Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇನ್ನೇನು ದ್ರಾಕ್ಷಿ ಮಾರುಕಟ್ಟೆಗೆ ಸಾಗಿಸಬೇಕೆನ್ನುವಾಗಲೇ ಬೆಳೆ ನಾಶ : ಮನನೊಂದು ರೈತ ಆತ್ಮಹತ್ಯೆ..!

Facebook
Twitter
Telegram
WhatsApp

ವಿಜಯಪುರ: ಭೂಮಿಯನ್ನೇ ನಂಬಿ ಬದುಕುವ ರೈತರಿಗೆ ಬೆಳೆ ಕೈಕೊಟ್ಟಾಗ, ಚಿಂತೆಯೊಂದೆ ಅವರ ದಾರಿಯಾಗಿ ಬಿಡುತ್ತದೆ. ಹಗಲು ರಾತ್ರಿಯೆನ್ನದೆ ಬೆಳೆಗಾಗಿ ಸಮಯ ಕೊಟ್ಟು, ಶ್ರಮವಹಿಸಿ ಬೆಳೆದ ಬೆಳೆ ಕೈಸೇರದೆ ಹೋದಾಗ ಆ ನೋವಲ್ಲೇ ಅದೆಷ್ಟೋ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದೋಗ ವಿಜಯಪುರದಲ್ಲೂ ಅಂಥದ್ದೇ ಘಟನೆ ನಡೆದಿದೆ.

ಮನೋಹರ್ ಆಯತವಾಡ ಎಂಬ ರೈತ ಕಷ್ಟಪಟ್ಟು, ಸಾಲ ಸೋಲ ಮಾಡಿ ದ್ರಾಕ್ಷಿ ಬೆಳೆಯನ್ನು ಬೆಳೆದಿದ್ದ. 55 ವರ್ಷ ವಯಸ್ಸಲ್ಲೂ ಆ ಬೆಳೆಗಾಗಿ ಶ್ರಮವಹಿಸಿದ್ದರು. ಬೆಳೆಯೂ ತುಂಬಾ ಚೆನ್ನಾಗಿ ಬಂದಿತ್ತು. ಬೆಳೆ ನೋಡಿ ಖುಷಿ ಪಟ್ಟಿದ್ದರು. ಸಾಲ ಎಲ್ಲಾ ತೀರುತ್ತೆ ಎಂಬ ನಿರೀಕ್ಷೆ ಇಟ್ಟುಕೊಂಡಿದ್ದರು. ಮಾರುಕಟ್ಟೆಗೆ ದ್ರಾಕ್ಷಿಯನ್ನು ಸಾಗಿಸಿದರೆ ಒಳ್ಳೆ ಲಾಭ ಬರುತ್ತೆ ಎಂದು ಭರವಸೆ ಇಟ್ಟುಕೊಂಡಿದ್ದ ರೈತ ಇಂದು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಮನೋಹರ್ ಆಯತವಾಡ, ಸಂಪಾಗಿ ಬೆಳೆದ ದ್ರಾಕ್ಷಿ ಬೆಳೆಗೆ ಅವೈಜ್ಞಾನಿಕವಾಗಿ ಗೊಬ್ಬರ ಹಾಕಿದ್ದಾರೆ. ಇದರಿಂದ ನೋಡ ನೋಡುತ್ತಲೇ ದ್ರಾಕ್ಷಿ ಬೆಳೆ ಒಣಗಿ ಹೋಗಿದೆ. ಇದರಿಂದ ರೈತ ಮನೋಹರ್ ಕಂಗಲಾಗಿದ್ದಾರೆ. ಯಾಕಂದ್ರೆ ದ್ರಾಕ್ಷಿ ಬೆಳೆಗೆ ಅಂತ ಐದು ಲಕ್ಷ ಸಾಲ ಮಾಡಿಕೊಂಡಿದ್ದರಂತೆ. ದ್ರಾಕ್ಷಿ ಬೆಳೆಯೂ ಇಲ್ಲ, ಸಾಲ ತೀರಿಸುವ ಮಾರ್ಗವೂ ಕಾಣದೆ ತೋಟದ ಮನೆಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಿಕೋಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೂವಿನ ಹಡಗಲಿ | ಬೂದನೂರಿನಲ್ಲಿ ವಿಜೃಂಭಣೆಯಿಂದ ಜರುಗಿದ ಶ್ರೀ ವೀ­ರಭದ್ರೇಶ್ವರ ಜಾತ್ರೆ

ಸುದ್ದಿಒನ್, ವಿಜಯನಗರ, ಹೂವಿನ ಹಡಗಲಿ, ಮೇ. 09  : ತಾಲ್ಲೂಕಿನ ಬೂದನೂರು ಗ್ರಾಮದಲ್ಲಿ ಗುರುವಾರ ಸಂಜೆ 5 ಗಂಟೆಗೆ ವೀ­ರಭದ್ರೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಮಹಾರಥೋತ್ಸವ ಅನೇಕ ಭಕ್ತ ಸಮೂಹದ ನಡುವೆ ವಿಜೃಂಭಣೆಯಿಂದ ಜರುಗಿತು.

ನಾಳೆಯಿಂದ ಮೇ.17ರವರೆಗೂ ಎಲ್ಲಾ ಜಿಲ್ಲೆಗಳಲ್ಲೂ ಮಳೆಯ ಅಬ್ಬರ..!

ಕಳೆದ ಮೂರ್ನಾಲ್ಕು ದಿನದಿಂದ ವರುಣರಾಯನ ದರ್ಶನವಾಗುತ್ತಿದೆ. ಆದರೂ ಕೆಲವೊಂದು ಕಡೆ ಬಿಸಿ ಗಾಳಿಯ ಅನುಭವ ಮಾತ್ರ ಕಡಿಮೆಯಾಗಿಲ್ಲ. ಇಂದು ಸಂಜೆ ವೇಳೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆಯಾಗಿದೆ. ಇದರಿಂದ ವಾಹನ ಸವಾರರು, ಕೆಲಸಕ್ಕೆ

ಚಿತ್ರದುರ್ಗ | ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಎಸ್‌ಎಸ್‌ಎಲ್‌ಸಿ ಫಲಿತಾಂಶ : 100 ಕ್ಕೆ 100 ಫಲಿತಾಂಶ ಪಡೆದ 13 ಶಾಲೆಗಳು

ಸುದ್ದಿಒನ್, ಚಿತ್ರದುರ್ಗ, ಮೇ. 09 :   ಜಿಲ್ಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ 35 ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಏಕಲವ್ಯ ಮಾದರಿ ವಸತಿ ಶಾಲೆಗಳ 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ

error: Content is protected !!