ವಿದ್ಯುತ್ ದರ ಏರಿಕೆಯ ಶಾಕ್ ನೀಡಿದ ಇಲಾಖೆ ; ಏರಿಕೆಯಾಗಿದ್ದು ಎಷ್ಟು..?

ಬೆಂಗಳೂರು; ಇದ್ದಕ್ಕಿದ್ದ ಹಾಗೇ ವಿದ್ಯುತ್ ಬಿಲ್ ಏರಿಕೆಯಾಗುದ್ದು ಜನರ ಕೋಪಕ್ಕೆ ಕಾರಣವಾಗಿದೆ. ಮೊದಲೇ ಬಿರು ಬೇಸಿಗೆಯಲ್ಲಿ ಬೆವರುತ್ತಿರೋ ಜನರಿಗೆ ವಿದ್ಯುತ್ ಹೆಚ್ಚಾಗಿ ಬಳಕೆಯಾಗುತ್ತದೆ. ಈ ಸಮಯದಲ್ಲಿ ವಿದ್ಯುತ್ ಬಿಲ್ ಏರಿಕೆಯಾಗಿರೋದು ಕೋಪಕ್ಕೆ ಕಾರಣವಾಗಿದೆ. ದಿನನಿತ್ಯದ ವಸ್ತುಗಳು ಏರಿಕೆಯಾಗುತ್ತಿರುವುದು ಜನ ಸಾಮಾನ್ಯರಿಗೆ ಹೊರೆಯಾಗಿದೆ. ಅದರಲ್ಲೂ ವಿದ್ಯುತ್ ದರವನ್ನು ಕೆಇಆರ್ಸಿ ಹೊರಡಿಸಿರುವ ಆದೇಶದಲ್ಲಿ ಯೂನಿಟ್ ಗೆ 36 ಪೈಸೆ ಹೆಚ್ಚಳವಾಗಿದೆ.

ಹೊಸ ವಿದ್ಯುತ್ ದರ ಏಪ್ರಿಲ್ 1ರಿಂದ ಜಾರಿಗೆ ಬರಲಿದೆ. ವಿದ್ಯುತ್ ಪ್ರಸರಣ ಮತ್ತು ಎದ್ಕಾಂಗಳ ಸಿಬ್ಬಂದಿಗಳ ಪಿಂಚಣಿ ಹಾಗೂ ಗ್ರಾಚ್ಯುಟಿ ಪಾವತಿಸಲು ಹಾಗೂ ಉಚಿತ ವಿದ್ಯುತ್ ಯೋಜನೆಗಳ ವೆಚ್ಚ ಭರಿಸಲು ಈ ದರ ಏರಿಕೆ ಮಾಡಲಾಗುತ್ತಿದೆ ಎಂದು ಕೆಇಆರ್ಸಿ ತಿಳಿಸಿದೆ. ಹಂತ ಹಂತವಾಗಿ ದರ ಏರಿಕೆ ಮಾಡಲು ನಿರ್ಧರಿಸಿದ್ದು 2025-26 ಪ್ರತಿ ಯೂನಿಟ್ ಗೆ 36 ಪಯುಸೆ ಹೆಚ್ಚಳ, 2026-27 ಪ್ರತಿ ಯುನಿಟ್ ಗೆ 35 ಪೈಸೆ ಹೆಚ್ಚಳ, 2027-28ಕ್ಕೆ ಪ್ರತಿ ಯೂನಿಟ್ ಗೆ 34 ಪೈಸೆ ಹೆಚ್ಚಳ ಮಾಡುವ ಬಗ್ಗೆ ನಿರ್ಧಾರ ಮಾಡಲಾಗಿದೆ.

ಇನ್ನು ಈ ಹೆಚ್ಚಳದಿಂದಾಗಿ ಮುಂದಿನ ಮೂರು ವರ್ಷಗಳಲ್ಲಿ ಸುಮಾರು 8519 ಕೋಟಿ ರೂಪಾಯಿ ಹೆಚ್ಚುವರಿ ಆದಾಯ ಸಂಗ್ರಹವಾಗುವ ನಿರೀಕ್ಷೆ ಇದೆ. ಆದರೆ ಈಗೀಗ ವಿದ್ಯುತ್ ಸಂಸ್ಥೆಗಳಿಗೆ ಸುಮಾರು 4659 ಕೋಟಿ ರೂಪಾಯಿಯಷ್ಟು ಪಿಂಚಣಿ ಮತ್ತು ಗ್ಯಾಚ್ಯುಟಿ ಬಾಕಿ ಇದೆ. ಇನ್ನು ಗೃಹಜ್ಯೋತಿ ಯೋಜನೆಯಿಂದ ನಮಗೆ ನಷ್ಟ ಆಗಿಲ್ಲ, ಇದರಿಂದಾಗಿ ದರ ಏರಿಕೆ ಮಾಡಿರೋದು ಅಲ್ಲ ಎಂದು ಸಚಿವ ಶರಣ ಪ್ರಕಾಶ್ ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ.

suddionenews

Recent Posts

ಚಿತ್ರದುರ್ಗದಲ್ಲಿ ಪವಿತ್ರ ರಂಜಾನ್ ಹಬ್ಬ ಆಚರಣೆ

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 31 : ದೇಶಾದ್ಯಂತ ಇಂದು ಸೋಮವಾರ ಮುಸಲ್ಮಾನರ ಪವಿತ್ರ ಹಬ್ಬ ಈದ್ ಉಲ್ ಫಿತರ್(ರಂಜಾನ್) ಆಚರಿಸಲಾಗುತ್ತಿದೆ.…

2 hours ago

ದೆಹಲಿಗೆ ತೆರಳುವ ಮುನ್ನ ಸಿಎಂ – ಡಿಸಿಎಂ ಭೇಟಿ ; ಏನೆಲ್ಲಾ ಚರ್ಚೆ ಆಯ್ತು.?

ಬೆಂಗಳೂರು; ರಾಜ್ಯ ರಾಜಕಾರಣದಲ್ಲಿ ಸದ್ಯಕ್ಕೆ ಹನಿಟ್ರ್ಯಾಪ್ ಪ್ರಜರಣದ್ದೆ ಜೋರು ಸದ್ದು. ಅದರಲ್ಲೂ ಸಚಿವ ಕೆ.ಎನ್.ರಾಜಣ್ಣ ಹೆಸರು ಕೇಳಿ ಬಂದಿದೆ. ಈ…

3 hours ago

ಚಿತ್ರದುರ್ಗ : ನಗರದ ಮಧ್ಯಭಾಗದಲ್ಲಿ ಸಂಭವಿಸಿದ ಅಗ್ನಿ ಅವಘಡ : ಘಟನೆಗೆ ಅಸಲಿ ಕಾರಣವೇನು ಗೊತ್ತಾ ?

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 31: ಆಕಸ್ಮಿಕ ಬೆಂಕಿಯಿಂದಾಗಿ ನಗರದ ಬಿ.ಡಿ. ರಸ್ತೆಯ ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದ (ಎಸ್.ಬಿ.ಐ.…

3 hours ago

ಪ್ರತಿದಿನ ಬಾದಾಮಿ ಹಾಲು ಕುಡಿಯುವುದರಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ?

  ಸುದ್ದಿಒನ್ ಬಾದಾಮಿ ಹಾಲು ಒಂದು ಆರೋಗ್ಯಕರ ಪಾನೀಯವಾಗಿದ್ದು, ಬಾದಾಮಿಯನ್ನು ನೀರಿನಲ್ಲಿ ನೆನೆಸಿ, ನುಣ್ಣಗೆ ಪುಡಿಮಾಡಿ, ಸೋಸಿ ತಯಾರಿಸಲಾಗುತ್ತದೆ. ಇದು…

5 hours ago

ಈ ರಾಶಿಯವರಿಗೆ ನಿಂತಿರುವ ಮದುವೆ ಮಾತುಕತೆ ಪುನಃ ಪ್ರಾರಂಭ

ಈ ರಾಶಿಯವರಿಗೆ ನಿಂತಿರುವ ಮದುವೆ ಮಾತುಕತೆ ಪುನಃ ಪ್ರಾರಂಭ, ಈ ರಾಶಿಯವರು ಕೆಲಸ ಬದಲಾಯಿಸುವುದು ಬೇಡ, ಈ ರಾಶಿಯವರಿಗೆ ಎರಡನೇ…

7 hours ago

ಚಿತ್ರದುರ್ಗ : ನಗರದ ಮದ್ಯ ಭಾಗದಲ್ಲಿ ಆಕಸ್ಮಿಕ ಅಗ್ನಿ ಅವಘಡ : ಹೊತ್ತಿ ಉರಿದ ಫೋಟೋ ಫ್ರೇಂ ಅಂಗಡಿ

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 30 : ನಗರದ ಹೃದಯ ಭಾಗದಲ್ಲಿರುವ ಬಿ.ಡಿ. ರಸ್ತೆಯ ಎಸ್.ಬಿ.ಐ. ಬ್ಯಾಂಕ್ ಸಮೀಪ, ಶಾರ್ಟ್ ಸರ್ಕ್ಯೂಟ್…

15 hours ago