Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರವಾದಿ ಮಹಮದ್ ಪೈಗಂಬರ್ ಹುಟ್ಟುಹಬ್ಬ ಪ್ರಯುಕ್ತ ಈದ್‍ಮಿಲಾದ್ ಮೆರವಣಿಗೆ

Facebook
Twitter
Telegram
WhatsApp

ವರದಿ ಮತ್ತು ಫೋಟೋಗಳು : ಕೆ.ಎಂ. ಮುತ್ತುಸ್ವಾಮಿ ಕಣ್ಣನ್

ಚಿತ್ರದುರ್ಗ : ಪ್ರವಾದಿ ಮಹಮದ್ ಪೈಗಂಬರ್‍ರವರ ಹುಟ್ಟುಹಬ್ಬ ಈದ್‍ಮಿಲಾದನ್ನು ಮಂಗಳವಾರ ನಗರದಲ್ಲಿ ಶ್ರದ್ದಾ ಭಕ್ತಿಯಿಂದ ಆಚರಿಸಲಾಯಿತು.
ಬಡಾಮಕಾನ್‍ನಿಂದ ಮಧ್ಯಾಹ್ನ ಹೊರಟ ಮೆರವಣಿಗೆ ಬಸವೇಶ್ವರ ಟಾಕೀಸ್ ಮುಂಭಾಗದ ರಸ್ತೆಯಿಂದ ಎಸ್.ಬಿ.ಎಂ.ಸರ್ಕಲ್, ಮುಖ್ಯ ರಸ್ತೆಯ ಮೂಲಕ ಕನಕವೃತ್ತ, ಮಕ್ಕ ಮಸೀದಿ, ನೆಹರುನಗರದಲ್ಲಿ ಸಾಗಿ ನಂತರ ಸಂಜೆ ಜಾಮಿಯಾ ಮಸೀದಿಗೆ ಹಿಂದಿರುಗಿತು.

ಮೆರವಣಿಯಲ್ಲಿ ಪಾಲ್ಗೊಂಡಿದ್ದ ಸಹಸ್ರಾರು ಮಂದಿ ಮುಸ್ಲಿಂ ಬಾಂಧವರು ಹಸಿರು ಹಾಗೂ ಬಿಳಿ ಬಣ್ಣದ ಬಾವುಟಗಳನ್ನು ಹಿಡಿದು ಹರ್ಷೋದ್ದಾರಗಳನ್ನು ಕೂಗುತ್ತ ಸಾಗಿದರು. ಜಟಕಾ ಬಂಡಿ ಹಾಗೂ ಎತ್ತಿನ ಬಂಡಿಗಳಲ್ಲಿ ಕುಳಿತು ಕೆಲವರು ಮೆರವಣಗೆಯಲ್ಲಿ ಸಾಗಿದರೆ. ಒಂದೊಂದು ಬೈಕ್‍ನಲ್ಲಿ ಮೂರ್ನಾಲ್ಕು ಯುವಕರು ಕುಳಿತು ನಗರದೆಲ್ಲೆಡೆ ಸಂಚರಿಸಿ ಈದ್‍ಮಿಲಾದ್ ಹಬ್ಬವನ್ನು ಆಚರಿಸಿದ್ದು ಕಂಡು ಬಂದಿತು.

ಬಸವೇಶ್ವರ ಟಾಕೀಸ್ ಮುಂಭಾಗ, ಎಸ್.ಬಿ.ಎಂ.ರಸ್ತೆ ಹಾಗೂ ಮುಖ್ಯ ರಸ್ತೆಗಳಲ್ಲಿ ಅಲ್ಲಲ್ಲಿ ಪೊಲೀಸ್ ಬ್ಯಾರಿಕೇಡ್‍ಗಳನ್ನಿಟ್ಟು ವಾಹನಗಳ ಸಂಚಾರವನ್ನು ನಿಯಂತ್ರಿಸಿ ಮೆರವಣಿಗೆಗೆ ಅನುವು ಮಾಡಿ ಕೊಡಲಾಯಿತು. ಆಟೋ, ಬೈಕ್, ಅಪೆ ಗಾಡಿಗಳಲ್ಲಿ ಕುಳಿತ ಚಿಕ್ಕ ಚಿಕ್ಕ ಮಕ್ಕಳು ಕೈಯಲ್ಲಿ ಹಸಿರು ಬಾವುಟಗಳನ್ನಿಡಿದು ಈದ್‍ಮಿಲಾದನ್ನು ಸಂಭ್ರಮಿಸಿದರು.

ಮೆರವಣಿಯಲ್ಲಿ ಸಾಗಿದ ಎತ್ತಿನ ಬಂಡಿ ಹಾಗೂ ಜಟಕಾ ಗಾಡಿಗಳನ್ನು ಹೂವಿನಿಂದ ಅಲಂಕರಿಸಲಾಗಿತ್ತು. ಮೆರವಣಿಗೆ ಸಾಗಿದ ಕಡೆಗೆಲ್ಲಾ ರಸ್ತೆಯ ಎರಡು ಬದಿಗಳಲ್ಲಿ ಮಹಿಳೆಯರು ಹಾಗೂ ಮಕ್ಕಳು ನಿಂತು ಪ್ರವಾದಿ ಮಹಮದ್ ಪೈಗಂಬರ್‍ರವರ ಈದ್‍ಮಿಲಾದ್ ಮೆರವಣಿಗೆಯ ಖುಷಿಯನ್ನು ಸವಿದರು. ಅಲ್ಲಲ್ಲಿ ಮನೆಯ ತಾರಸಿಗಳ ಮೇಲೆ ನಿಂತು ಮೊಬೈಲ್‍ನಲ್ಲಿ ಫೋಟೋಗಳನ್ನು ಕ್ಲಿಕ್ಕಿಸಲಾಗುತ್ತಿತ್ತು.

ಆಯಾ ಕಟ್ಟಿನ ಜಾಗಗಳಲ್ಲಿ ಪೊಲೀಸ್ ಭದ್ರೆಯನ್ನು ಹಾಕಲಾಗಿತ್ತು. ಹೆಚ್ಚುವರಿ ರಕ್ಷಣಾಧಿಕಾರಿ ಮಹಾನಿಂಗ ಬಿ.ನಂದಗಾಂವಿ, ಡಿ.ವೈ.ಎಸ್ಪಿ. ಪಾಂಡುರಂಗಪ್ಪ ಸೇರಿದಂತೆ ಇತರೆ ಅಧಿಕಾರಿಗಳು ಅಲ್ಲಲ್ಲಿ ನಿಂತು ಮೆರವಣಿಗೆ ಸುಗಮವಾಗಿ ಸಾಗಲು ಅವಕಾಶ ಕಲ್ಪಿಸಿದರು.

ನಗರಸಭೆ ಮಾಜಿ ಅಧ್ಯಕ್ಷ ಮಹಮದ್ ಅಹಮದ್ ಪಾಷ, ಕರ್ನಾಟಕ ರಾಜ್ಯ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾ ವೇದಿಕೆ ರಾಜ್ಯಾಧ್ಯಕ್ಷ ಟಿಪ್ಪುಖಾಸಿಂ ಆಲಿ, ನ್ಯಾಯವಾದಿ ಬಿ.ಕೆ.ರಹಮತ್‍ವುಲ್ಲಾ, ಎಂ.ಸಿ.ಓ.ಬಾಬು, ಅಲ್ಲಾಭಕ್ಷಿ ಸೇರಿದಂತೆ ಅನೇಕ ಮುಸ್ಲಿಂ ಮುಖಂಡರುಗಳು ಹಾಗೂ ಧರ್ಮಗುರುಗಳು, ಫಕೀರಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಜಿಲ್ಲಾ ವಕೀಲರಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಚಾಲನೆ

  ಚಿತ್ರದುರ್ಗ, ಮಾರ್ಚ್. 29 : ಚಿತ್ರದುರ್ಗ ಜಿಲ್ಲಾ ವಕೀಲರ ಕಲಾ ಬಳಗದಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಅಕ್ಟೋಬರ್ 13, 2024 ರಂದು ಮದಕರಿ ನಾಯಕ ಜಯಂತಿ ಅಂಗವಾಗಿ

ನನ್ನ ರಾಜಕೀಯ ಶಕ್ತಿ ಸಾಮರ್ಥ್ಯವನ್ನು ಮುಂದಿನ ದಿನಗಳಲ್ಲಿ ತೋರಿಸುತ್ತೇನೆ : ಶಾಸಕ ಎಂ.ಚಂದ್ರಪ್ಪ ಸವಾಲು

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29  : ನನ್ನ ಮಗ ಏನು ತಪ್ಪು ಮಾಡಿದ್ದಾ ಅಂತ ಈ ಬಾರಿಯ ಪಾರ್ಲಿಮೆಂಟ್ ಚುನಾವಣೆಯಲ್ಲಿ ಟಿಕೇಟ್

BMTCಯಲ್ಲಿ 2,500 ಹುದ್ದೆಗಳು ಖಾಲಿ : ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಬಿಎಂಟಿಸಿಯಲ್ಲಿ ಖಾಲಿ ಇರುವ ಹುದ್ದಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 2,500 ಹುದ್ದೆಗಳನ್ನು ಭರ್ತಿ ಮಾಡಲು ಹೊರಟಿದೆ. ಅರ್ಜಿ ಆಹ್ವಾನ ಮಾಡಿ, ನೋಟಿಫೀಕೇಷನ್ ಹೊರಡಿಸಿದೆ. ಹೆಚ್ಚಿನ ಮಾಹಿತಿಗಾಗಿ cetonline.karnataka.gov.inಗೆ ಭೇಟಿ ನೀಡಬಹುದಾಗಿದೆ. ಅರ್ಜಿ ಹಾಕುವವರು ದ್ವಿತೀಯ

error: Content is protected !!