Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮತಾಂತರ ಕಾಯ್ದೆ ಕೇವಲ ದುರುದ್ಧೇಶ : ಸಿದ್ದರಾಮಯ್ಯ ಕಿಡಿ

Facebook
Twitter
Telegram
WhatsApp

ಬೆಳಗಾವಿ: ಇಂದಿನಿಂದ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಅಧಿವೇಶನಕ್ಕೆ ಹೋಗುವ ಮುನ್ನ ಮಾಜಿ ಸಿಎಂ ಸಿದ್ದರಾಮಯ್ಯ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಕಾಂಗ್ರೆಸ್ ಶಾಸಕಿ ಅಂಜಲಿ ಲಿಂಬಾಳ್ಕರ್ ಜೊತೆ ಪಾದಯಾತ್ರೆಯಲ್ಲಿ ಗಮನ ಸೆಳೆದರು.

ಇದೇ ವೇಳೆ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಲು ಹೊರಟಿರುವ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದರು. ಸಂವಿಧಾನದ ಪ್ರಕಾರ ಯಾರಾದರೂ ಒಂದು ಧರ್ಮವನ್ನು ಇಷ್ಟಪಟ್ಟು ಅನುಕರಣೆ ಮಾಡ್ತೀವಿ ಅಂದ್ರೆ ಅದಕ್ಕೆ ಅನುಮತಿ ಇದೆ. ಯಾರನ್ನು ಬಲವಂತವಾಗಿ ಮತಾಂತರ ಮಾಡಬಾರದು ಅಷ್ಟೆ ಎಂದಿದ್ದಾರೆ.

 

ಬಲವಂತವಾಗಿ ಮತಾಂತರ ಮಾಡಬಾರದು ಅಂತ ಇದೆ. ಹೀಗಿದ್ದರು ಈ ಕಾಯ್ದೆ ತರುವ ಅಗತ್ಯವೇನಿದೆ. ಬಿಜೆಪಿಯವರು ದುರುದ್ದೇಶದಿಂದ ಕಾಯ್ದೆ ಜಾರಿಗೆ ತರಲು ಹೊರಟಿದ್ದಾರೆ. ನಾವೂ ಇದಕ್ಕೆ ಒಪ್ಪಿಗೆ ನೀಡಲ್ಲ ಎಂದಿದ್ದಾರೆ.

ಇನ್ನು ಒಂದು ಸಮುದಾಯದ ಬಗ್ಗೆ ಕೈ ನಾಯಕರು ಮಾತನಾಡುತ್ತಿದ್ದಾರೆಂಬ ಬಿಜೆಪಿ ಆರೋಪಕ್ಕೆ ಉತ್ತರ ನೀಡಿದ ಸಿದ್ದರಾಮಯ್ಯ, ನಾವೂ ಕೇವಲ ಒಂದು ಸಮುದಾಯ, ಧರ್ಮದ ಪರ ಇದ್ದೇವೆಂದು ಹೇಳುವುದು ಸರಿಯಲ್ಲ. ನಾವೂ ಎಲ್ಲರ ಪರವಾಗಿಯೂ ಇದ್ದೇವೆ. ಜಾತ್ಯತೀತತೆಯ ಬಗ್ಗೆ ನಂಬಿಕೆ ಇಟ್ಟವರು. ಜನ ಸಾಮಾನ್ಯರು ಸಂಕಷ್ಟದಲ್ಲಿದ್ದಾರೆ. ಅವರ ಪರ ಮಾತಾಡುತ್ತೇವೆ. ಪ್ರವಾಹದ ಬಗ್ಗೆ ಮಾತಾಡುತ್ತೇವೆ. ಪರ್ಸಂಟೇಜ್ ಬಗ್ಗೆಯೂ ಮಾತಾಡುತ್ತೇವೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗಕ್ಕೆ ಆಗಮಿಸಿದ ಪ್ರಿಯಾಂಕ ಗಾಂಧಿ :  ಹೆಲಿಕ್ಯಾಪ್ಟರ್ ತಪಾಸಣೆ ಮಾಡಿದ ಅಧಿಕಾರಿಗಳು

  ಚಿತ್ರದುರ್ಗ. ಏ.23: ಚಿತ್ರದುರ್ಗ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ  ಚಿತ್ರದುರ್ಗ ನಗರಕ್ಕೆ ಆಗಮಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಅವರು ಪ್ರಯಾಣಿಸಿದ ಹೆಲಿಕ್ಯಾಪ್ಟರ್‍ ಅನ್ನು  ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ  ಸಹಾಯಕ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್

ಚಿತ್ರದುರ್ಗದಲ್ಲಿ ಸಡಗರ ಸಂಭ್ರಮದಿಂದ ನಡೆದ ಶ್ರೀ ವೀರಭದ್ರ ದೇವರ ಗುಗ್ಗುಳ ಮತ್ತು ಅಗ್ನಿಕುಂಡ ಕಾರ್ಯಕ್ರಮ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಏ. 23 :  ನಗರದ ನೀಲಕಂಠೇಶ್ವರ ದೇವಾಲಯದ ಆವರಣದಲ್ಲಿನ ವೀರಶೈವ ಸಮಾಜದವತಿಯಿಂದ ಇಂದು ಹರಪನಹಳ್ಳಿಯ ಪಟ್ಟಣದ

ಬಿಜೆಪಿ – ಜೆಡಿಎಸ್ ಮೈತ್ರಿಯಿಂದ ಗೋವಿಂದ ಕಾರಜೋಳರವರ ಗೆಲುವು ನಿಶ್ಚಿತ : ಬಿ.ಕಾಂತರಾಜ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.23  : ಚಿತ್ರದುರ್ಗ : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ. ಅಭ್ಯರ್ಥಿ ಗೋವಿಂದ ಕಾರಜೋಳರವರ ಪರ

error: Content is protected !!