Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅದ್ದೂರಿಯಾಗಿ ನಡೆಯಿತು ಸಚಿವ ಭೈರತಿ‌ ಸುರೇಶ್ ಮಗನ ನಿಶ್ಚಿತಾರ್ಥ

Facebook
Twitter
Telegram
WhatsApp

ಬೆಂಗಳೂರು: ರಾಜಕಾರಣದಲ್ಲಿ ಯಾರು ಯಾವತ್ತು ಶತ್ರುಗಳಲ್ಲ. ಮಾತಲ್ಲಿ ಹೊಡೆದಾಡಿಕೊಂಡವರು, ದ್ವೇಷ ಕಾರಿದವರು ಸಭೆ ಸಮಾರಂಭಗಳಲ್ಲಿ ಸಿಕ್ಕಾಗ ಆತ್ಮೀಯವಾಗಿಯೇ ಮಾತಾಡುತ್ತಾರೆ. ಅಲ್ಲಿ ಯಾವ ರಾಜಕೀಯವೂ ಬರಲ್ಲ.. ಯಾವ ದ್ವೇಷವೂ ಬರಲ್ಲ. ಇದಕ್ಕೆಲ್ಲಾ ಉದಾಹರಣೆಯೆಂಬಂತೆ ಇಂದು ಬಿಜೆಪಿ ಶಾಸಕನ ಮಗಳ ಜೊತೆಗೆ ಸಚಿವರ ಮಗನ ನಿಶ್ಚಿತಾರ್ಥ ನಡೆದಿದೆ. ಕಾಂಗ್ರೆಸ್ ನ ಭೈರತಿ ಸುರೇಶ್ ಹಾಗೂ ಬಿಜೆಪಿಯ ಎಸ್.ಆರ್. ವಿಶ್ವನಾಥ ್ ಅಧಿಕೃತವಾಗಿ ಬೀಗರಾಗಿದ್ದಾರೆ.

ನಗರದ ತಾಜ್ ವೆಸ್ಟೆಂಡ್ ಹೊಟೇಲ್ ನಲ್ಲಿ ಸಚಿವರ ಮಗನ ನಿಶ್ಚಿತಾರ್ಥ ಅದ್ದೂರಿಯಾಗಿ ನೆರವೇರಿದೆ. ಈ ನಿಶ್ಚಿತಾರ್ಥಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸಿ ನವ ವಧು-ವರರಿಗೆ ಶುಭ ಹಾರೈಸಿದ್ದಾರೆ. ಜೊತೆಗೆಸಚಿವ ರಾಮಲಿಂಗಾ ರೆಡ್ಡಿ, ಮಧು ಬಂಗಾರಪ್ಲ, ಎಂ.ಸಿ ಸುಧಾಕರ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಗೋವಿಂದ ರಾಜು ಸೇರಿದಂತೆ ಹಲವು ಗಣ್ಯರು ಆಗಮಿಸಿದ್ದರು.

ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್ ಮಗಳ ನಿಶ್ಚಿತಾರ್ಥವನ್ನು ಸಚಿವ ಭೈರತಿ ಸುರೇಶ್ ಮಗನ ಜೊತೆಗೆ ನೆರವೇರಿಸಿದ್ದಾರೆ. ಖಾಸಗಿ ಹೊಟೇಲ್ ನಲ್ಲಿ ನಡೆದ ಈ ನಿಶ್ಚಿತಾರ್ಥ ಕುಟುಂಬಸ್ಥರು, ಆಪ್ತರು, ರಾಜಕೀಯ ಗಣ್ಯರ ಸಮ್ಮುಖದಲ್ಲಿ ನೆರವೇರಿದೆ. ನಿಶ್ಚಿತಾರ್ಥಕ್ಕೆ ಬಂದ ಅತಿಥಿಗಳು ಕೂಡ ಗಂಡು-ಹೆಣ್ಣಿಗೆ ಹಾರೈಸಿದರು. ಮದುವೆ ದಿನಾಂಕವನ್ನು ಇನ್ನು ನಿಗಧಿ ಮಾಡಿಲ್ಲ. ಅತಿ ಶೀಘ್ರದಲ್ಲಿಯೇ ಅದ್ದೂರಿ ಮದುವೆಗೂ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಸಾಕ್ಷಿಯಾಗಬಹುದು.

ರಾಜಕೀಯ ದ್ವೇಷ, ಕಿತ್ತಾಟ, ಅಪವಾದಗಳೆಲ್ಲ ಚುನಾವಣೆಗಷ್ಟೇ ಸೀಮಿತ ಎನ್ನುವುದನ್ನು ಈ ಇಬ್ಬರು ನಾಯಕರು ಬೀಗರಾಗುವ ಮೂಲಕ ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ರಾಜಕೀಯದಲ್ಲಿ ದ್ವೇಷ ಮೀರಿ ಸಂಬಂಧಿಗಳಾಗಬಹುದು ಎಂಬುದನ್ನು ನಿರೂಪಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!