ ಹೆಚ್ಚು. ಶಕ್ತಿಪೀಠಗಳಿಗೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ, ದರ್ಶನ್ ಪರ ಬೇಡಿಕೆ ಇಡುತ್ತಿದ್ದರು. ವಿಜಯಲಕ್ಷ್ಮಿ ಹೋರಾಟದ ಪ್ರತಿಫಲವೇ ಇಂದು ದರ್ಶನ್ ಜಾಮೀನು ಮೂಲಕ ಹೊರಗೆ ಬಂದಿದ್ದಾರೆ.

ವಿಪರೀತ ಬೆನ್ನು ನೋವಿನಿಂದ ಬಳಲುತ್ತಿದ್ದ ದರ್ಶನ್, ಸರ್ಜರಿ ಮಾಡಿಸಿಕೊಳ್ಳಬೇಕೆಂದು ಕೋರ್ಟ್ ಗೆ ವರದಿ ಸಲ್ಲಿಕೆ ಮಾಡಿದ್ದರು. ಆದರೆ ಈಗ ಸರ್ಜರಿ ಮಾಡಿಸಿಕೊಳ್ಳದೆ ತೋಟದ ಮನೆಗೆ ತೆರಳಿದ್ದು, ವಿಶ್ರಾಂತಿ ಪಡೆಯುತ್ತಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment