Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದೊಡ್ಡ ಜವಬ್ದಾರಿ ನನ್ನ ಮೇಲಿದೆ, ಭಾವನಾತ್ಮಕವಾಗಿ ಮಾತನಾಡಬಾರದು : ಸಿಎಂ ಬೊಮ್ಮಾಯಿ

Facebook
Twitter
Telegram
WhatsApp

ಹಾವೇರಿ : ಕೆಲವೊಮ್ಮೆ ಎಷ್ಟೇ ದೊಡ್ಡ ಅಧಿಕಾರದಲ್ಲಿದ್ದರು ಮನುಷ್ಯ ಭಾವನಾತ್ಮಕವಾಗುವ ಸನ್ನಿವೇಶ ಹುಟ್ಟಿಕೊಳ್ಳುತ್ತದೆ. ಆದ್ರೂ ಒಮ್ಮೊಮ್ಮೆ ಈ ಅಧಿಕಾರ ಅನ್ನೋದು ಆ ಭಾವುಕತೆಯನ್ನ ತಡೆದು ಬಿಡುತ್ತೆ. ಅಂಥದ್ದೆ ಸನ್ನಿವೇಶ ಸಿಎಂ ಬೊಮ್ಮಾಯಿ ಅವರಿಗೂ ಎದುರಾಗಿತ್ತು.

ಶಿಗ್ಗಾಂವಿಯಲ್ಲಿ ಚೆನ್ನಮ್ಮ ಮೂರ್ತಿ ಅನಾವರಣ ಸಮಾರಂಭ ನಡೆಯಿತು. ಈ ವೇಳೆ ಮೂರ್ತಿ ಅನಾವರಣ ಮಾಡಿ ಮಾತನಾಡಿದ ಸಿಎಂ ಬೊಮ್ಮಾಯಿ ಅವರು, ಕೆಲವು ಊರುಗಳಿಗೆ ತನ್ನದೇ ಆದ ಐತಿಹಾಸಿಕ ಕುರುಹುಗಳಿರುತ್ತವೆ.‌ ಇದು ಸಂತರ ನಾಡು. ಈ ವೈಚಾರಿಕತೆ ಹಿಡಿದುಕೊಂಡು ಎಲ್ಲರೂ ಒಂದುಗೂಡಿ‌ ಕೆಲಸ ಮಾಡಿದರೆ ಗೆಲುವು,ಇಲ್ಲದಿದ್ದರೆ ಕಷ್ಟ.

ಯಾವುದೂ ಶಾಶ್ವತ ಅಲ್ಲ. ಬದುಕೇ ಶಾಶ್ವತ ಅಲ್ಲ. ಈ ಸ್ಥಾನಮಾನಗಳೂ ಶಾಶ್ವತ ಅಲ್ಲ. ಈ ಅರಿವು ನಮಗೆ ಪ್ರತಿ ಕ್ಷಣ ಇರಬೇಕು. ನಿಮ್ಮ ಆಶೀರ್ವಾದಿಂದ ನಾನು ಸಿಎಂ ಆಗಿದ್ದೇನೆ. ಈ ಕ್ಷೇತ್ರದ ಹೊರಗೆ ನಾನು ಗೃಹ ಮಂತ್ರಿ, ನೀರಾವರಿ ಸಚಿವ , ಸಿಎಂ. ಆದರೆ ಶಿಗ್ಗಾವಿಗೆ ಬಂದಾಗ ಬರೀ ಬಸವರಾಜ ಬೊಮ್ಮಾಯಿ ಅಷ್ಟೆ.

