Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇನ್ನೇನು ದ್ರಾಕ್ಷಿ ಮಾರುಕಟ್ಟೆಗೆ ಸಾಗಿಸಬೇಕೆನ್ನುವಾಗಲೇ ಬೆಳೆ ನಾಶ : ಮನನೊಂದು ರೈತ ಆತ್ಮಹತ್ಯೆ..!

---Advertisement---

ವಿಜಯಪುರ: ಭೂಮಿಯನ್ನೇ ನಂಬಿ ಬದುಕುವ ರೈತರಿಗೆ ಬೆಳೆ ಕೈಕೊಟ್ಟಾಗ, ಚಿಂತೆಯೊಂದೆ ಅವರ ದಾರಿಯಾಗಿ ಬಿಡುತ್ತದೆ. ಹಗಲು ರಾತ್ರಿಯೆನ್ನದೆ ಬೆಳೆಗಾಗಿ ಸಮಯ ಕೊಟ್ಟು, ಶ್ರಮವಹಿಸಿ ಬೆಳೆದ ಬೆಳೆ ಕೈಸೇರದೆ ಹೋದಾಗ ಆ ನೋವಲ್ಲೇ ಅದೆಷ್ಟೋ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದೋಗ ವಿಜಯಪುರದಲ್ಲೂ ಅಂಥದ್ದೇ ಘಟನೆ ನಡೆದಿದೆ.

ಮನೋಹರ್ ಆಯತವಾಡ ಎಂಬ ರೈತ ಕಷ್ಟಪಟ್ಟು, ಸಾಲ ಸೋಲ ಮಾಡಿ ದ್ರಾಕ್ಷಿ ಬೆಳೆಯನ್ನು ಬೆಳೆದಿದ್ದ. 55 ವರ್ಷ ವಯಸ್ಸಲ್ಲೂ ಆ ಬೆಳೆಗಾಗಿ ಶ್ರಮವಹಿಸಿದ್ದರು. ಬೆಳೆಯೂ ತುಂಬಾ ಚೆನ್ನಾಗಿ ಬಂದಿತ್ತು. ಬೆಳೆ ನೋಡಿ ಖುಷಿ ಪಟ್ಟಿದ್ದರು. ಸಾಲ ಎಲ್ಲಾ ತೀರುತ್ತೆ ಎಂಬ ನಿರೀಕ್ಷೆ ಇಟ್ಟುಕೊಂಡಿದ್ದರು. ಮಾರುಕಟ್ಟೆಗೆ ದ್ರಾಕ್ಷಿಯನ್ನು ಸಾಗಿಸಿದರೆ ಒಳ್ಳೆ ಲಾಭ ಬರುತ್ತೆ ಎಂದು ಭರವಸೆ ಇಟ್ಟುಕೊಂಡಿದ್ದ ರೈತ ಇಂದು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಮನೋಹರ್ ಆಯತವಾಡ, ಸಂಪಾಗಿ ಬೆಳೆದ ದ್ರಾಕ್ಷಿ ಬೆಳೆಗೆ ಅವೈಜ್ಞಾನಿಕವಾಗಿ ಗೊಬ್ಬರ ಹಾಕಿದ್ದಾರೆ. ಇದರಿಂದ ನೋಡ ನೋಡುತ್ತಲೇ ದ್ರಾಕ್ಷಿ ಬೆಳೆ ಒಣಗಿ ಹೋಗಿದೆ. ಇದರಿಂದ ರೈತ ಮನೋಹರ್ ಕಂಗಲಾಗಿದ್ದಾರೆ. ಯಾಕಂದ್ರೆ ದ್ರಾಕ್ಷಿ ಬೆಳೆಗೆ ಅಂತ ಐದು ಲಕ್ಷ ಸಾಲ ಮಾಡಿಕೊಂಡಿದ್ದರಂತೆ. ದ್ರಾಕ್ಷಿ ಬೆಳೆಯೂ ಇಲ್ಲ, ಸಾಲ ತೀರಿಸುವ ಮಾರ್ಗವೂ ಕಾಣದೆ ತೋಟದ ಮನೆಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಿಕೋಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...