Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಿವಮೊಗ್ಗವನ್ನು ಬೆಚ್ಚಿ ಬೀಳಿಸಿದ ಗ್ಯಾಂಗ್ ವಾರ್..!

Facebook
Twitter
Telegram
WhatsApp

ಶಿವಮೊಗ್ಗ: ನಿನ್ನೆ ಸಂಜೆ ಶಿವಮೊಗ್ಗದ ಮೀನು ಮಾರುಕಟ್ಟೆ ಬಳಿ ಜನರೆಲ್ಲ ಬೆಚ್ಚಿ ಬೀಳುವಂತೆ ಘಟನೆಯೊಂದು ನಡೆದಿದೆ. ಸಂಜೆ 6 ಗಂಟೆಯ ವೇಳೆಗೆ ಹಳೇ ದ್ವೇಷದಿಂದ ಇಬ್ಬರು ರೌಡಿಶೀಟರ್ ಗಳ ಬರ್ಬರ ಹತ್ಯೆಯಾಗಿದೆ. ಇದೇ ಗಲಾಟೆಯಲ್ಲಿ ಗಾಯಗೊಂಡಿದ್ದ ಮತ್ತೊಬ್ಬ ರೌಡಿ ಶೀಟರ್ ಖುರೇಶಿ ಕೂಡ ಸಾವನ್ನಪ್ಪಿದ್ದಾನೆ. ರೌಡಿಶೀಟರ್ ಖುರೇಶಿ ಮಟನ್ ಸ್ಟಾಲ್ ನಲ್ಲಿ ಇದ್ದಿದ್ದನ್ನು ಖಚಿತಪಡಿಸಿಕೊಂಡು ಶೋಹಿಲ್ ಮತ್ತು ಗೌಸ್ ತಂಡ ಏಕಾಏಕಿ ದಾಳಿ ನಡೆಸಿದೆ.

ಮಚ್ಚು, ಲಾಂಗ್ ನಿಂದ ಬೀಸಿದ್ದಾರೆ. ಇದರಿಂದ ಖುರೇಶಿ ಹುಡುಗರು ಕೂಡ ರೊಚ್ಚಿಗೆದ್ದಿದ್ದು, ಪ್ರತಿ ದಾಳಿ ನಡೆಸಿದ್ದಾರೆ. ಶೋಹಿಲ್ ಹಾಗೂ ಗೌಸ್ ಗ್ಯಾಂಗ್, ಚಪ್ಪಡಿ ಕಲ್ಲು, ಸೈಕಲ್ ಎತ್ತಿ ಹಾಕಿ ಇಬ್ಬರನ್ನು ಕೊಂದೇ ಬಿಟ್ಟರು. ಬಳಿಕ ಅಲ್ಲಿಂದ ಪುಡಿ ರೌಡಿಗಳು ಎಸ್ಕೇಪ್ ಆದರು. ಖುರೇಶಿಯನ್ನು ತಕ್ಷಣ ನಾರಾಯಣ ಹೃದಯಾಲಯಕ್ಕೆ ಸೇರಿಸಿ ಚಿಕಿತ್ಸೆ ಕೊಡಿಸಲಾದರೂ, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದನು. ಸೇಬು ಹಾಗೂ ಗೌಸ್ ಕೂಡ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ತೆಗೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಇವರು ಮಾದಕ ವಸ್ತುಗಳ ಮಾರಾಟ ಜಾಲದಲ್ಲಿ ಭಾಗಿ ಆಗಿರುವ ಶಂಕೆ ಇದೆ. ಹೀಗಾಗಿ ಪೊಲೀಸರು ನಾಲ್ಕು ತಂಡಗಳನ್ನು ರಚಿಸಿ ತನಿಖೆ ನಡೆಸುತ್ತಿದ್ದಾರೆ. ಬೀದಿ ಬೀದಿಯಲ್ಲಿಯೇ ಮಚ್ಚು, ಲಾಂಗು ಝಳಪಿಸಿದ್ದು, ಶಿವಮೊಗ್ಗದ ಜನತೆ ಬೆಚ್ಚಿ ಬಿದ್ದಿದ್ದಾರೆ. ಪೊಲೀಸರು ಕೂಡ ತೀವ್ರ ತನಿಖೆ ನಡೆಸುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ಮೇ 20: ಬಿಜೆಪಿಯ ನಿರಂತರ ಅಪಪ್ರಚಾರದ ನಡುವೆಯೂ ಗ್ಯಾರಂಟಿಗಳು ಜನರ ಮನೆ ಮನೆ ತಲುಪಿವೆ. ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಕಿ ಅಂಶಗಳ

ಬೆಂಗಳೂರಿನಲ್ಲಿ ನಟ-ನಟಿಯರ ರೇವ್ ಪಾರ್ಟಿಯಲ್ಲಿ ಸಿಕ್ಕಿದ್ದೇನು..?

  ಬೆಂಗಳೂರು: ಇಂದು ಬೆಳಗಿನ ಜಾವ 3 ಗಂಟೆ ವೇಳೆಗೆ ಎಲೆಕ್ಟ್ರಾನಿಕ್ ಸಿಟಿ ಬಳಿಯ ಫಾರ್ಮ್ ಹೌಸ್ ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ತೆಲುಗು

ಸವಾಲುಗಳ ನಡುವೆಯೇ ಜಯಭೇರಿ ಬಾರಿಸಿದ ಸಿದ್ದರಾಮಯ್ಯ ಸರ್ಕಾರ : ಇಂದಿಗೆ ಒಂದು ವರ್ಷ

  2023 ಮೇ 20ರಂದು ಕಾಂಗ್ರೆಸ್ ಪಕ್ಷ ಸರ್ಕಾರ ರಚನೆ ಮಾಡಿತ್ತು, ಸಿದ್ದರಾಮಯ್ಯ ಅವರು ಸಿಎಂ ಆಗಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದರು. ಇಂದಿಗೆ ಆ ಸಂಭ್ರಮದ ದಿನಕ್ಕೆ ವರ್ಷದ ಸಂಭ್ರಮ. ಸಿದ್ದರಾಮಯ್ಯ ಸರ್ಕಾರ

error: Content is protected !!