Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇರುವ ಪರಿಸರವನ್ನೇ ಜೋಪಾನವಾಗಿ ಕಾಪಾಡಬೇಕು : ಡಾ.ಕರಿಯಪ್ಪ ಮಾಳಿಗೆ

Facebook
Twitter
Telegram
WhatsApp

ಚಿತ್ರದುರ್ಗ : ಇರುವ ಪರಿಸರ ಕಳೆದುಕೊಳ್ಳಬಾರದು. ಪರಿಸರ ನಿರ್ಮಾಣಮಾಡುವುದಕ್ಕಿಂತ ಮುಖ್ಯವಾಗಿ ಇರುವುದನ್ನು ಜೋಪಾನವಾಗಿ ಕಾಪಾಡಬೇಕು ಎಂದು ಪ್ರಾಧ್ಯಾಪಕ ಡಾ.ಕರಿಯಪ್ಪ ಮಾಳಿಗೆ ತಿಳಿಸಿದರು.

ಎಸ್.ಜೆ.ಎಸ್. ಸಮೂಹ ಶಾಲೆಗಳಿಂದ ಭೋವಿ ಗುರುಪೀಠದಲ್ಲಿ ಆಯೋಜಿಸಿದ್ದ ಪರಿಸರ ದಿನಾಚರಣೆಯನ್ನು ಸಸಿಗೆ ನೀರು ಹಾಯಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಲ್ಲಿ ನಿಸರ್ಗದ ಪ್ರೀತಿ ಬೆಳೆಯಬೇಕು. ಮನುಷ್ಯ ನಿಸರ್ಗದ ಕೂಸು ಎಂದು ಹೇಳಿದರು.

ಪ್ರಕೃತಿ ತಾಯಿ ಇದ್ದಂತೆ, ತಾಯಿ ಮಮತೆಯಂತೆ ಇಡೀ ನಿಸರ್ಗವನ್ನು ಉಳಿಸಿ ಬೆಳೆಸುವ ಹೊಣೆ ನಮ್ಮೆಲ್ಲರ ಮೇಲಿದೆ. ಅಭಿವೃದ್ಧಿಯ ಹೆಸರಿನಲ್ಲಿ ನಿಸರ್ಗವನ್ನು ಹಾಳು ಮಾಡುವುದನ್ನು ಕಾಣುತ್ತೇವೆ. ಆದರೆ, ಹಾಳುಮಾಡಿದ ಪರಿಸರಕ್ಕೆ ಪ್ರತ್ಯೇಕವಾಗಿ ಅಷ್ಟೇ ಸರಿಸಮಾನ ಪರಿಸರವನ್ನು ನಿರ್ಮಾಣಮಾಡಬೇಕು. ಪ್ರಕೃತಿ ಬೆಳೆಸುವ ಯೋಚನೆ ನಾಗರಿಕ ಸಮಾಜಕ್ಕೆ ಬರಬೇಕು ಎಂದು ತಿಳಿಸಿದರು.

ಮನುಷ್ಯನ ಆರೋಗ್ಯ ಕ್ಷಿಣಿಸುತ್ತಿದೆ. ಮನುಷ್ಯನಿಗೆ ಆಹಾರಕ್ಕಿಂತ ಗಾಳಿ, ನೀರು, ಬೆಳಕು ಮುಖ್ಯ. ಗಾಳಿ ಮತ್ತು ನೀರಿಗೆ ಅಹಾಕಾರ ಎದಿದೆ. ಪ್ರಕೃತಿಯ ಮುನಿಸಿನ ಕಾರಣಕ್ಕೆ ಕರೋನದಂತಹ ಬಿಕ್ಕಟ್ಟುಗಳನ್ನು ನಾವು ಈ ಸಂದರ್ಭದಲ್ಲಿ ನೋಡುತ್ತಿದ್ದೇವೆ. ನಿಸರ್ಗದ ಮೌಲ್ಯವನ್ನು ಪ್ರತಿಯೊಬ್ಬರು ಅರಿಯಬೇಕು. ಹಣ ನೀಡಿದರೆ ಉತ್ತಮ ನಿಸರ್ಗ ಸಿಗದು, ಉತ್ತಮ ನಿಸರ್ಗವನ್ನು ಸೃಷ್ಠಿಸುವಲ್ಲಿ ಮಾನವ ಹೆಚ್ಚು ಶ್ರಮಿಸಬೇಕು ಎಂದು ಹೇಳಿದರು.

ಯೋಜನೆಗಳಿಗೆ ಬಲಿಯಾಗುವ ಸಸ್ಯಸಂಪತ್ತನ್ನು ಪರ್ಯಾಯವಾಗಿ ಬೆಳಸಬೇಕು. ಯೋಜನೆಗಳ ಹೆಸರಲ್ಲಿ ದಿನಗಳನ್ನು ಕಳೆದರೆ ಪರಿಸರದಲ್ಲಿ ವ್ಯತಿರೀಕ್ತ ಪರಿಣಾಮಗಳು ಉಂಟಾಗುತ್ತವೆ. ಆದ್ದರಿಂದ ಭವಿಷ್ಯದಲ್ಲಿ ಪ್ರಕೃತಿಯ ಸಂಪತ್ತು ಹೆಚ್ಚಿಸುವ ಚಿಂತನೆಗಳನ್ನು ಪ್ರತಿಯೊಬ್ಬರು ರೂಢಿಸಿಕೊಳ್ಳಬೇಕೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಭೋವಿ ಗುರುಪೀಠದ ಸಿಇಒ ಗೌನಹಳ್ಳಿ ಗೋವಿಂದಪ್ಪ, ಮುಖ್ಯೋಪಾಧ್ಯಾಯರಾದ ಶಿವಕುಮಾರ್, ಶ್ರೀಧರ್ ಉಪಸ್ಥಿತರಿದ್ದರು. ಎಸ್.ಜೆ.ಎಸ್.ಸಮೂಹ ಸಂಸ್ಥೆಯ ವಿದ್ಯಾರ್ಥಿಗಳು ಮತ್ತು ಬೋಧಕ, ಬೋಧಕೇತರ ವರ್ಗ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!