Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಟನ್ ಕ್ಯಾಂಡಿ ಮಾರಾಟಕ್ಕೆ ಷರತ್ತು ವಿಧಿಸಿದ ಸರ್ಕಾರ : ಏನದು..?

Facebook
Twitter
Telegram
WhatsApp

ಬೆಂಗಳೂರು: ಕಾಟನ್ ಕ್ಯಾಂಡಿ ಹಾಗೂ ಗೋಬಿ ಮಂಚೂರಿಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾದ ಹಿನ್ನೆಲೆ ಕೆಲವು ರಾಜ್ಯಗಳು ಕಾಟನ್ ಕ್ಯಾಂಡಿಯನ್ನು ಸಂಪೂರ್ಣವಾಗಿ ಬ್ಯಾನ್ ಮಾಡಲಾಗಿದೆ. ಈ ವಿಚಾರ ಬೆಳಕಿಗೆ ಬಂದ ಮೇಲೆ ರಾಜ್ಯದಲ್ಲೂ ಕಾಟನ್ ಕ್ಯಾಂಡಿ ಬಗ್ಗೆ ಚರ್ಚೆಯಾಗಿತ್ತು. ಇದೀಗ ಮಾರಾಟಕ್ಕೆ ಒಪ್ಪಿಗೆ ನೀಡಿದ್ದಾದರೂ ಒಂದು ಕಂಡಿಷನ್ ಹಾಕಲಾಗಿದೆ.

ಕಾಟನ್ ಕ್ಯಾಂಡಿ ಅಂದ್ರೆ ಮಕ್ಕಳಿಗೆ ಇನ್ನಿಲ್ಲದ ಇಷ್ಟ. ಅದನ್ನು ತಿಂದಾಗ ನಾಲಿಗೆ ಪಿಂಕ್ ಆದಾಗ ನೋಡಿಕೊಳ್ಳುವುದಕ್ಕೇನೆ ಮಕ್ಕಳಿಗೆ ಖುಷಿ. ಆದರೆ ಇಂಥ ಕ್ಯಾಂಡಿಯ ಕಲರ್ ಮಕ್ಕಳ ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಇದರಿಂದಾನೇ ಕ್ಯಾನ್ಸರ್ ಬರುವ ಸಾಧ್ಯತೆ ಇದೆ. ಈ ಬಗ್ಗೆ ಸರ್ಕಾರ ಸೀರಿಯಸ್ ಆಗಿ ಗಮನ ಹರಿಸಿದ್ದು, ಇಂದು ಈ ಸಂಬಂಧ ಮಹತ್ವದ ಸುದ್ದಿಗೋಷ್ಟಿ ನಡೆಸಿದ್ದಾರೆ‌.

 

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಕಾಟನ್ ಕ್ಯಾಂಡಿಯ 25 ಮಾದರಿಗಳನ್ನು ಸಂಗ್ರಹ ಮಾಡಿ, ಅವುಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈ ವೇಳೆ ಅವುಗಳ 15 ಮಾದರಿಯಲ್ಲಿ ಕೃತಕ ಬಣ್ಣಗಳು ಕಂಡು ಬಂದಿದೆ. ಅದರಲ್ಲಿ ರೋಡಮೈನ್ ಬಿ ಎಂಬ ಕ್ಯಾನ್ಸರ್ ಗೆ ಸಂಬಂಧ ಪಟ್ಟ ಅಂಶವೊಂದು ಕಂಡು ಬಂದಿದೆ. ಹೀಗಾಗಿ ಕಾಟನ್ ಕ್ಯಾಂಡಿಯನ್ನು ಇನ್ನು ಮುಂದೆ ಮಾರಾಟ ಮಾಡಬಹುದು. ಆದರೆ ಆ ಕ್ಯಾಂಡಿಯಲ್ಲಿ ಕೃತಕವಾದ ಬಣ್ಣವನ್ನು ಬಳಕೆ ಮಾಡುವಂತಿಲ್ಲ ಎಂಬ ಷರತ್ತುನ್ನು ವಿಧಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!