Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆಯ ಬಹು ಮುಖ್ಯ ಬೇಡಿಕೆ ತಿರಸ್ಕಾರ ಮಾಡಿದ ಕೇಂದ್ರ ಸರ್ಕಾರ : ಜಿಲ್ಲೆಯ ಜನತೆಗೆ ಬೇಸರ..!

---Advertisement---

 

ನವದೆಹಲಿ: ದಾವಣಗೆರೆ ಬೆಣ್ಣೆ ದೋಸೆಯನ್ನ ಯಾರು ತಿಂದಿಲ್ಲ ಹೇಳಿ. ಎಲ್ಲರೂ ಕೂಡ ಟೇಸ್ಟ್ ಮಾಡೋಣಾ‌ ಅಂತ ನೋಡಿ, ಆಮೇಲೆ ನಾಲಿಗೆಗೆ ರುಚಿ ಹತ್ತಿ ಅದನ್ನೇ ತಿನ್ನುತ್ತಿರುವವರು ಜಾಸ್ತಿ. ದೋಸೆ ಮೇಲೊಂದಿಷ್ಟು ಬೆಣ್ಣೆ, ಗಟ್ಟಿ ಚಟ್ನಿ ಆಹಾ ಅದರ ಟೇಸ್ಡು.. ಅದರ ಘಮಲು ನೆನೆಸಿಕೊಂಡರೇನೆ ಮೂಗಿಗೆ ಹೊಡೆಯುತ್ತೆ. ಅಷ್ಟು ಇಷ್ಟ ಎಲ್ಲರಿಗೂ. ಶತ ಶತಮಾನಗಳಿಂದಾನೂ ದಾವಣಗೆರೆ ಬೆಣ್ಣೆ ದೋಸೆ ಎಲ್ಲೆಡೆ ಫೇಮಸ್ ಆಗಿದೆ. ಈ ದೋಸೆ‌ಫೇಮಸ್ ಆದ ಕಾರಣ ದಾವಣಗೆರೆ ಮಂದಿ ಕೇಂದ್ರ ಸರ್ಕಾರದ ಮುಂದೆ ಬೇಡಿಕೆಯೊಂದನ್ನು ಇಟ್ಟಿದ್ದರು. ದಾವಣಗೆರೆ ಬೆಣ್ಣೆ ದೋಸೆ‌ನಗರಿ ಎಂಬ ಭೌಗೋಳಿಕ ಸೂಚ್ಯಂಕ ನೀಡಲು ಬೇಡಿಕೆ ಇಟ್ಟಿದ್ದರು. ಆದರೆ ಕೇಂದ್ರ ಸರ್ಕಾರ ಇದನ್ನು ತಿರಸ್ಕಾರ ಮಾಡಿದೆ. ಇದು ದಾವಣಗೆರೆ ಮಂದಿಗೆ ಬೇಸರ ಮಾಡಿದೆ.

ಕೇಂದ್ರ ಸರ್ಕಾರ ಇದಕ್ಕೆ ನೀಡಿರುವ ಕಾರಣ ದಾವಣಗೆರೆ ಬೆಣ್ಣೆ ದೋಸೆ ಅನ್ನೋದು ಕೇವಲ‌ ಒಂದು ಜಿಲ್ಲೆಗೆ ಮಾತ್ರ ಸೀಮಿತವಾಗಿಲ್ಲ. ಅದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿಯೂ ಕೂಡ ರೂಢಿಯಲ್ಲಿದೆ. ವಿವಿಧ ಜಿಲ್ಲೆಗಳಲ್ಲಿ ಈ ದೋಸೆಯನ್ನು ತಯಾರು ಮಾಡುತ್ತಾರೆ. ದಾವಣಗೆರೆ ಮಾತ್ರ ಸೇರುವುದಿಲ್ಲ. ಹೀಗಾಗಿ ಇದಕ್ಕೆ ಜಿಯಾಗ್ರಾಫಿಕಲ್ ಟ್ಯಾಗ್ ಎಂದು ದಾವಣಗೆರೆಗೆ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕಾ ರಾಜಗಯ ಸಚಿವ ಜಿತಿನ್ ಪ್ರಸಾದ್ ಉತ್ತರ ನೀಡಿದ್ದಾರೆ.

ದಾವಣಗೆರೆಯ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಅವರಿಂದ ಕೇಂದ್ರ ಸರ್ಕಾರಕ್ಕೆ ಈ ಬೇಡಿಕೆ ಇಡಲಾಗಿತ್ತು. ಈ ಬಗ್ಗೆ ಪ್ರಭಾ ಮಲ್ಲಿಕಾರ್ಜುನ ಮಾತನಾಡು, ಈಗಾಗಲೇ ದಾವಣಗೆರೆಯ ಉಪ ಆಯುಕ್ತರಿಗೆ ಬೌಗೋಳಿಕ ಸೂಚ್ಯಂಕದ ನೋಂದಣಿ ಇಲಾಖೆಗೆ ಒಂದು ಅರ್ಜಿ ಸಲ್ಲಿಸಲು ಹೇಳಿದ್ದೇನೆ. ಈಗಾಗಲೇ ದೇಶದ ಎಲ್ಲಾ ಕಡೆ ಮಾರಾಟವಾಗುವ ರಸಗುಲ್ಲಾ, ಚಿಕ್ಕಿಗಳು ಒಂದೊಂದು ನಗರಕ್ಕೆ ಭೌಗೋಳಿಕ ಸೂಚ್ಯಂಕವಾಗಿ ಗುರುತಿಸಿಕೊಂಡಿವೆ. ಅದೇ ರೀತಿ ಬೆಣ್ಣೆ ದೋಸೆ ಕೂಡ. ಬೇರೆ ಕಡೆಯಲ್ಲೆಲ್ಲಾ ತಯಾರಾಗುತ್ತದೆ ಎಂಬ ಕಾರಣಕ್ಕೆ ಜಿಐ ಟ್ಯಾಗ್ ಕೊಡಲ್ಲ ಎಂದು ಹೇಳುವುದು ಸರಿಯಲ್ಲ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment