Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಾಮುಂಡೇಶ್ವರಿ ತಾಯಿಗೂ 2 ಸಾವಿರ ನೀಡಲು ಸರ್ಕಾರ ನಿರ್ಧಾರ

---Advertisement---

ಮೈಸೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನುಡೊದಂತೆ ನಡೆದಿದೆ. ಗೃಹಲಕ್ಷ್ಮೀ ಯೋಜನೆಯಡಿ, ಪ್ರತಿ ತಿಂಗಳು ಮನೆಯ ಯಜಮಾನಿಗೆ ಎರಡು ಸಾವಿರ ರೂಪಾಯಿ ಹಣ ನೀಡುತ್ತಿದೆ. ಇದೀಗ ತಾಯಿ ಚಾಮುಂಡಿಗೂ ಗೃಹಲಕ್ಷ್ಮೀ ಯೋಜನೆಯಡಿ ಹಣ ನೀಡಲು ಸರ್ಕಾರ ಮುಂದಾಗಿದೆ.

ದಸರಾ ಪೂಜಾ ಸಮಯದಲ್ಲಿಯೇ ತಾಯಿ, ನಾಡ ಅಧಿದೇವತೆ. ಹೀಗಾಗಿ ಚಾಮುಂಡೇಶ್ವರಿಗೂ ಪ್ರತಿ ತಿಂಗಳು ಗೃಹಲಕ್ಷ್ಮೀ ಯೋಜನೆಯಡಿ ಎರಡು ಸಾವಿರ ನೀಡಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಳಿ ಮನವಿ ಮಾಡಲಾಗಿತ್ತು. ಅದರಂತೆ ಸರ್ಕಾರ ಆ ಮನವಿಯನ್ನು ಪುರಸ್ಕಾರ ಮಾಡಿದ್ದು, ಮುಂದಿನ ತಿಂಗಳಿನಿಂದ ತಾಯಿ ಚಾಮುಂಡೇಶ್ವರಿಗೂ ಗೃಹಲಕ್ಷ್ಮೀ ಯೋಜನೆ ಅಪ್ಲೈ ಆಗಲಿದೆ.

ಪ್ರತಿ ತಿಂಗಳು 2 ಸಾವಿರದಂತೆ 59 ತಿಂಗಳ ಹಣವನ್ನು ಒಮ್ಮೆಗೆ ನೀಡಲು ನಿರ್ಧಾರ ಮಾಡಲಾಗಿದೆ. ಒಟ್ಟು 1,18,000 ಸಾವಿರ ರೂಪಾಯಿ ಹಣವನ್ನು ತಾಯಿ ಚಾಮುಂಡಿ ಹೆಸರಿಗೆ ನೀಡಲಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೃಹಲಕ್ಷ್ಮೀ ಯೋಜನೆಯ ಹಣವನ್ನು ತಾಯಿ ಚಾಮುಂಡಿಗೆ ನೀಡಲಿದ್ದಾರೆ. ಪ್ರತಿ ತಿಂಗಳು 2 ಸಾವಿರ ನೀಡುವಂತೆ, ತಮ್ಮ ವೈಯಕ್ತಿಕ ಹಣದಲ್ಲಿ ತಾಯಿಗೆ ಅರ್ಪಿಸಲಿದ್ದಾರೆ.

ಈಗಾಗಲೇ ರಾಜ್ಯದಲ್ಲಿ ಪ್ರತಿ ಮನೆಯ ಗೃಹಿಣಿಯರು ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಆದರೆ ಸಾಕಷ್ಟು ಮಹಿಳೆಯರಿಗೆ ಈ ಹಣ ಇನ್ನು ತಲುಪಿಲ್ಲ. ಕೆಲವರಿಗೆ ಈ ತಿಂಗಳಿನಿಂದ ಮೆಸೇಜ್ ಬಂದಿದೆ. ಹೀಗಾಗಿ ಮುಂದಿನ ತಿಂಗಳಿನಿಂದ ಗೃಹಲಕ್ಷ್ಮೀ ಯೋಜನೆಯ ಹಣ ಸಂದಾಯವಾಗಬಹುದು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment