Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗ್ರಾಮದಲ್ಲಿ ಕಿಡಿ ಹಚ್ಚಿದ ನಿರ್ಧಾರ: 7 ಕುಟುಂಬಗಳ ಸುತ್ತ ಉದ್ಭವಿಸಿದ ಜಾತ್ರೆ ಪಟ್ಟಿ ವಿವಾದ

---Advertisement---

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುಣಸಿಕಟ್ಟಿ ಗ್ರಾಮದಲ್ಲಿ ಜಾತ್ರೆ ಪಟ್ಟಿ ಹಣ ನೀಡದ ಕಾರಣ ಏಳು ಕುಟುಂಬಗಳನ್ನು ಸಾಮಾಜಿಕವಾಗಿ ಬಹಿಷ್ಕರಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಪ್ರಕರಣ ದಾಖಲಿಸುವಂತೆ ತಹಸೀಲ್ದಾರ್ ಅನಿಲ ಬಡಿಗೇರ ಅವರು ಪೊಲೀಸರಿಗೆ ಸೂಚನೆ ನೀಡಿದ್ದಾರೆ.

ಏಪ್ರಿಲ್ 2ರಂದು ಗ್ರಾಮದಲ್ಲಿ ಹನುಮಂತ ದೇವರ ಒಕುಳಿ ಜಾತ್ರೆ ನಡೆಯಿದ್ದು, ಇದಕ್ಕಾಗಿ ಪ್ರತಿ ಕುಟುಂಬದಿಂದ ₹600 ಪಟ್ಟಿ ಹಣ ಸಂಗ್ರಹಿಸಲಾಗಿತ್ತು. ಆದರೆ, ಏಳು ಕುಟುಂಬಗಳು ಈ ಹಣವನ್ನು ನೀಡದ ಹಿನ್ನೆಲೆಯಲ್ಲಿ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ.
ಇದರಿಂದ ಏಪ್ರಿಲ್ 5ರಂದು ಗ್ರಾಮ ಹಿರಿಯರು ಸಭೆ ಸೇರಿ, ಆ ಕುಟುಂಬಗಳ ಮನೆಗಳಲ್ಲಿ ನಡೆಯುವ ಯಾವುದೇ ಕಾರ್ಯಕ್ರಮಗಳಲ್ಲಿ ಭಾಗವಹಿಸಬಾರದು ಎಂದು ಬಹಿಷ್ಕಾರ ಘೋಷಣೆ ಮಾಡಿರುವುದು ತಿಳಿದುಬಂದಿದೆ.

ಈ ಕ್ರಮವನ್ನು ಪ್ರಶ್ನಿಸಿ ರೈಲ್ವೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಯಲ್ಲಪ್ಪ ಛಗನ್ನವರ ಅವರು ಜಮಖಂಡಿ ತಹಸೀಲ್ದಾರ್, ಸಹಾಯಕ ಆಯುಕ್ತ (ಎಸಿ) ಹಾಗೂ ಜಿಲ್ಲಾಧಿಕಾರಿ (ಡಿಸಿ) ಅವರಿಗೆ ದೂರು ಸಲ್ಲಿಸಿ ಕ್ರಮಕ್ಕೆ ಆಗ್ರಹಿಸಿದ್ದರು.ಘಟನೆಯ ಹಿನ್ನೆಲೆ ತಿಳಿದು ತಾಲೂಕು ಮಟ್ಟದ ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿ ಸಂಧಾನ ಸಭೆ ಏರ್ಪಡಿಸಿತ್ತು. ಆದರೆ, ದೂರುದಾರರು ಸಭೆಗೆ ಹಾಜರಾಗದ ಕಾರಣ ಸಭೆ ನಡೆಸಲು ಸಾಧ್ಯವಾಗಲಿಲ್ಲ ಎಂದು ತಿಳಿದುಬಂದಿದೆ.
ಬಹಿಷ್ಕಾರಕ್ಕೊಳಗಾದ ಕುಟುಂಬದವರು ಸಭೆಗೆ ಹಾಜರಾಗದ ಹಿನ್ನೆಲೆಯಲ್ಲಿ, ಪ್ರಕರಣ ದಾಖಲಿಸುವಂತೆ ಅಧಿಕಾರಿಗಳು ಪೊಲೀಸರಿಗೆ ಸೂಚಿಸಿದ್ದು, ಮುಂದಿನ ಕ್ರಮ ಕೈಗೊಳ್ಳುವ ನಿರೀಕ್ಷೆ ಇದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...