ದೊಡ್ಡ ಜವಬ್ದಾರಿ ನನ್ನ ಮೇಲಿದೆ, ಭಾವನಾತ್ಮಕವಾಗಿ ಮಾತನಾಡಬಾರದು : ಸಿಎಂ ಬೊಮ್ಮಾಯಿ

ಹಾವೇರಿ : ಕೆಲವೊಮ್ಮೆ ಎಷ್ಟೇ ದೊಡ್ಡ ಅಧಿಕಾರದಲ್ಲಿದ್ದರು ಮನುಷ್ಯ ಭಾವನಾತ್ಮಕವಾಗುವ ಸನ್ನಿವೇಶ ಹುಟ್ಟಿಕೊಳ್ಳುತ್ತದೆ. ಆದ್ರೂ ಒಮ್ಮೊಮ್ಮೆ ಈ ಅಧಿಕಾರ ಅನ್ನೋದು ಆ ಭಾವುಕತೆಯನ್ನ ತಡೆದು ಬಿಡುತ್ತೆ. ಅಂಥದ್ದೆ ಸನ್ನಿವೇಶ ಸಿಎಂ ಬೊಮ್ಮಾಯಿ ಅವರಿಗೂ ಎದುರಾಗಿತ್ತು.

ಶಿಗ್ಗಾಂವಿಯಲ್ಲಿ ಚೆನ್ನಮ್ಮ ಮೂರ್ತಿ ಅನಾವರಣ ಸಮಾರಂಭ ನಡೆಯಿತು. ಈ ವೇಳೆ ಮೂರ್ತಿ ಅನಾವರಣ ಮಾಡಿ ಮಾತನಾಡಿದ ಸಿಎಂ ಬೊಮ್ಮಾಯಿ ಅವರು, ಕೆಲವು ಊರುಗಳಿಗೆ ತನ್ನದೇ ಆದ ಐತಿಹಾಸಿಕ ಕುರುಹುಗಳಿರುತ್ತವೆ.‌ ಇದು ಸಂತರ ನಾಡು. ಈ ವೈಚಾರಿಕತೆ ಹಿಡಿದುಕೊಂಡು ಎಲ್ಲರೂ ಒಂದುಗೂಡಿ‌ ಕೆಲಸ ಮಾಡಿದರೆ ಗೆಲುವು,ಇಲ್ಲದಿದ್ದರೆ ಕಷ್ಟ.

ಯಾವುದೂ ಶಾಶ್ವತ ಅಲ್ಲ. ಬದುಕೇ ಶಾಶ್ವತ ಅಲ್ಲ. ಈ ಸ್ಥಾನಮಾನಗಳೂ ಶಾಶ್ವತ ಅಲ್ಲ. ಈ ಅರಿವು ನಮಗೆ ಪ್ರತಿ ಕ್ಷಣ ಇರಬೇಕು. ನಿಮ್ಮ ಆಶೀರ್ವಾದಿಂದ ನಾನು ಸಿಎಂ ಆಗಿದ್ದೇನೆ. ಈ ಕ್ಷೇತ್ರದ ಹೊರಗೆ ನಾನು ಗೃಹ ಮಂತ್ರಿ, ನೀರಾವರಿ ಸಚಿವ , ಸಿಎಂ. ಆದರೆ ಶಿಗ್ಗಾವಿಗೆ ಬಂದಾಗ ಬರೀ ಬಸವರಾಜ ಬೊಮ್ಮಾಯಿ ಅಷ್ಟೆ.

ಇಲ್ಲಿ ಬಸವರಾಜ ಬೊಮ್ಮಾಯಿ ಅನ್ನೋದಷ್ಟೆ ಶಾಶ್ವತ, ಉಳಿದೆಲ್ಲಾ ಅಧಿಕಾರ ಪದವಿ ಶಾಶ್ವತ ಅಲ್ಲ. ನಾನು ನಿಮ್ಮೂರಿಗೆ ಬಂದಾಗ ರೊಟ್ಟಿ ತಿನ್ನಿಸಿದ್ದೀರಿ, ನವಣಕ್ಕಿ ಅನ್ನ ಮಾಡಿ ತಿನಿಸಿದಿರಿ. ನಾನು ಅದನ್ನ ಮರೆಯೋಕೆ ಸಾಧ್ಯವಿಲ್ಲ ಎಂದು ಗದ್ಗದಿತರಾದ ಸಿಎಂ. ನಾನು ಭಾವನಾತ್ಮಕವಾಗಿ ಮಾತಾಡಬಾರದು ಅಂತ ಬಹಳ ಪ್ರಯತ್ನ ಮಾಡ್ತೀನಿ. ಆದರೆ ನಿಮ್ಮನ್ನು ನೋಡಿದಾಗ ಆ ಭಾವನೆ ಬರುತ್ತೆ. ದೊಡ್ಡ ಜವಾಬ್ದಾರಿ ನನ್ನ ಮೇಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ‌ ಭಾವನಾತ್ಮಕವಾಗಿ ನುಡಿದಿದ್ದಾರೆ.

suddionenews

Recent Posts

ಉದ್ಯೋಗ ವಾರ್ತೆ : ಚಿತ್ರದುರ್ಗದಲ್ಲಿ ಮಾರ್ಚ್ 01 ರಂದು ಬೃಹತ್ ಉದ್ಯೋಗ ಮೇಳ

ಚಿತ್ರದುರ್ಗ. ಫೆ.24:  ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…

3 hours ago

ಮಧ್ಯ ಕರ್ನಾಟಕದಲ್ಲಿಯೇ ಪ್ರಪ್ರಥಮ ENT ಲೇಸರ್ ಶಸ್ತ್ರಚಿಕಿತ್ಸಾ ಯಂತ್ರ ಲೋಕಾರ್ಪಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

3 hours ago

ಭದ್ರಾ ಮೇಲ್ದಂಡೆಗೆ ರಾಜ್ಯ ಬಜೆಟ್ ನಲ್ಲಿ ಐದು ಸಾವಿರ ಕೋಟಿ ಅನುದಾನಕ್ಕೆ ಹಕ್ಕೊತ್ತಾಯ

ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…

4 hours ago

ಶಾಲಾ ಪಠ್ಯದಲ್ಲಿ ಸಂಭಾಜಿ ಜೀವನ ಸೇರಿಸಲು ಒತ್ತಾಯ ; ಕಾರಣ ಏನು ಗೊತ್ತಾ..?

ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…

4 hours ago