Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಹಾದಾಯಿಗಾಗಿ ಮತ್ತೆ ಹೋರಾಟ ಶುರು : ಧಾರವಾಡದಿಂದ ಆರಂಭ

---Advertisement---

ಧಾರವಾಡ; ಇಂದು ಧಾರವಾಡದಿಂದ ಮಹಾದಾಯಿ ಹೋರಾಟಕ್ಕೆ ರೈತರು ಚಾಲನೆ ನೀಡಿದ್ದಾರೆ. ಕಡಾಪ ಮೈದಾನದಿಂದ ರ್ಯಾಲಿ ಆರಂಭವಾಗಿದೆ. ನಗರದ ಪ್ರಮುಖ ಬೀದಿಗಳಲ್ಲಿ ರೈತರ ರ್ಯಾಲಿ ಮೆರವಣಿಗೆ ಹೊರಟು, ಜಿಲ್ಲಾಧಿಕಾರಿ ಕಚೇರಿಯನ್ನ ತಲುಪಿದೆ. ಉತ್ತರ ಕರ್ನಾಟಕದ ಹಲವು ಭಾಗದ ರೈತರು, ಹೋರಾಟಗಾರರು ಈ ಸಭೆಯಲ್ಲಿ ಭಾಗಿಯಾಗಿದ್ದರು‌. ಅಷ್ಟೇ ಅಲ್ಲ ಜ್ಯೂಬಿಲಿ ಸರ್ಕಲ್ ಸಂಪೂರ್ಣ ಬಂದ್ ಆಗಿದೆ.

ಜೊತೆಗೆ ಜ್ಯುಬಿಲಿ ಸರ್ಕಲ್ ನಲ್ಲಿ ವಾಹನ ಸಂಚಾರವನ್ನ ತಡೆಯಲಾಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಷ್ಟಕ್ಕೂ ಈ ಹೋರಾಟ ನಿನ್ನೆ ಮೊನ್ನೆಯದಲ್ಲ. ಸುಮಾರು ನಾಲ್ಕು ದಶಕಗಳಿಂದ ನಡೆಯುತ್ತಿದೆ. ಕಳಸಾ ಬಂಡೂರಿ ಯೋಜನೆ ನದಿ ನೀರು ಗೋವಾ ಗಡಿಯಿಂದ ಕರ್ನಾಟಕಕ್ಕೆ ತರಬೇಕು. ಈ ಸಂಬಂಧ ನಾಲ್ಕು ದಶಕಗಳಿಂದಾನೂ ಹೋರಾಟ ನಡೆಯುತ್ತಿದೆ. ಆದರೆ ಇವತ್ತಿನ ತನಕ ಒಂದೇ ಒಂದು ಹನಿ ನೀರು ಮಾತ್ರ ಬಂದಿಲ್ಲ.

ಮಹಾದಾಯಿ ಕಳಸ ಬಂಡೂರು ಹೋರಾಟ ದಶಕಗಳಿಂದ ನಡೆಯುತ್ತಿದ್ದರೂ 2015ರ ಜುಲೈ 15ರಿಂದ ತೀವ್ರಗೊಂಡಿತ್ತು. ಬಂಡಾಯ ಭೂಮಿ ಎನಿಸಿದ ನರಗುಂದದಲ್ಲಿ ಅಂದು ಆರಂಭಗೊಂಡ ಹೋರಾಟ ನಿರಂತರವಾಗಿ ನಡೆಯುತ್ತಲೇ ಇದೆ. ಈ ನಿರಂತರ ಆಂದೋಲನದಲ್ಲಿ ಭಾಗವಹಿಸಿದವರು ಪೊಲೀಸರ ಲಾಠಿ ಏಟು ಸಹಿತ ತಿಂದಿದ್ದಾರೆ. ಮನೆ ಕಡೆಯ ಕೆಲಸ ಕಾರ್ಯ, ಕಾರ್ಯಕ್ರಮಗಳನ್ನು ಮರೆತು ಹೋರಾಟದಲ್ಲಿ ಭಾಗವಹಿಸಿದ್ದರು.ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ನಡುವಿನ ನೀರು ಹಂಚಿಕೆ ವಿವಾದಗನ್ನು ಪರಿಹರಿಸಲು ರಾಜ್ಯ ನದಿ ನೀರು ವಿವಾದ ಕಾಯ್ದೆ 1956ರ ಸೆಕ್ಷನ್​ 4ರ ಅನ್ವಯ ಮಹದಾಯಿ ನ್ಯಾಯಮಂಡಳಿ ಸ್ಥಾಪಿಸಲಾಗಿದೆ. ನ್ಯಾಯಮಂಡಳಿಯು 2018ರ ಅಗಸ್ಟ್​ನಲ್ಲಿ ವರದಿ ಸಲ್ಲಿಸಿದೆ. ಈ ವರದಿಯ ಬಗ್ಗೆ 2020ರ ಫೆಬ್ರವರಿ 20 ರಂದು ಅಧಿಸೂಚನೆ ಹೊರಡಿಸಲಾಗಿದೆ. ಆದರೆ, ಮಹದಾಯಿ ನೀರು ಇನ್ನೂವರೆಗೂ ಬಂದಿಲ್ಲ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...