ಬಾಣಂತಿಯರ ಸಾವು ಪ್ರಕರಣ : ಸರ್ಕಾರದ ನಿರ್ಲಕ್ಷ್ಯ ದಿಂದ ಬಡವರು ಸರ್ಕಾರಿ ಆಸ್ಪತ್ರೆಗಳಿಗೆ ಬರುವುದಕ್ಕೆ ಹಿಂದೇಟು ಹಾಕುತ್ತಿದ್ದಾರೆ : ಸಂಸದ ಗೋವಿಂದ ಎಂ.ಕಾರಜೋಳ

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 03 : ಕೇಂದ್ರ ಸರ್ಕಾರದ ಪ್ರಬಲ ಇಚ್ಚಾಶಕ್ತಿಯ ನಡುವೆಯೂ, ಕೆಲವು ರಾಜ್ಯ ಸರ್ಕಾರಗಳ ನಿರ್ಲಕ್ಷ್ಯತೆಯಿಂದಾಗಿ, ಜನಪರ ಕಾಳಜಿ ಇಲ್ಲದೇ ಇರುವ ಕಾರಣದಿಂದಾಗಿ ಬಡಜನರು, ಕೂಲಿಕಾರ್ಮಿಕರು, ಸರ್ಕಾರಿ ಆಸ್ಪತ್ರೆಗಳಿಗೆ ಬರುವುದಕ್ಕೆ ಹಿಂದೇಟು ಹಾಕ್ತಾ ಇದಾರೆ. ಇದಕ್ಕೆ ಪೂರಕವೆಂಬಂತೆ ಕರ್ನಾಟಕದಲ್ಲಿ ಬಾಣಂತಿಯರ ಸರಣಿ ಸಾವುಗಳು ಸಂಭವಿಸುತ್ತಿವೆ ಎಂದು ಸಂಸದ ಗೋವಿಂದ ಎಂ.ಕಾರಜೋಳ ಹೇಳಿದರು.

ದೆಹಲಿಯ ಸಂಸತ್ ಭವನದಲ್ಲಿ ನಡೆಯುತ್ತಿರುವ ಲೋಕಸಭಾ ಅಧಿವೇಶದಲ್ಲಿ ಶೂನ್ಯ ವೇಳೆಯಲ್ಲಿ ಮಾತನಾಡಿದ ಅವರು ಕರ್ನಾಟಕದಲ್ಲಿ ನಡೆಯುತ್ತಿರುವ ಬಾಣಂತಿಯರ ಸಾವುಗಳ ಕುರಿತು ಶೂನ್ಯ ವೇಳೆಯಲ್ಲಿ ಧ್ವನಿ ಎತ್ತಿದ್ದಾರೆ.

ಕರ್ನಾಟಕದಲ್ಲಿ ಕಳೆದ ನಾಲ್ಕೈದು ತಿಂಗಳಲ್ಲಿ 28 ಕ್ಕೂ ಹೆಚ್ಚು ಬಾಣಂತಿಯರ ಸಾವುಗಳು ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಸಂಭವಿಸಿವೆ. ಅದರಲ್ಲೂ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ನವೆಂಬರ್ ತಿಂಗಳೊಂದರಲ್ಲೇ 4 ಬಾಣಂತಿಯರು ಸಾವಿಗೀಡಾಗಿದ್ದಾರೆ. ಇದು ಕೇವಲ ದುರಂತ ಅಲ್ಲ, ಕರ್ನಾಟಕ ಕಾಂಗ್ರೆಸ್ ಸರ್ಕಾರದ ಘೋರ ನಿರ್ಲಕ್ಷ್ಯ ಮತ್ತು ಸಂಪೂರ್ಣ ಅದಕ್ಷತೆಯಿಂದಾಗಿ ಅಮೂಲ್ಯ ಜೀವಗಳು ಬಲಿಯಾಗುತ್ತಿವೆ. ತನ್ನ ನಾಗರಿಕರ ಸುರಕ್ಷತೆ ಮತ್ತು ಘನತೆಯನ್ನು ಖಾತ್ರಿಪಡಿಸುವ ಮೂಲಭೂತ ಕರ್ತವ್ಯದಿಂದ ಕಾಂಗ್ರೆಸ್ ಸರ್ಕಾರ ಫಲಾಯನ ಮಾಡಿದೆ.

