Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ನೌಕರರ ಭವನವನ್ನು  ನೌಕರರ ಹಿತಕ್ಕೆ ಬಳಸಬೇಕು : ಕರುನಾಡ ವಿಜಯಸೇನೆ ಆಗ್ರಹ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.30  : ಕಳೆದ 27 ರಂದು ತುಮಕೂರಿನಲ್ಲಿ ನಡೆದ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಕ್ರೀಡಾಪಟುಗಳಿಗೆ ಅವರವರ ಅಳತೆಗೆ ತಕ್ಕಂತೆ ಟೀಶರ್ಟ್ ಮತ್ತು ಇತರೆ ಸಾಮಾಗ್ರಿಗಳನ್ನು ನೀಡುವಲ್ಲಿ ಲೋಪವಾಗಿದ್ದನ್ನು ಪ್ರಶ್ನಿಸುತ್ತಿದ್ದ ಸಂದರ್ಭದಲ್ಲಿ ದೃಶ್ಯ ಹಾಗೂ ಮುದ್ರಣ ಮಾಧ್ಯಮದವರು ನೌಕರರ ಪರ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಇವರನ್ನು ಪ್ರಶ್ನಿಸಿದಾಗ ಹಲ್ಲೆ ನಡೆಸಿರುವುದನ್ನು ವಿರೋಧಿಸಿ ಕರುನಾಡ ವಿಜಯಸೇನೆ ಕಾರ್ಯಕರ್ತರು ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಎದುರು ಪ್ರತಿಭಟನೆ ನಡೆಸಿ ಸುಮೋಟೋ ಕೇಸು ದಾಖಲಿಸಿ ಬಂಧಿಸುವಂತೆ ಒತ್ತಾಯಿಸಿದರು.

ಮಹಿಳಾ ನೌಕರರು ತಮ್ಮ ತಮ್ಮ ಅಳತೆಗೆ ತಕ್ಕಂತೆ ಟೀಶರ್ಟ್‍ಗಳನ್ನು ನೀಡಿಲ್ಲ ಎಂದು ರಾಜ್ಯಾಧ್ಯಕ್ಷ ಷಡಾಕ್ಷರಿಯನ್ನು ಪ್ರಶ್ನಿಸುತ್ತಿದ್ದ ಸಂದರ್ಭವನ್ನು ಸೆರೆ ಹಿಡಿಯುತ್ತಿದ್ದ ಟಿ.ವಿ. ಮಾಧ್ಯಮ ಹಾಗೂ ಪತ್ರಕರ್ತರನ್ನು ನಿಂದಿಸಿದ್ದಲ್ಲದೆ ಹಲ್ಲೆ ನಡೆಸಿ ದೌರ್ಜನ್ಯವೆಸಗಿರುವುದು ಅತ್ಯಂತ ಖಂಡನೀಯ. ಹಾಗಾಗಿ ಕೂಡಲೆ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು.

ಚಿತ್ರದುರ್ಗದಲ್ಲಿರುವ ಸರ್ಕಾರಿ ನೌಕರರ ಭವನವನ್ನು ಬಾರ್ ಮತ್ತು ರೆಸ್ಟೋರೆಂಟ್‍ಗೆ ನೀಡಿ ಜಿಲ್ಲೆಯ ಸರ್ಕಾರಿ ನೌಕರರನ್ನು ಅವಮಾನಿಸಲಾಗಿದೆ. ಸರ್ಕಾರ ಇತ್ತ ಗಮನಹರಿಸಿ ನೌಕರರ ಭವನವನ್ನು ಬಾಡಿಗೆ ನೀಡಿರುವುದನ್ನು ಹಿಂದಕ್ಕೆ ಪಡೆದು ನೌಕರರ ಹಿತಕ್ಕೆ ಬಳಸಬೇಕು ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಆಗ್ರಹಿಸಿದರು.

ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ, ಕಾರ್ಯದರ್ಶಿ ಜಗದೀಶ್, ವಿಶ್ವನಾರಾಯಣಮೂರ್ತಿ, ಅಖಿಲೇಶ್, ಗೋಪಿನಾಥ್, ಹರೀಶ್‍ಕುಮಾರ್, ಅವಿನಾಶ್, ಕಮಲಮ್ಮ, ಗೋಪಿ, ಅಭಿಷೇಕ್, ಸಾಯಿಕುಮಾರ್, ಮಂಜುನಾಥ, ಸುರೇಶ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!