Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಚಿವ ಸಂಪುಟದಲ್ಲಿ ರಾಜ್ಯಪಾಲರ ವಿರುದ್ಧ ಖಂಡನಾ ನಿರ್ಣಯಕ್ಕೆ ನಿರ್ಧಾರ..!

---Advertisement---

 

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಸಭೆಯಲ್ಲಿ ರಾಜ್ಯಪಾಲರ ವಿರುದ್ಧ ಖಂಡನಾ ನಿರ್ಣಯ ಕೈಗೊಳ್ಳುವ ನಿರ್ಧಾರ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ದೂರು ಬಂದ ಕೂಡಲೇ ನೋಟೀಸ್ ನೀಡಿ, ಪ್ರಾಸಿಕ್ಯೂಷನ್ ಅನುಮತಿ ನೀಡಿದ ರಾಜ್ಯಪಾಲರು, ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡದೆ ಇರುವುದಕ್ಕೆ ಕಾಂಗ್ರೆಸ್ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಸರ್ಕಾರ ಖಂಡನಾ ನಿರ್ಣಯ ಕೈಗೊಳ್ಳಲಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಈ ಸಭೆ ನಡೆಯಲಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕುಮಾರಸ್ವಾಮಿ, ನಿರಾಣಿ, ಜೊಲ್ಲೆ‌ ಹಾಗೂ ಜನಾರ್ಧನ ರೆಡ್ಡಿ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡದ ವಿಚಾರವಾಗಿ ಇಂದು ಖಂಡನಾ ನಿರ್ಣಯ ಕೈಗೊಳ್ಳಲಿದ್ದಾರೆ. ತನಿಖಾ ಸಂಸ್ಥೆಗಳು ಮನವಿ ಮಾಡಿದ್ದರು. ಇನ್ನು ಯಾವುದೇ ರೀತಿಯ ಅನುಮತಿಯನ್ನು ನೀಡಿಲ್ಲ. ತಾರತಮ್ಯ ಮಾಡುತ್ತಿದ್ದಾರೆ ಎಂದು ಖಂಡನಾ ನಿರ್ಣಯಕ್ಕೆ ಮುಂದಾಗಿದ್ದಾರೆ.

ಕಳೆದ ವರ್ಷ ಕುಮಾರಸ್ವಾಮಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲು ಅನುಮತಿ ನೀಡುವಂತೆ ಲೋಕಾಯುಕ್ತರಿಂದ ಮನವಿ ಸಲ್ಲಿಸಲಾಗಿತ್ತು. ಆದರೆ ಈ ವಿಚಾರವಾಗಿ ಹತ್ತು ತಿಂಗಳಾದರೂ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿಲ್ಲ. ಈ ಸಂಬಂಧ ರಾಜ್ಯಪಾಲರು ತಾರತಮ್ಯ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಕಿಡಿಕಾರಿದೆ. ಕಳೆದ ಸಂಪುಟ ಸಭೆಯಲ್ಲೂ ರಾಜ್ಯಪಾಲರ ವಿರುದ್ಧ ನಿರ್ಣಯ ಕೈಗೊಂಡಿದ್ದರು. ಈ ಬಾರಿ ಸಂಪುಟದಲ್ಲೂ ಖಂಡನಾ ನಿರ್ಣಯ ಕೈಗೊಳ್ಳಲಿದ್ದಾರೆ. ರಾಜ್ಯಪಾಲರ ನಡೆಗೆ ಕಾಂಗ್ರೆಸ್ ಬೇಸರ ವ್ಯಕ್ತಪಡಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment