Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ವಿಧಾನಸಭೆಯಲ್ಲಿ ಕೇಂದ್ರ ಸರ್ಕಾರದ ನೀಟ್ ಪರೀಕ್ಷೆ ರದ್ದು..!

---Advertisement---

 

ಬೆಂಗಳೂರು: ಕೇಂದ್ರ ಸರ್ಕಾರ ಆಯೋಜನೆ ಮಾಡುವ ನೀಟ್ ಪರೀಕ್ಷೆ ರದ್ದತಿಯ ಬಗ್ಗೆ ಇಂದು ವಿಧಾನಮಂಡಲ ಅಧಿವೇಶನದಲ್ಲಿ ಅನುಮೋದನೆ ಪಡೆದಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಯನ್ನು ಪಡೆಯಲಾಗಿತ್ತು. ಇದೀಗ ಅಧಿವೇಶನದಲ್ಲಿ ರಾಜ್ಯ ಸರ್ಕಾರ ನಿರ್ಣಯ ಮಂಡಿಸಿ ಅನುಮೋದನೆ ಪಡೆದಿದೆ.

ಕೇಂದ್ರ ಸರ್ಕಾರದ ನೀಟ್ ಪರೀಕ್ಷೆ ಹಾಗೂ ಒಂದು ದೇಶ ಒಂದು ಎಲೆಕ್ಷನ್ ತೀರ್ಮಾನಗಳನ್ನು ವಿರೋಧಿಸಲು ಸಚಿವ ಸಂಪುಟದಲ್ಲಿ ತೀರ್ಮಾನ ತೆಗೆದುಕೊಳ್ಳಲಾಯ್ತು. ವಿಧಾನಸಭೆಯಲ್ಲಿ ಸಚಿವ ಶರಣು ಪ್ರಕಾಶ್ ಪಾಟೀಲ್ ಅವರು ನೀಟ್ ರದ್ದು ನಿರ್ಣಯ ಮಂಡನೆ ಮಾಡಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಇದನ್ನು ಮಂಡಿಸಿದರು. ಒಮ್ ಮೇಷನ್ ಒನ್ ಎಲೆಕ್ಷನ್ ನಿರ್ಣಯವನ್ನು ವೊಧಾನ ಪರಿಷತ್ ನಲ್ಲಿ ಸಚಿವ ಹೆಚ್ ಕೆ ಪಾಟೀಲ್ ಮಂಡನೆ ಮಾಡಿದರು. ಎರಡು ಕಡೆಯಲ್ಲೂ ನೀಟ್ ಹಾಗೂ ಒನ್ ನೇಷನ್, ಒನ್ ಎಲೆಕ್ಷನ್ ಅನುಮೋದನೆ ಸಿಕ್ಕಿದೆ.

ಒನ್ ನೇಷನ್, ಒನ್ ಎಲೆಕ್ಷನ್ ವಿರುದ್ಧವಾಗಿ ವಿಧಾನಪರಿಷತ್‌ನಲ್ಲಿ ನಿರ್ಣಯ ಮಂಡನೆ ಮಾಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಈ ರೀತಿಯ ಚುನಾವಣೆಗೆ ನಮ್ಮ ವಿರೋಧ ಇದೆ. ಒಂದು ದೇಶ, ಒಂದು ಚುನಾವಣೆಯಿಂದ ಪ್ರಜಾಪ್ರಭುತ್ವಕ್ಕೆ ಮಾರಕ. ಏಕರೂಪ ಚುನಾವಣೆ ರಾಷ್ಟ್ರೀಯವಾಗಿ ಸಮಸ್ಯೆ ಆಗಲಿದೆ. ಸ್ಥಳೀಯವಾಗಿ ಹಲವು ತಾಂತ್ರಿಕ ಸಮಸ್ಯೆ ಆಗಲಿದೆ. ಇದನ್ನು ಅನುಷ್ಠಾನ ಮಾಡಬಾರದು ಅಂತ‌ ಕೇಂದ್ರದ ಮೇಲೆ ಒತ್ತಡ ಹಾಕಬೇಕು ಅಂತ ಸದಸ್ಯರಿಗೆ ಮನವಿ ಮಾಡಿದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment