Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಕ್ಕಳ ಕುತೂಹಲ ಬೆಳಕಿನ ವೇಗಕ್ಕಿಂತ ತೀಕ್ಷ್ಣ : ಶ್ರೀ ಇಮ್ಮಡಿ ಸಿದ್ಧರಾಮೇಶ್ವರಸ್ವಾಮಿ

Facebook
Twitter
Telegram
WhatsApp

ಚಿತ್ರದುರ್ಗ : ಮಕ್ಕಳ ಕುತೂಹಲ ಬೆಳಕಿನ ವೇಗಕ್ಕಿಂತ ತೀಕ್ಷ್ಣವಾಗಿರುತ್ತವೆ ಎಂದು ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರಸ್ವಾಮಿ ತಿಳಿಸಿದರು.

ನಗರದ ಎಸ್‍ಜೆಎಸ್ ಜ್ಞಾನಪೀಠ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಿದ್ಧರಾಮೇಶ್ವರ ಶಾಲಾ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬೇಸಿಗೆ ಸಂಭ್ರಮದಲ್ಲಿ ಮಾತನಾಡಿದ ಅವರು, ಮಕ್ಕಳ ಮನಸ್ಸು ಶರೀರ ಸ್ವಾತಂತ್ರ್ಯವಾಗಿರಬೇಕು ಮತ್ತು ಸಂಶೋಧನೆ ಕುತೂಹಲ ಕೌತುಕಗಳಿಗೆ ಯಾವಾಗಲೂ ಆಕರ್ಷಿತರಾಗಿದ್ದರೆ ಏನನ್ನಾದರೂ ಸಾಧಿಸುತ್ತಾರೆ ಎಂದು ಹೇಳಿದರು.

ಮಕ್ಕಳು ತಮ್ಮನ್ನು ತಾವು ಪ್ರೀತಿಸುತ್ತಾ ತಮಗೆ ಅಗತ್ಯವಿರುವ ವಸ್ತುಗಳನ್ನು ಯಾವ ರೀತಿ ರಕ್ಷಿಸಿಕೊಳ್ಳುತ್ತೀರೋ ಹಾಗೆಯೇ ಆರೋಗ್ಯವನ್ನು ರಕ್ಷಿಸಿಕೊಳ್ಳಬೇಕು. ಹಿರಿಯರು ಆಹಾರದಲ್ಲಿ ದೇಹಕ್ಕೆ ಅಗತ್ಯವಿರುವ ತರಕಾರಿ, ಕಾಳು, ಸೊಪ್ಪುಗಳನ್ನು ಹಾಕಿ ಆಹಾರ ತಯಾರಿಸುತ್ತಾರೆ. ಆ ಆಹಾರದಲ್ಲಿ ಯಾವುದನ್ನು ಕಡೆಗೆ ಹಾಕದೆ ಎಲ್ಲವನ್ನೂ ಸೇವಿಸಬೇಕು ಎಂದು ತಿಳಿಸಿದರು.

ಬೇಸಿಗೆಯಲ್ಲಿ ಮಿತ ಆಹಾರವನ್ನು ಸೇವಿಸಬೇಕು, ಹೆಚ್ಚು ಆಹಾರ ವಿಷಕಾರಕವಾಗಿರುತ್ತದೆ. ಭೂಮಿಗೆ ದ್ರವ್ಯ ಹೇಗೆ ಅಗತ್ಯವೋ ಹಾಗೆಯೇ ದೇಹಕ್ಕೆ ದ್ರವ್ಯಮುಖ್ಯ, ದೇಹಕ್ಕೂ ಬೇಕಾಗುತ್ತದೆ. ಹಲವು ರೋಗಗಳಿಗೆ ಜಲ ಔಷಧವಿದ್ದಂತೆ ಹಾಗಾಗಿ ಹೆಚ್ಚು ಜಲವನ್ನು ಬೇಸಿಗೆ ಸಂದರ್ಭದಲ್ಲಿ ಸೇವಿಸಬೇಕು. ಹಸಿ ತರಕಾರಿಯಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗಿ ಇರುವುದರಿಂದ ಅಂತಹ ತರಕಾರಿಯನ್ನು ಮಸಾಲೆ ಪದಾರ್ಥವು ಆರೋಗ್ಯಕ್ಕೆ ಒಳ್ಳೆಯದಲ್ಲ. ಅಂತಹ ಪದಾರ್ಥಗಳನ್ನು ಸೇವಿಸುವುದನ್ನು ಕಡಿಮೆ ಮಾಡಬೇಕು ಎಂದು ಹೇಳಿದರು.

ಭವಿಷ್ಯಕ್ಕೆ ಮಕ್ಕಳು ಶಿಕ್ಷಣವನ್ನು ಚೆನ್ನಾಗಿ ಕಲಿಯಬೇಕು. ಶಿಕ್ಷಣದಲ್ಲಿ ಏಕಾಗ್ರತೆಗೆ ಧ್ಯಾನ ಮಾಡಬೇಕು ಆಗ ಏಕಾಗ್ರತೆ ಬರುತ್ತದೆ. ಏಕಾಗ್ರತೆಯಿಂದ ಅಧ್ಯಯನ ಮಾಡಿದರೆ ಚಟುವಟಿಕೆಯಿಂದಿರಲು, ಶಿಕ್ಷಣದಲ್ಲಿ ಯಶಸ್ವಿ ಸಾಧಿಸಲು ಸಾಧ್ಯವೆಂದು ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ.ಧನಂಜಯಪ್ಪ ಮಾತನಾಡಿ ಬೇಸಿಗೆಯ ಹುಣ್ಣಿಮೆ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದ ಜನತೆ ಹೆಚ್ಚು ಸಂಭ್ರಮಿಸುತ್ತಿದ್ದರು. ಬೆಳದಿಂಗಳಲ್ಲಿ ಕೋಲಾಟ, ಭಜನೆ ಸೇರಿದಂತೆ ಅನೇಕ ಆಟೋಪ ಆಟಗಳನ್ನು ಮತ್ತು ಕಲೆಗಳನ್ನು ವ್ಯಕ್ತಪಡಿಸುತ್ತಿದ್ದರು. ಅಂತಹ ಸೊಬಗಿನ ಸಂಭ್ರಮಗಳು ಗ್ರಾಮೀಣ ಪ್ರದೇಶದಲ್ಲಿ ಜರುಗಬೇಕು ಎಂದು ಹೇಳಿದರು.

ಎಸ್.ಜೆ.ಎಸ್. ಜ್ಞಾನಪೀಠದ ಕಾರ್ಯದರ್ಶಿ ಡಿ.ಸಿ.ಮೋಹನ್ ಮಾತನಾಡಿ, ಮನುಷ್ಯ ಜೀರ್ಣಕ್ಕೆ ಅಗತ್ಯವಿರುವ ಪೂರಕವಾಗಿ ಸ್ಪಂಧಿಸುವ ಆಹಾರಗಳನ್ನು ತೆಗೆದುಕೊಳ್ಳಬೇಕು. ಪರೀಕ್ಷೆ ಸಂದರ್ಭದಲ್ಲಿ ಆರೋಗ್ಯವನ್ನು ಕೆಡಿಸಿಕೊಳ್ಳಬಾರದು. ಆರೋಗ್ಯ ಕೆಡಿಸಿಕೊಂಡರೆ ಶಿಕ್ಷಣದ ಮೇಲೆ ಪರಿಣಾಮ ಬೀರುತ್ತದೆ ಎಂದು ತಿಳಿಸಿದರು.

ನಗರಸಭೆ ಸದಸ್ಯ ತಿಮ್ಮಣ್ಣ ಮಾತನಾಡಿ ಜನರಲ್ಲಿ ಲಕ್ಷೋಪಲಕ್ಷ ಹಣವಿದ್ದರೆ ಮುಖ್ಯವಲ್ಲ. ಆರೋಗ್ಯ ಬಹಳ ಮುಖ್ಯ ಹಾಗಾಗಿ ಆರೋಗ್ಯದ ಕಡೆ ಹೆಚ್ಚು ಗಮನಹರಿಸಬೇಕೆಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಎಂ.ಸಿ.ನಾಗರಾಜ್ ಮತ್ತು ಹನುಮಂತಪ್ಪ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸುಶ್ಮಿತ ಸ್ವಾಗತಿಸಿದರು. ಹನುಮಂತಪ್ಪ ನಿರೂಪಿಸಿದರು. ಜಯಮ್ಮ ವಂದಿಸಿದರು. ವಿದ್ಯಾರ್ಥಿಗಳು ಮತ್ತು ಬೋಧಕ ಬೋಧಕೇತರ ವರ್ಗ ಭಾಗವಹಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೋಟಿ ಕೋಟಿ ಆಸ್ತಿಯ ಒಡೆಯ ದಿಂಗಾಲೇಶ್ವರ ಸ್ವಾಮೀಜಿ : ಚಿನ್ನ, ಬೆಳ್ಳಿ ಸೇರಿ ಏನೆಲ್ಲಾ ಇದೆ‌ ಗೊತ್ತಾ..?

ಹುಬ್ಬಳ್ಳಿ: ಪ್ರಹ್ಲಾದ್ ಜೋಶಿ ಸ್ಪರ್ಧೆಗೆ ವಿರೋಧಿಸಿ, ಬಿಜೆಪಿ ಅಭ್ಯರ್ಥಿ ಪರ ಸ್ಪರ್ಧೆಗೆ ನಿಂತಿರುವ ದಿಂಗಾಲೇಶ್ವರ ಸ್ವಾಮೀಜಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ತಮ್ಮ ಬಳಿ ಇರುವ ಚರಾಸ್ಥಿ-ಸ್ಥಿರಾಸ್ತಿ ಸೇರಿದಂತೆ ಎಲ್ಲಾ ವಿವರವನ್ನು

ಪ್ರೀತಿ ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಪುತ್ರಿಯನ್ನೇ ಚಾಕುವಿನಿಂದ ಇರಿದು ಕೊಲೆ : ಬೆಚ್ಚಿ ಬಿದ್ದ ಹುಬ್ಬಳ್ಳಿ-ಧಾರವಾಡ ಮಂದಿ

ಹುಬ್ಬಳ್ಳಿ: ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಮಗಳನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ. ನೇಹಾ ಬರ್ಬರವಾಗಿ ಕೊಲೆಯಾದ ಯುವತಿ. ಫಯಾಜ್ ಕೊಲೆ ಮಾಡಿದಾತ. ನೇಹಾ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ

ಎಳಸು, ರಾಜಕೀಯ ಜ್ಞಾನ ಇರದವನು : ವಿಜಯೇಂದ್ರ ಮೇಲೆ ಈಶ್ವರಪ್ಪ ಮಾತಿನ ಪ್ರಹಾರ

ಉಡುಪಿ: ಹಾವೇರಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಈಶ್ವರಪ್ಪ ಅವರಿಗೆ ಬಿಜೆಪಿ ನಿರಾಸೆ ಮಾಡಿದಾಗಿನಿಂದ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಮಕ್ಕಳ ಮೇಲೆ ಹರಿಹಾಯುತ್ತಲೇ ಇದ್ದಾರೆ. ಬಿಜೆಪಿ ನಾಯಕರ ಮಾತನ್ನು ಮೀರಿ, ಸದ್ಯ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ

error: Content is protected !!