Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಡಿಕೆಶಿ ರಾಜಕೀಯ ಅಂತ್ಯವಾಗೋದು ನನ್ನಿಂದಾನೆ : ರಮೇಶ್ ಜಾರಕಿಹೊಳಿ ಸವಾಲು..!

---Advertisement---

ಬೆಳಗಾವಿ: ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಯಾವಾಗಲೂ ಕೆಂಡಕಾರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಈ ಬಾರಿಯ ಚುನಾವಣೆಯಲ್ಲಿ ಒಂದೊಂದು ಮತಕ್ಕೆ ಆರು ಸಾವಿರ ಹಣ ಕೊಡುತ್ತೇನೆ ಎಂದಿದ್ದ ವಿಚಾರ ವೈರಲ್ ಆಗಿತ್ತು. ಆ ವಿಚಾರ ಸಾಕಷ್ಟು ಚರ್ಚೆಗೂ ಗ್ರಾಸವಾಗಿತ್ತು. ಅದೇ ಸುದ್ದಿಯನ್ನು ಆಧಾರವಾಗಿಟ್ಟುಕೊಂಡು ಇದೀಗ ಕಾಂಗ್ರೆಸ್ ನಾಯಕರು ಬೆಂಗಳೂರಿನಲ್ಲಿ ದೂರನ್ನು ದಾಖಲಿಸಿದ್ದಾರೆ.

ದೂರು ದಾಖಲಾದ ಬೆನ್ನಲ್ಲೇ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಟಿ ಕರೆದು ಸ್ಪಷ್ಟನೆ ನೀಡಿದ್ದಾರೆ. ಜೊತೆಗೆ ಡಿಕೆ ಶಿವಕುಮಾರ್ ಅವರ ರಾಜಕೀಯ ಭವಿಷ್ಯಕ್ಕೆ ನಾನೇ ಅಂತ್ಯವಾಡುವುದು ಎಂದು ಸವಾಲನ್ನು ಹಾಕಿದ್ದಾರೆ.

ನಾನು ಒಂದು ವೋಟಿಗೆ ಆರು ಸಾವಿರ ಹಣ ಕೊಡುತ್ತೀನಿ ಅಂತ ಹೇಳಿಲ್ಲ. ನಾನು ಆರನೇ ಅವಧಿಗೆ ಶಾಸನಾಗಿದ್ದೇನೆ. ನನಗೂ ಕಾನೂನಿನ ಅರಿವಿದೆ. ಬೆಳಗಾವಿ ಗ್ರಾಮೀಣ ಶಾಸಕರು ನೇರವಾಗಿಯೇ ಹಣ ಹಂಚುತ್ತಿದ್ದಾರೆ. ಹಾಗಾದರೆ ಅದಿ ಆಮಿಷವೊಡ್ಡಿದ್ದಂತೆ ಅಲ್ವಾ. ನಾನು ಹೇಳಿದ ಹೇಳಿಕೆಯನ್ನು ಟ್ವಿಸ್ಟ್ ಮಾಡಲಾಗಿದೆ. ನಾನು ಅಭಿವೃದ್ಧಿಗಾಗಿ ಹಣ ಕೊಡುತ್ತೇನೆ ಅಂತ ಹೇಳಿದ್ದು. ಆರು ಸಾವಿರದಿಂದ ಹತ್ತು ಸಾವಿರ ಕೋಟಿ ತನಕ ಹಣ ಖರ್ಚಾಗಲಿ ಅಂತ ಬೇರೆ ಉದ್ದೇಶಕ್ಕೆ ಹೇಳಿದ್ದು.

ಇನ್ನು ನನ್ನ ಒಬ್ಬನ ಮೇಲೆಯೇ ಕೇಸ್ ಮಾಡಬಹುದಿತ್ತು. ಮುಖ್ಯಮಂತ್ರಿಯ ಮೇಲೆ ಯಾಕೆ ಮಾಡಬೇಕಿತ್ತು. ಡಿಕೆ ಶಿವಕುಮಾರ್ ಅವರಿಗೆ ರಮೇಶ್ ಜಾರಕಿಹೊಳಿ ಕಂಡರೆ ಹೆದರಿಕೆ ಇದೆಯಲ್ಲ. ಅದು ಬಹಳ ಸಂತೋಷ. ನಾನು ಮಂತ್ರಿ ಬೇಡ ಅಂತ ಹೇಳಿದ್ದೇನೆ. ಪೂರ್ಣ ಪ್ರಮಾಣದಲ್ಲಿ ಪಕ್ಷ ಅಧಿಕಾರಕ್ಕೆ ಬಂದ ನಂತರವಷ್ಟೆ ಮಂತ್ರಿ ಸ್ಥಾನ ಕೇಳುತ್ತೇನೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...