Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಯುಗ ಯುಗಾದಿ ಕಳೆದರು ಯುಗಾದಿ ಮರಳಿ ಬಂದಿದೆ ; ಹಬ್ಬದ ಸಡಗರಕ್ಕೆ ಸುದ್ದಿಒನ್ ಶುಭಾಶಯಗಳು

---Advertisement---

ಇಂದು ಯುಗಾದಿ ಹಬ್ಬ. ಹಿಂದೂಗಳ ಹೊಸ ವರ್ಷಾರಂಭ. ಮರ ಗಿಡಗಳು ಹಳೆ ಎಲೆಗಳನ್ನ ಉದುರಿಸಿ ಹೊಸ ಚಿಗುರನ್ನ ಹೊತ್ತು, ಸುಂದರವಾಗಿ ಕಾಣಿಸುತ್ತಿದೆ. ಯುಗ ಯುಗಾದಿ ಕಳೆದರು ಯುಗಾದಿ ಮರಳಿ ಬಂದಿದೆ. ಯುಗಾದಿಯೂ ಸಂತೋಷ, ಸಂಭ್ರಮ, ಭರವಸೆಯ ಹೊಸ ಹಬ್ಬವಾಗಿದೆ. ಯುಗಾದಿ ಹಬ್ಬವನ್ನು ಶತ ಶತಮಾನಗಳಿಂದಲೂ ಆಚರಣೆ ಮಾಡಿಕೊಂಡು ಬರಲಾಗಿದೆ. ಶಾತವಾಹನ ರಾಜವಂಶಕ್ಕೂ ಬಹಳ ಹಿಂದಿನದ್ದು. ಹಿಂದೂ ಕ್ಯಾಲೆಂಡರ್ ಪ್ರಕಾರ ಇಂದಿನಿಂದ ಹೊಸ ವರ್ಷ ಆರಂಭವಾಗಿದೆ.

ಕರ್ನಾಟಕದ ಮಂದಿ ಹಾಗೂ ಆಂಧ್ರಪ್ರದೇಶದವರು ಚಾಂದ್ರಾಮಾನ ಯುಗಾದಿಯನ್ನ ಆಚರಿಸುತ್ತಾರೆ. ಯುಗಾದಿ ಹಬ್ಬವೂ ಭಾನುವಾರ ಅಂದ್ರೆ ಇಂದು ಬಂದಿದ್ದು, ಶುಜ್ಲ ಪಕ್ಷದ ಪಾಡ್ಯ ತಿಥಿ ಮಾರ್ಚ್ 29ರ ಸಂಜೆ 5.57ಕ್ಕೆ ಶುರುವಾಗಿ ಮಾರ್ಚ್ 30ರ ಅಪರಾಹ್ನ 2.19ಕ್ಕೆ ಮುಕ್ತಾಯವಾಗಲಿದೆ. ಯುಗಾದಿ ಹಬ್ನದ ದಿನ ಎಲ್ಲಾ ದೇವಸ್ಥಾನಗಳಲ್ಲೂ ವಿಶೇಷ ಪೂಜೆ ಇರಲಿದೆ. ಮನೆಗಳಲ್ಲೂ ಸಿಹಿ ಮಾಡಿ, ದೇವರಿಗೆ ನೈವೇದ್ಯ ಮಾಡಿ ಹಬ್ಬವನ್ನು ಆಚರಣೆ ಮಾಡುತ್ತಾರೆ.

ಯುಗಾದಿ ಹಬ್ಬದ ದಿನದಂದು ಎಣ್ಟೆ ಸ್ನಾನ ಮಾಡುವುದಕ್ಕೆ ಹೆಚ್ಚಿನ ಮಹತ್ವವಿದೆ. ಇದನ್ನು ಅಭ್ಯಂಜನ ಸ್ನಾನವೆಂದೂ ಕರೆಯಲಾಗುತ್ತದೆ. ಯುಗಾದಿ ಹಬ್ಬ ಆರಂಭವಾಗುವುದೇ ಈ ಅಭ್ಯಂಜನ ಸ್ನಾನದಿಂದ. ಈ ದಿನ ಅಭ್ಯಂಜನ ಸ್ನಾನ ಮಾಡುವುದರಿಂದ ದೇಹ ಮತ್ತು ಆತ್ಮ ಶುದ್ಧೀಕರಣಗೊಳ್ಳುತ್ತದೆ. ಅಭ್ಯಂಗ ಸ್ನಾನದ ನಂತರ ಹೊಸ ಬಟ್ಟೆಯನ್ನು ಇಲ್ಲವೇ, ಒಗೆದು ಸ್ವಚ್ಛಗೊಳಿಸಿದ ಬಟ್ಟೆಯನ್ನು ಧರಿಸುವ ಸಂಪ್ರದಾಯವಿದೆ. ಹೀಗಾಗಿ ಬೆಳಗ್ಗೆಯೇ ಮನೆಯಲ್ಲಿರುವ ಎಲ್ಲರಿಗೂ ಎಣ್ಣೆ ಹಚ್ಚಲಾಗುತ್ತದೆ. ಸ್ವಲ್ಪ ಸಮಯದ ನಂತರ ಸ್ನಾನ ಮಾಡಿ, ದೇವರಿಗೆ ಪೂಜೆ ಮಾಡಿ, ಹಬ್ಬವನ್ನ ಆಚರಿಸುತ್ತಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment