Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ರಾಹುಲ್ ಗಾಂಧಿಗೆ 200 ರೂ. ದಂಡ ವಿಧಿಸಿದ ಕೋರ್ಟ್ : ಪ್ರಕರಣ ಏನು ಗೊತ್ತಾ ?

---Advertisement---

 

ಸುದ್ದಿಒನ್

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರಿಗೆ ಮತ್ತೆ ನ್ಯಾಯಾಲಯದ ಸಂಕಷ್ಟಗಳು ಎದುರಾಗಿವೆ. ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಅವರ ಬಗ್ಗೆ ಅನುಚಿತ ಹೇಳಿಕೆ ನೀಡಿದ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರ ಗೈರುಹಾಜರಿಯನ್ನು ಲಕ್ನೋ ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿದೆ. ನ್ಯಾಯಾಧೀಶರು ಅವರಿಗೆ 200 ರೂ. ದಂಡ ವಿಧಿಸಿ ಏಪ್ರಿಲ್ 14 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಆದೇಶಿಸಿದೆ. ವೀರ್ ಸಾವರ್ಕರ್ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಲಕ್ನೋ ನ್ಯಾಯಾಲಯವು ರಾಹುಲ್ ಗಾಂಧಿಗೆ ಈಗಾಗಲೇ ಹಲವಾರು ಬಾರಿ ಸಮನ್ಸ್ ಜಾರಿ ಮಾಡಿ, ನ್ಯಾಯಾಲಯದ ಮುಂದೆ ಹಾಜರಾಗಲು ಆದೇಶಿಸಲಾಗಿತ್ತು. ಆದರೂ ಅವರು ಹಾಜರಾಗದೇ ಇದ್ದ ಕಾರಣದಿಂದಾಗಿ ಕೋರ್ಟ್ ದಂಡ ವಿಧಿಸಿದೆ.

2022 ರ ಮಹಾರಾಷ್ಟ್ರ ಚುನಾವಣಾ ಪ್ರಚಾರದ ಸಮಯದಲ್ಲಿ ರಾಹುಲ್ ಗಾಂಧಿಯವರು ಸಾವರ್ಕರ್ ಬಗ್ಗೆ ನೀಡಿದ ಹೇಳಿಕೆಯ ಮೇಲೆ ಈ ಪ್ರಕರಣ ದಾಖಲಾಗಿತ್ತು. ರಾಹುಲ್ ಗಾಂಧಿಯವರು ಸಾವರ್ಕರ್ ಅವರನ್ನು ಬ್ರಿಟಿಷರ ಸೇವಕ ಎಂದು ಟೀಕೆ ಮಾಡಿದ್ದರು. ಅವರ ಈ ಹೇಳಿಕೆಗಳು ಭಾರಿ ಕೋಲಾಹಲಕ್ಕೆ ಕಾರಣವಾಗಿತ್ತು. ರಾಹುಲ್ ಗಾಂಧಿ ಇತಿಹಾಸವನ್ನು ತಿರುಚಿದ್ದಾರೆ ಮತ್ತು ಸಾವರ್ಕರ್ ಅವರಂತಹ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರನ್ನು ಅಗೌರವಿಸಿದ್ದಾರೆ ಎಂಬ ಟೀಕೆ ಇತ್ತು. ರಾಹುಲ್ ಅವರು ನೀಡಿದ ಈ ಹೇಳಿಕೆಗಳಿಂದ ಕಾಂಗ್ರೆಸ್ ಮತ್ತು ಬಿಜೆಪಿ ಬೆಂಬಲಿಗರ ನಡುವೆ ಬಿಸಿ ಬಿಸಿ ಚರ್ಚೆಗೆ ಕಾರಣವಾಯಿತು.

ನೃಪೇಂದ್ರ ಪಾಂಡೆ ಎಂಬ ವಕೀಲರು ನೀಡಿದ ದೂರಿನ ಮೇರೆಗೆ ಲಕ್ನೋದಲ್ಲಿ ಪ್ರಕರಣ ದಾಖಲಾಗಿದೆ. ಸಿಆರ್‌ಪಿಸಿಯ ಸೆಕ್ಷನ್ 156(3) ರ ಅಡಿಯಲ್ಲಿ ಪಾಂಡೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ರಾಹುಲ್ ಗಾಂಧಿಯವರ ವರ್ತನೆಯ ಬಗ್ಗೆ ಆಕ್ರೋಶವನ್ನು ವ್ಯಕ್ತಪಡಿಸಿತು. ಏಪ್ರಿಲ್ 14 ರಂದು ರಾಹುಲ್ ನ್ಯಾಯಾಲಯಕ್ಕೆ ಹಾಜರಾಗದಿದ್ದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ನ್ಯಾಯಾಲಯ ಎಚ್ಚರಿಸಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...