Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗ್ರಾ.ಪಂ ಕಾರ್ಯದರ್ಶಿ, ಸಹಾಯಕ ನೇರ ನೇಮಕಾತಿಗೆ ತಡೆ ನೀಡಿದ ಇಲಾಖೆ..!

Facebook
Twitter
Telegram
WhatsApp

ಬೆಂಗಳೂರು: ಗ್ರಾಮ ಪಂಚಾಯತ್ ಕಾರ್ಯದರ್ಶಿ, ಗ್ರಾಮೀಣಾಭಿವೃದ್ದಿ ಸಹಾಯಕ (ಗ್ರೇಡ್ -2), ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವೃಂದ ನೇರ ನೇಮಕಾತಿಗೆ ತಡೆ ನೀಡಲಾಗಿದೆ. ತಾತ್ಕಾಲಿಕವಾಗಿ ತಡೆ ನೀಡಿ ಗ್ರಾಮೀಣಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.

ನೇಮಕಾತಿಗೆ ತಡೆ ನೀಡುವಂತೆ ಎಲ್ಲಾ ಜಿಲ್ಲಾ ಪಂಚಾಯತ್ ಸಿಇಒಗಳಿಗೆ ಆದೇಶದ ಪ್ರತಿ ತಲುಪಿಸಿದೆ. ನೇಮಕಾತಿಗೆ ತಡೆ ನೀಡುವಂತೆ ಗ್ರಾಮ ಪಂಚಾಯತಿ ನೌಕರರ ಸಂಘ ಮನವಿ ಮಾಡಿತ್ತು. ಗ್ರಾಮೀಣಾಭಿವೃದ್ಧಿ ಇಲಾಖೆ ಎಸಿಎಸ್ ಗೆ ಸಂಘದಿಂದ ಮನವಿ ಮಾಡಿದ್ದರು. ಇದೀಗ ಮನವಿಗೆ ಸ್ಪಂದಿಸಿರುವ ಇಲಾಖೆ ನೇಮಕಾತಿಯನ್ನು ತಡೆಹಿಡಿದಿದೆ.

ಇನ್ನು ನೇಮಕಾತಿ ಬಗ್ಗೆ ಏಕರೂಪ ಮಾರ್ಗಸೂಚಿ ಬಗ್ಗೆ ಪರಿಶೀಲನೆ ನಡೆಸಬೇಕೆಂದು ಮನವಿಯಲ್ಲಿ ಕೇಳಿಕೊಂಡಿದ್ದರು. ಸರ್ಕಾರದ ಹಂತದಲ್ಲಿ ಪರಿಶೀಲನೆಯಲ್ಲಿರುವ ಕಾರಣ ತಾತ್ಕಾಲಿಕ ತಡೆ ನೀಡಲಾಗಿದೆ. ಈಗಾಗಲೇ ನೇಮಕಾತಿ ಮಾಡಿರುವ ಜಿಲ್ಲೆಗಳನ್ನು ಹೊರತುಪಡಿಸಿ, ಇನ್ನುಳಿದ ಜಿಲ್ಲೆಗಳಲ್ಲಿ ನೇಮಕಾತಿಗೆ ತಡೆ ನೀಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 20 ಲಕ್ಷ ವಶಕ್ಕೆ 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್, 19 :  ನಗರದ ತಿರುಮಲ ಡಾಬ ಚೆಕ್ ಪೋಸ್ಟ್ ಬಳಿಯಲ್ಲಿ ಮಧ್ಯಾಹ್ನ ಸುಮಾರು 3.00 ಗಂಟೆ ಸಮಯದಲ್ಲಿ ಯಾವುದೇ ಸೂಕ್ತ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ ರೂ.20,93,928 ರ ಮೊತ್ತವನ್ನು ಸಂಬಂಧಿಸಿದ

ಇದು ಪಿಕ್ ಪಾಕೆಟ್ ಸರ್ಕಾರ : ಹಿರಿಯೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಸುದ್ದಿಒನ್, ಹಿರಿಯೂರು, ಏಪ್ರಿಲ್, 19  : ಗ್ಯಾರಂಟಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 2 ಸಾವಿರ ಹಣ ಕೊಟ್ಟು ಕುಟುಂಬದ ಮುಖ್ಯಸ್ಥರಿಂದ ಪ್ರತಿ ತಿಂಗಳು  5 ರಿಂದ 6 ಸಾವಿರ ವಸೂಲಿ ಮಾಡುತ್ತಿದ್ದಾರೆ . ಇದು

error: Content is protected !!