Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿಕೆಶಿ ರಾಜಕೀಯ ಅಂತ್ಯವಾಗೋದು ನನ್ನಿಂದಾನೆ : ರಮೇಶ್ ಜಾರಕಿಹೊಳಿ ಸವಾಲು..!

Facebook
Twitter
Telegram
WhatsApp

ಬೆಳಗಾವಿ: ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಯಾವಾಗಲೂ ಕೆಂಡಕಾರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಈ ಬಾರಿಯ ಚುನಾವಣೆಯಲ್ಲಿ ಒಂದೊಂದು ಮತಕ್ಕೆ ಆರು ಸಾವಿರ ಹಣ ಕೊಡುತ್ತೇನೆ ಎಂದಿದ್ದ ವಿಚಾರ ವೈರಲ್ ಆಗಿತ್ತು. ಆ ವಿಚಾರ ಸಾಕಷ್ಟು ಚರ್ಚೆಗೂ ಗ್ರಾಸವಾಗಿತ್ತು. ಅದೇ ಸುದ್ದಿಯನ್ನು ಆಧಾರವಾಗಿಟ್ಟುಕೊಂಡು ಇದೀಗ ಕಾಂಗ್ರೆಸ್ ನಾಯಕರು ಬೆಂಗಳೂರಿನಲ್ಲಿ ದೂರನ್ನು ದಾಖಲಿಸಿದ್ದಾರೆ.

ದೂರು ದಾಖಲಾದ ಬೆನ್ನಲ್ಲೇ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಟಿ ಕರೆದು ಸ್ಪಷ್ಟನೆ ನೀಡಿದ್ದಾರೆ. ಜೊತೆಗೆ ಡಿಕೆ ಶಿವಕುಮಾರ್ ಅವರ ರಾಜಕೀಯ ಭವಿಷ್ಯಕ್ಕೆ ನಾನೇ ಅಂತ್ಯವಾಡುವುದು ಎಂದು ಸವಾಲನ್ನು ಹಾಕಿದ್ದಾರೆ.

ನಾನು ಒಂದು ವೋಟಿಗೆ ಆರು ಸಾವಿರ ಹಣ ಕೊಡುತ್ತೀನಿ ಅಂತ ಹೇಳಿಲ್ಲ. ನಾನು ಆರನೇ ಅವಧಿಗೆ ಶಾಸನಾಗಿದ್ದೇನೆ. ನನಗೂ ಕಾನೂನಿನ ಅರಿವಿದೆ. ಬೆಳಗಾವಿ ಗ್ರಾಮೀಣ ಶಾಸಕರು ನೇರವಾಗಿಯೇ ಹಣ ಹಂಚುತ್ತಿದ್ದಾರೆ. ಹಾಗಾದರೆ ಅದಿ ಆಮಿಷವೊಡ್ಡಿದ್ದಂತೆ ಅಲ್ವಾ. ನಾನು ಹೇಳಿದ ಹೇಳಿಕೆಯನ್ನು ಟ್ವಿಸ್ಟ್ ಮಾಡಲಾಗಿದೆ. ನಾನು ಅಭಿವೃದ್ಧಿಗಾಗಿ ಹಣ ಕೊಡುತ್ತೇನೆ ಅಂತ ಹೇಳಿದ್ದು. ಆರು ಸಾವಿರದಿಂದ ಹತ್ತು ಸಾವಿರ ಕೋಟಿ ತನಕ ಹಣ ಖರ್ಚಾಗಲಿ ಅಂತ ಬೇರೆ ಉದ್ದೇಶಕ್ಕೆ ಹೇಳಿದ್ದು.

ಇನ್ನು ನನ್ನ ಒಬ್ಬನ ಮೇಲೆಯೇ ಕೇಸ್ ಮಾಡಬಹುದಿತ್ತು. ಮುಖ್ಯಮಂತ್ರಿಯ ಮೇಲೆ ಯಾಕೆ ಮಾಡಬೇಕಿತ್ತು. ಡಿಕೆ ಶಿವಕುಮಾರ್ ಅವರಿಗೆ ರಮೇಶ್ ಜಾರಕಿಹೊಳಿ ಕಂಡರೆ ಹೆದರಿಕೆ ಇದೆಯಲ್ಲ. ಅದು ಬಹಳ ಸಂತೋಷ. ನಾನು ಮಂತ್ರಿ ಬೇಡ ಅಂತ ಹೇಳಿದ್ದೇನೆ. ಪೂರ್ಣ ಪ್ರಮಾಣದಲ್ಲಿ ಪಕ್ಷ ಅಧಿಕಾರಕ್ಕೆ ಬಂದ ನಂತರವಷ್ಟೆ ಮಂತ್ರಿ ಸ್ಥಾನ ಕೇಳುತ್ತೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 20 ಲಕ್ಷ ವಶಕ್ಕೆ 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್, 19 :  ನಗರದ ತಿರುಮಲ ಡಾಬ ಚೆಕ್ ಪೋಸ್ಟ್ ಬಳಿಯಲ್ಲಿ ಮಧ್ಯಾಹ್ನ ಸುಮಾರು 3.00 ಗಂಟೆ ಸಮಯದಲ್ಲಿ ಯಾವುದೇ ಸೂಕ್ತ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ ರೂ.20,93,928 ರ ಮೊತ್ತವನ್ನು ಸಂಬಂಧಿಸಿದ

ಇದು ಪಿಕ್ ಪಾಕೆಟ್ ಸರ್ಕಾರ : ಹಿರಿಯೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಸುದ್ದಿಒನ್, ಹಿರಿಯೂರು, ಏಪ್ರಿಲ್, 19  : ಗ್ಯಾರಂಟಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 2 ಸಾವಿರ ಹಣ ಕೊಟ್ಟು ಕುಟುಂಬದ ಮುಖ್ಯಸ್ಥರಿಂದ ಪ್ರತಿ ತಿಂಗಳು  5 ರಿಂದ 6 ಸಾವಿರ ವಸೂಲಿ ಮಾಡುತ್ತಿದ್ದಾರೆ . ಇದು

error: Content is protected !!