ಮೆಡಿಕಲ್ ಹಾಗೂ ಔಷಧ ಮಾಫಿಯಾಕ್ಕೆ ಕರ್ನಾಟಕ ರಾಜ್ಯ ಸರ್ಕಾರ ಮಣಿದಿದೆ ಎಂದು ನಾನು ನೇರವಾಗಿ ಆರೋಪ ಮಾಡ್ತೀನಿ, ಇಲ್ಲದೇ ಇದ್ದರೆ, ಇವತ್ತು ಯಾವ Intra venous ದ್ರಾವಣದಿಂದ ಬಾಣಂತಿಯರ ಸಾವುಗಳು ಸಂಭವಿಸಿದೆ ಎಂದು ಹೇಳಲಾಗುತ್ತಿದೆಯೋ ಅದೇ ದ್ರಾವಣವನ್ನು ಬಳಕೆ ಮಾಡಬಾರದು ಎಂದು ಔಷಧಿ ನಿಯಂತ್ರಕರು ವರದಿ ನೀಡಿದಾಗ್ಯೂ ಕೂಡ ದ್ರಾವಣವನ್ನು ಸರಬರಾಜು ಮಾಡುವ ಮೂಲಕ ರಾಜ್ಯ ಸರ್ಕಾರ ಬಾಣಂತಿಯರ ಸಾವಿಗೆ ಕಾರಣವಾಗಿದೆ.

ಪಶ್ಚಿಮ ಬಂಗಾಳದ ಈ ಔಷಧ ಕಂಪನಿಯ ಔಷಧವನ್ನು ತರಲು ಅನುಮತಿ ನೀಡಿದ್ದು ಹೇಗೆ ಎನ್ನುವ ಸತ್ಯ ರಾಜ್ಯದ ಜನರಿಗೆ ತಿಳಿಯಬೇಕಾಗಿದೆ. ಔಷಧ ಖರೀದಿ ಮೇಲೆ ಪ್ರಭಾವ ಬೀರುತ್ತಿರುವ ಮೆಡಿಕಲ್ ಹಾಗೂ ಔಷಧ ಮಾಫಿಯಾವನ್ನು ಸ್ವತ: ಮುಖ್ಯಮಂತ್ರಿಗಳೇ ಒಪ್ಪಿಕೊಂಡಿರುವುದು ಆಘಾತಕಾರಿಯಾದ ಸಂಗತಿಯಾಗಿದೆ. ಮೆಡಿಕಲ್ ಹಾಗೂ ಔಷಧ ಮಾಫಿಯಾವನ್ನು ಸಕ್ರಿಯಗೊಳಿಸುವವರು ಯಾರು ? ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಭ್ರಷ್ಟಾಚಾರವನ್ನು ಅಂತಹ ನಿರ್ಣಾಯಕ ವಲಯದಲ್ಲಿ ನುಸುಳಲು ಅವಕಾಶ ಕಲ್ಪಿಸುವ ಮೂಲಕ ಜನರ ಜೀವಗಳನ್ನು ಅಪಾಯದಂಚಿಗೆ ತಳ್ಳಿದೆ.

