Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿಯವರಿಗೆ ಮುಂದೆ ಯಾವ ಚುನಾವಣೆಯನ್ನೂ ಗೆಲ್ಲಲು ಸಾಧ್ಯವಿಲ್ಲ ಎಂಬ ನಡುಕ ಹುಟ್ಟಿದೆ : ಸಚಿವ ಈಶ್ವರ ಖಂಡ್ರೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಚಿತ್ರದುರ್ಗ, (ಜೂ.16) : ಬಿಜೆಪಿಯವರಿಗೆ ಬೇರೆ ಕೆಲಸ ಇಲ್ಲ  ಹತಾಶರಾಗಿ ಜನರನ್ನು ಪ್ರಚೋದಿಸುವ ಕೆಲಸ ಮಾಡುತ್ತಿದ್ದಾರೆ ಅವರಿಗೆ ನಡುಕ ಹುಟ್ಟಿದೆ ಎಲ್ಲ ಭರವಸೆ ಈಡೇರಿಸುತ್ತೇವೆ. ಮುಂದೆ ಯಾವ ಚುನಾವಣೆ ಗೆಲ್ಲಲು ಸಾಧ್ಯ ಇಲ್ಲ ಎಂದು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ನಗರದ ಹೂರ ವಲಯದ ಬೋವಿ ಗುರು ಪೀಠಕ್ಕೆ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಧಮ್ ತಾಕತ್ತು ಇದ್ರೆ ಗ್ಯಾರಂಟಿಗಳನ್ನು ಯಾವುದೇ ಷರತ್ತು ಇಲ್ಲದೇ ಕೊಡಲಿ ಎಂಬ ಅಶೋಕರವರ ಹೇಳಿಕೆಗೆ ಈ ರೀತಿ ಪ್ರತಿಕ್ರಿಯಿಸಿದರು.

ಬಿಜೆಪಿಯವರು ಮತಾಂತರ ನಿಷೇಧ ಕಾಯ್ದೆಯನ್ನು ರದ್ದು ಪಡಿಸುವುದರ ಮೂಲಕ ಮಿನಿ ಪಾಕಿಸ್ಥಾನ ಮಾಡಲಿಕ್ಕೆ ಹೊರಟಿದ್ದಾರೆ ಎಂಬುದಕ್ಕೆ ಪ್ರತಿಕ್ರಿಯಿಸಿ ಬಿಜೆಪಿಯವರು ಈ ರೀತಿ ಕೋಮು ದ್ವೇಷ ಸೃಷ್ಟಿಸಿ ಅಧಿಕಾರ ನಡೆಸಲು ಹೋದರು ಜನರು ಅದಕ್ಕೆ ತಕ್ಕಪಾಠ ಕಲಿಸಿದ್ದಾರೆ. ಸುಳ್ಳು ಹೇಳುವುದರಲ್ಲಿ ಬಿಜೆಪಿಯವರು ನಿಸ್ಸೀಮರು. ಇದನ್ನು ಜನ ಅರ್ಥ ಮಾಡಿಕೊಂಡು ಪಾಠ ಕಲಿಸಿದ್ದಾರೆ ಎಂದು ಸಚಿವರು ನುಡಿದರು.

ಅರಣ್ಯ ಸಂರಕ್ಷಣೆ, ಜನರ ಸಮಸ್ಯೆ ಆಲಿಸುವ ಎರಡೂ ಜವಾಬ್ದಾರಿ ಇದೆ. ಸಣ್ಣ ಸಮುದಾಯಗಳು, ಬಡವರು, ಅರಣ್ಯಗಳ ಪ್ರದೇಶಗಳಲ್ಲಿ ಗುಡಿಸಲು, ಜಮೀನು ಇವೆ. ಕೇಂದ್ರ ಹಾಗೂ ರಾಜ್ಯದಿಂದ ಜಂಟಿ ಸಮೀಕ್ಷೆ ಆಗಬೇಕು. ಕೆಲ ಜಿಲ್ಲೆಗಳಲ್ಲಿ ಪ್ರಸ್ತಾವನೆ ಹೋಗಿದೆ. ಕಾಲಾವಕಾಶ ಬೇಕಾಗುತ್ತದೆ. ಅರಣ್ಯ ಸಂರಕ್ಷಣೆ, ಅತಿಕ್ರಮಣ ತೆರವುಗೊಳಿಸುವ ಮೂಲಕ ಪರಿಸರ ಉಳಿಸುವ ಬಗ್ಗೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ.

ಈ ವರ್ಷ 5 ಕೋಟಿ ಸಸಿಗಳನ್ನು ನೆಡಬೇಕು. ರಾಜ್ಯದಲ್ಲಿ 21% ಅರಣ್ಯ ಇದೆ.ಅದನ್ನು 31% ಗೆ ತೆಗೆದುಕೊಂಡು ಹೋಗಬೇಕಿದೆ. ಕಾಯ್ದೆಯನ್ನು ಸಂಪೂರ್ಣವಾಗಿ ಅನುಷ್ಠಾನ ಮಾಡಿ ಪಶು ಸಂಕುಲ ಉಳಿಸುವ ಕೆಲಸ ಮಾಡುತ್ತಿದ್ದೇವೆ. ಶ್ರೀಗಂಧ ಬೆಳೆಯ ಎಲ್ಲಾ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಬಗೆಹರಿಸಿಕೊಡುತ್ತೇನೆ.

ಮೀಸಲು ಅರಣ್ಯ ಇರುವ ಕಡೆಗಳಲ್ಲಿ ಅರಣ್ಯ ಉಳಿಸಲು ಮುಂದಾಗಿದ್ದೇವೆ. ಬಡವರು, ಬುಡಕಟ್ಟು ಸಮುದಾಯಗಳು ನಾಲ್ಕೈದು ದಶಕಗಳಿಂದ ಅಲ್ಲೆ ವಾಸ ಮಾಡುತ್ತಿದ್ದರೆ ಸರಿಯಾದ ಸಮೀಕ್ಷೆ ಮಾಡದೆ ಜನ ಕಷ್ಟ ಅನುಭವಿಸುತ್ತಿದ್ದಾರೆ. ಅರಣ್ಯ ಮತ್ತು ಕಂದಾಯ ಇಲಾಖೆ ಜಂಟಿ ಸಮೀಕ್ಷೆ ಮಾಡಿ ಸರಿಯಾದ ವರದಿ ಕೊಟ್ಟಿಲ್ಲ. ಹೀಗಾಗಿ ಗಡುವು ನೀಡಿ ಸಮೀಕ್ಷೆ ಮಾಡಲು ಆದೇಶ ಮಾಡುತ್ತಿದ್ದೇನೆ ವರದಿ ತರಿಸಿ ನ್ಯಾಯ ಕೊಡುವ ಕೆಲಸ ಮಾಡುತ್ತೇವೆ.

ನಮ್ಮ ಕುಟುಂಬಕ್ಕೂ ಮಠಕ್ಕೂ ಅವಿನಾಭಾವ ಸಂಬಂಧ. ಗುರುಗಳ ಜೊತೆಗೆ ಇಪ್ಪತ್ತು ವರ್ಷಗಳಿಂದ ಸಂಪರ್ಕ ಇದೆ. ಶಕ್ತಿ ಯೋಜನೆಯಲ್ಲಿ ಖಾಸಗಿ ವಾಹನದವರಿಗೆ ಸಂಕಷ್ಟ ಎದುರಾಗಿದ್ದರೆ ಕರೆದು ಚರ್ಚಿಸುತ್ತೇವೆ. ತಾತ್ಕಾಲಿಕ ಹಿನ್ನಡೆಯಷ್ಟೇ. ಆನಂತರ ಸರಿಯಾಗುತ್ತದೆ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!