ಇಲ್ಲಿ ಬಸವರಾಜ ಬೊಮ್ಮಾಯಿ ಅನ್ನೋದಷ್ಟೆ ಶಾಶ್ವತ, ಉಳಿದೆಲ್ಲಾ ಅಧಿಕಾರ ಪದವಿ ಶಾಶ್ವತ ಅಲ್ಲ. ನಾನು ನಿಮ್ಮೂರಿಗೆ ಬಂದಾಗ ರೊಟ್ಟಿ ತಿನ್ನಿಸಿದ್ದೀರಿ, ನವಣಕ್ಕಿ ಅನ್ನ ಮಾಡಿ ತಿನಿಸಿದಿರಿ. ನಾನು ಅದನ್ನ ಮರೆಯೋಕೆ ಸಾಧ್ಯವಿಲ್ಲ ಎಂದು ಗದ್ಗದಿತರಾದ ಸಿಎಂ. ನಾನು ಭಾವನಾತ್ಮಕವಾಗಿ ಮಾತಾಡಬಾರದು ಅಂತ ಬಹಳ ಪ್ರಯತ್ನ ಮಾಡ್ತೀನಿ. ಆದರೆ ನಿಮ್ಮನ್ನು ನೋಡಿದಾಗ ಆ ಭಾವನೆ ಬರುತ್ತೆ. ದೊಡ್ಡ ಜವಾಬ್ದಾರಿ ನನ್ನ ಮೇಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ‌ ಭಾವನಾತ್ಮಕವಾಗಿ ನುಡಿದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೋಟಿ ಕೋಟಿ ಆಸ್ತಿಯ ಒಡೆಯ ದಿಂಗಾಲೇಶ್ವರ ಸ್ವಾಮೀಜಿ : ಚಿನ್ನ, ಬೆಳ್ಳಿ ಸೇರಿ ಏನೆಲ್ಲಾ ಇದೆ‌ ಗೊತ್ತಾ..?

ಹುಬ್ಬಳ್ಳಿ: ಪ್ರಹ್ಲಾದ್ ಜೋಶಿ ಸ್ಪರ್ಧೆಗೆ ವಿರೋಧಿಸಿ, ಬಿಜೆಪಿ ಅಭ್ಯರ್ಥಿ ಪರ ಸ್ಪರ್ಧೆಗೆ ನಿಂತಿರುವ ದಿಂಗಾಲೇಶ್ವರ ಸ್ವಾಮೀಜಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ತಮ್ಮ ಬಳಿ ಇರುವ ಚರಾಸ್ಥಿ-ಸ್ಥಿರಾಸ್ತಿ ಸೇರಿದಂತೆ ಎಲ್ಲಾ ವಿವರವನ್ನು

ಪ್ರೀತಿ ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಪುತ್ರಿಯನ್ನೇ ಚಾಕುವಿನಿಂದ ಇರಿದು ಕೊಲೆ : ಬೆಚ್ಚಿ ಬಿದ್ದ ಹುಬ್ಬಳ್ಳಿ-ಧಾರವಾಡ ಮಂದಿ

ಹುಬ್ಬಳ್ಳಿ: ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಮಗಳನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ. ನೇಹಾ ಬರ್ಬರವಾಗಿ ಕೊಲೆಯಾದ ಯುವತಿ. ಫಯಾಜ್ ಕೊಲೆ ಮಾಡಿದಾತ. ನೇಹಾ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ

ಎಳಸು, ರಾಜಕೀಯ ಜ್ಞಾನ ಇರದವನು : ವಿಜಯೇಂದ್ರ ಮೇಲೆ ಈಶ್ವರಪ್ಪ ಮಾತಿನ ಪ್ರಹಾರ

ಉಡುಪಿ: ಹಾವೇರಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಈಶ್ವರಪ್ಪ ಅವರಿಗೆ ಬಿಜೆಪಿ ನಿರಾಸೆ ಮಾಡಿದಾಗಿನಿಂದ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಮಕ್ಕಳ ಮೇಲೆ ಹರಿಹಾಯುತ್ತಲೇ ಇದ್ದಾರೆ. ಬಿಜೆಪಿ ನಾಯಕರ ಮಾತನ್ನು ಮೀರಿ, ಸದ್ಯ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ

error: Content is protected !!