ಈ ಸಾವುಗಳಿಗೆ ನೇರವಾಗಿ ರಾಜ್ಯ ಸರ್ಕಾರವನ್ನು ಹೊಣೆ ಮಾಡಬೇಕಾಗುತ್ತದೆ. ಈ ದ್ರಾವಣ ರಾಜ್ಯದ ಎಷ್ಟು ಜಿಲ್ಲೆಗಳಿಗೆ ಸರಬರಾಜಾಗಿದೆ, ಅಲ್ಲಿ ಎಷ್ಟು ಸಾವುಗಳು ಸಂಭವಿಸಿವೆ ಎಂಬುದರ ಬಗ್ಗೆ ಸಂಪೂರ್ಣ ತನಿಖೆ ನಡೆಸಬೇಕಾಗಿದೆ. ರಾಜ್ಯ ಸರ್ಕಾರ ಪ್ರಕರಣವನ್ನು ಎಸ್.ಐ.ಟಿ. ಗೆ ವಹಿಸುವ ಮೂಲಕ ಕೈತೊಳೆದುಕೊಂಡಿದೆ, ರಾಜ್ಯದ ಜನರಿಗೆ ಸತ್ಯಾ ಸತ್ಯತೆ ತಿಳಿಯಲು ಕೇಂದ್ರದ ಆರೋಗ್ಯ ಸಚಿವಾಲಯವೇ ಮದ್ಯಪ್ರವೇಶ ಮಾಡಿ ರಾಜ್ಯ ಸರ್ಕಾರಕ್ಕೆ ಸೂಕ್ತ ಮಾರ್ಗದರ್ಶನ ಮಾಡಿ ತನಿಖೆ ಮಾಡಿಸಲಿ.

ಇಂತಹ ಪ್ರಕರಣಗಳು ಪದೇ ಪದೇ ಮರುಕಳಿಸಿದರೆ, ಬಡಜನರು, ಕೂಲಿಕಾರ್ಮಿಕರು ಯಾವ ಭರವಸೆ ಇಟ್ಟುಕೊಂಡು ಸರ್ಕಾರಿ ಆಸ್ಪತ್ರೆಗಳಿಗೆ ಬರುತ್ತಾರೆ. ಆಸ್ಪತ್ರೆಗಳಿಗೆ ಬರುವ ತಾಯಿ-ಮಕ್ಕಳು ಸುರಕ್ಷಿತವಾಗಿ, ಆರೋಗ್ಯಭರಿತವಾಗಿ ಮನೆಗಳಿಗೆ ಮರಳುವಂತಾಗಬೇಕು. ಇಂತಹ ವಾತಾವರಣವನ್ನು ಕಲ್ಪಿಸುವ ಕೊಡುವುದು ಬದ್ದತೆಯಿರುವ ಪ್ರತಿಯೊಂದು ರಾಜ್ಯ ಸರ್ಕಾರದ ಕರ್ತವ್ಯವಾಗಬೇಕು ಮತ್ತು ಅದ್ಯತೆಯಾಗಬೇಕು. ಜನರಿಗೆ ಬಿಟ್ಟಿಭಾಗ್ಯಗಳ ಜೊತೆಗೆ ಉಚಿತ ಸಾವಿನ ಭಾಗ್ಯವೂ ಲಭಿಸದೇ ಇರಲಿ ಅನ್ನೋದು ನಮ್ಮ ಕಳಕಳಿಯಾಗಿದೆ.

ನಾನು ತಮ್ಮ ಮೂಲಕ ಮಾನ್ಯ ಆರೋಗ್ಯ ಸಚಿವರಲ್ಲಿ ವಿನಂತಿ ಮಾಡೋದೇನೆಂದರೆ, ದೇಶದಲ್ಲಿ ಮೆಡಿಕಲ್ ಹಾಗೂ ಔಷಧ ಮಾಫಿಯಾವನ್ನು ನಿಷ್ಕ್ರಿಯೆಗೊಳಿಸಬೇಕಾಗಿದೆ. ಜನರಿಗೆ ಜೀವ ಭದ್ರತೆಯ ಖಾತರಿ ನೀಡಬೇಕಾದ ಅವಶ್ಯಕತೆಯಿದೆ. ಜನರು ವಿಶ್ವಾಸವಿಟ್ಟು ಸರ್ಕಾರಿ ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ಬರುವಂತೆ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರಗಳಿಗೆ ಸನ್ಮಾನ್ಯ ಆರೋಗ್ಯ ಸಚಿವರು ಮಾರ್ಗದರ್ಶನ ನೀಡುವ ಮೂಲಕ ಅಮೂಲ್ಯ ಜೀವಗಳನ್ನು ರಕ್ಷಣೆ ಮಾಡಬೇಕು ಎಂದು ಹೇಳಿದರು.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

42 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

1 hour ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago