ಇನ್ನೇನು ದ್ರಾಕ್ಷಿ ಮಾರುಕಟ್ಟೆಗೆ ಸಾಗಿಸಬೇಕೆನ್ನುವಾಗಲೇ ಬೆಳೆ ನಾಶ : ಮನನೊಂದು ರೈತ ಆತ್ಮಹತ್ಯೆ..!

ವಿಜಯಪುರ: ಭೂಮಿಯನ್ನೇ ನಂಬಿ ಬದುಕುವ ರೈತರಿಗೆ ಬೆಳೆ ಕೈಕೊಟ್ಟಾಗ, ಚಿಂತೆಯೊಂದೆ ಅವರ ದಾರಿಯಾಗಿ ಬಿಡುತ್ತದೆ. ಹಗಲು ರಾತ್ರಿಯೆನ್ನದೆ ಬೆಳೆಗಾಗಿ ಸಮಯ ಕೊಟ್ಟು, ಶ್ರಮವಹಿಸಿ ಬೆಳೆದ ಬೆಳೆ ಕೈಸೇರದೆ ಹೋದಾಗ ಆ ನೋವಲ್ಲೇ ಅದೆಷ್ಟೋ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದೋಗ ವಿಜಯಪುರದಲ್ಲೂ ಅಂಥದ್ದೇ ಘಟನೆ ನಡೆದಿದೆ.

ಮನೋಹರ್ ಆಯತವಾಡ ಎಂಬ ರೈತ ಕಷ್ಟಪಟ್ಟು, ಸಾಲ ಸೋಲ ಮಾಡಿ ದ್ರಾಕ್ಷಿ ಬೆಳೆಯನ್ನು ಬೆಳೆದಿದ್ದ. 55 ವರ್ಷ ವಯಸ್ಸಲ್ಲೂ ಆ ಬೆಳೆಗಾಗಿ ಶ್ರಮವಹಿಸಿದ್ದರು. ಬೆಳೆಯೂ ತುಂಬಾ ಚೆನ್ನಾಗಿ ಬಂದಿತ್ತು. ಬೆಳೆ ನೋಡಿ ಖುಷಿ ಪಟ್ಟಿದ್ದರು. ಸಾಲ ಎಲ್ಲಾ ತೀರುತ್ತೆ ಎಂಬ ನಿರೀಕ್ಷೆ ಇಟ್ಟುಕೊಂಡಿದ್ದರು. ಮಾರುಕಟ್ಟೆಗೆ ದ್ರಾಕ್ಷಿಯನ್ನು ಸಾಗಿಸಿದರೆ ಒಳ್ಳೆ ಲಾಭ ಬರುತ್ತೆ ಎಂದು ಭರವಸೆ ಇಟ್ಟುಕೊಂಡಿದ್ದ ರೈತ ಇಂದು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಮನೋಹರ್ ಆಯತವಾಡ, ಸಂಪಾಗಿ ಬೆಳೆದ ದ್ರಾಕ್ಷಿ ಬೆಳೆಗೆ ಅವೈಜ್ಞಾನಿಕವಾಗಿ ಗೊಬ್ಬರ ಹಾಕಿದ್ದಾರೆ. ಇದರಿಂದ ನೋಡ ನೋಡುತ್ತಲೇ ದ್ರಾಕ್ಷಿ ಬೆಳೆ ಒಣಗಿ ಹೋಗಿದೆ. ಇದರಿಂದ ರೈತ ಮನೋಹರ್ ಕಂಗಲಾಗಿದ್ದಾರೆ. ಯಾಕಂದ್ರೆ ದ್ರಾಕ್ಷಿ ಬೆಳೆಗೆ ಅಂತ ಐದು ಲಕ್ಷ ಸಾಲ ಮಾಡಿಕೊಂಡಿದ್ದರಂತೆ. ದ್ರಾಕ್ಷಿ ಬೆಳೆಯೂ ಇಲ್ಲ, ಸಾಲ ತೀರಿಸುವ ಮಾರ್ಗವೂ ಕಾಣದೆ ತೋಟದ ಮನೆಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಿಕೋಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

38 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

1 hour ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago