Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚೆಲುವರಾಯಸ್ವಾಮಿ ಪರಿಹಾರ ನೀಡಲು ಹೋದಾಗ ತಿರಸ್ಕರಿಸಿದ ಮೃತ ಬಾಲಕಿ ತಂದೆ..!

---Advertisement---

 

ಮಂಡ್ಯ; ಹೃತೀಕ್ಷಾ ಎಂಬ ಪುಟ್ಟ ಬಾಲಕಿ ನಿನ್ನೆ ಮೃತಪಟ್ಟಿದ್ದಾಳೆ. ನಾಯಿ ದಾಳಿಗೊಳಗಾಗಿದ್ದ ಹೃತೀಕ್ಷಾಳನ್ನ ಆಸ್ಪತ್ರೆಗೆ ಸಾಗಿಸುವಾಗ ಪೊಲೀಸರು ತಡೆದಿದ್ದಾರೆ. ಈ ವೇಳೆ ಮಗು ಕೆಳಗೆ ಬಿದ್ದು, ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದೆ. ಮಗಳನ್ನು ನೆನೆದು ತಂದೆ ತಾಯಿಯ ರೋದನೆ ಮುಗಿಲು ಮುಟ್ಟಿದೆ. ಇಂದು ಸಚುವ ಚೆಲುವರಾಯಸ್ವಾಮಿ ಅವರ ಮನೆಗೆ ಹೋಗಿ, ಸಾಂತ್ವಾನ ತಿಳಿಸಿದ್ದಾರೆ.

ಚೆಲುವರಾಯಸ್ವಾಮಿ ಅವರು ಕುಟುಂಬದವರನ್ನು ಭೇಟಿಯಾದಾಗ ಮೃತ ಬಾಲಕಿಯ ತಂದೆ, ಮಗಳ ಜೊತೆಗೆ ಇದ್ದಂತ ಫೋಟೋಗಳನ್ನ ತೋರಿಸುತ್ತಾ, ನೋಡಿ ಸರ್ ನನ್ನ ಮಗಳನ್ನ. ನಂಗೆ ಕೈ ತುತ್ತು ತಿನ್ನಿಸ್ತಾ ಇದ್ದಳು.ಪಪ್ಪಾ‌ನನಗೆ ನೀನೆ ಊಟ ಮಾಡಿಸು ಅಂತ ಇದ್ದಳು. ಈಗ ನಾನು ಏನು ಮಾಡ್ಲಿ ಅಂತ ಕಣ್ಣೀರು ಹಾಕಿದ್ದಾರೆ. ಮಗಳನ್ನು ಕಳೆದುಕೊಂಡ ತಂದೆಗೆ ಅವರಿಂದ ಯಾವುದೇ ರೀತಿಯ ಸಾಂತ್ವಾನವನ್ನ ಹೇಳುವುದಕ್ಕೆ ಸಾಧ್ಯವಾಗಿಲ್ಲ. ಸಚಿವ ಚೆಲುವರಾಯಸ್ವಾಮಿ ಅವರು ಸಾಧ್ಯವಾದಷ್ಟು ಸಮಾಧಾನ ಮಾಡಿದ್ದಾರೆ. ಬಳಿಕ ಪರಿಹಾರವನ್ನ ನೀಡಿದ್ದಾರೆ.

ಮಗಳಿಗೆ ನಾಯಿ ಕಚ್ಚಿದಾಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರು. ಆದರೆ ಮದ್ದೂರಿನಲ್ಲಿ ಒಂದೇ‌ ಒಂದು ಇಂಜೆಕ್ಷನ್ ಕೊಟ್ಟಿದ್ದರೆ ಇಷ್ಟೆಲ್ಲ ಸಮಸ್ಯೆ ಆಗ್ತಾ ಇರಲಿಲ್ಲ. ಇಂಜೆಕ್ಷನ್ ಇಲ್ಲ ಅಂತ ಅಷ್ಟು ದೂರ ಕಳುಹಿಸಿದರು ಎಂದು ಸಚಿವರ ಮುಂದೆ ಕಣ್ಣೀರು ಹಾಕಿದರು. ಸಚಿವ ಚೆಲುವರಾಯಸ್ವಾಮಿ ಅವರು ಕೂಡ ಸಾಂತ್ವಾನ ಹೇಳಿದ್ದು, ಒಂದೂವರೆ ಲಕ್ಷ ಹಣವನ್ನು ಪರಿಹಾರ ನೀಡಿದ್ದಾರೆ. ಆದರೆ ಆ ನೋವಿನಲ್ಲಿದ್ದ ಅಶೋಕ್ ಅವರು ಪರಿಹಾರ ಹಣ ಬೇಡ ಎಂದಿದ್ದಾರೆ ಎನ್ನಲಾಗಿದೆ. ಯಾಕಂದ್ರೆ ಮಗಳನ್ನ ಕಳೆದುಕೊಂಡಿರುವ ನೋವು ಅಷ್ಟು ಕಾಡುತ್ತಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment