Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸರ್ಕಾರ ಡಿನ್ನರ್ ಕೂಟದಲ್ಲಿ ಮುಳುಗಿದೆ : ಚಿತ್ರದುರ್ಗದಲ್ಲಿ  ಆರ್. ಅಶೋಕ್ ಹೇಳಿಕೆ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ನವೆಂಬರ್.26 : ವಿಪಕ್ಷ ನಾಯಕ ಆರ್ ಅಶೋಕ್ ಇಂದು ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ ರೈತರ ಜಮೀನುಗಳಿಗೆ ಭೇಟಿ ನೀಡಿ ಬರ ಅಧ್ಯಯನ ನಡೆಸಿದ್ದಾರೆ. ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿ ಮಳೆ ಇಲ್ಲದೆ ಬರದಿಂದ ರೈತರು ಸಂಕಷ್ಟದಲ್ಲಿ ಇದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಬರ ಸಮೀಕ್ಷೆ ಮಾಡಬೇಕು, ಮಾಡಿದ್ರು ಕೂಡ ಅದು ಅರೆಬೆಂದ ಸಮೀಕ್ಷೆ ಆಗಿದೆ. ಸರ್ಕಾರ ಯಾವುದೋ ಒಂದು ಆಪ್ ಬಿಟ್ಟಿದೆ. ಅದರಲ್ಲಿ ರೈತರ ಮಾಹಿತಿಯೇ ಇಲ್ಲ. ಸರ್ಕಾರ ಕಾಟಾಚಾರಕ್ಕೆ ಸಮೀಕ್ಷೆ ಮಾಡಿದೆ. ಪಕ್ಕದ ಆಂಧ್ರದಲ್ಲಿ ಹೊಸ ತಳಿ ಬಂದಿದೆ
ಆ ತಳಿಯನ್ನು ರೈತರಿಗೆ ಪರಿಚಯ ಮಾಡಬೇಕು ಎಂದರು.

ರಾಜ್ಯದಲ್ಲಿ ಬರ ಬಂದಿದೆ ಮಂತ್ರಿಗಳು ಪತ್ತೆ ಇಲ್ಲ, ಇತ್ತ ಮುಖ್ಯಮಂತ್ರಿಗಳು ಎಲ್ಲರೂ ಸಮೃದ್ಧಿ ಆಗಿದ್ದೇವೆ ಎಂದು ಪ್ರಚಾರ ಕೊಟ್ಟಿದ್ದಾರೆ. ರೈತರು ಎಲ್ಲಿ ನೆಮ್ಮದಿಯಾಗಿ ಇದ್ದಾರೆ.

ರಾಜ್ಯದಲ್ಲಿ ರೈತರು ಸಂಕಷ್ಟದಲ್ಲಿ ಇದ್ದಾರೆ ಎಂದು ಪ್ರಶ್ನೆ ಹಾಕಿದರು. ಸಿಎಂ ಇಳಿತಾರೋ, ಸಿಎಂ ಏರುತ್ತಾರೋ ಗೊತ್ತಿಲ್ಲ.
ಗ್ರಾಮ ಪಂಚಾಯಿತಿ ಎಲೆಕ್ಷನ್ ಅದಂಗೆ ಆಗಿದೆ. ಗೃಹ ಸಚಿವ ಡಾ ಜಿ ಪರಮೇಶ್ವರ್ ಮನೆಯಲ್ಲಿ ಡಿನ್ನರ್ ಕೂಟ ಮಾಡ್ತಾರೆ. ಸರ್ಕಾರ ಡಿನ್ನರ್ ಕೂಟದಲ್ಲಿ ಮುಳುಗಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

 

ಕೆಲವರು ಅಸಮಾಧಾನದಿಂದ ದುಬೈಗೆ ಹೋಗಿದ್ದಾರೆ. ಕೆಲವರು ಪರಿಹಾರ ನೀಡಿಲ್ಲ ಅಂದ್ರೆ ರಾಜೀನಾಮೆ ಅಂತ ಹೇಳ್ತಾರೆ
ಡಿಕೆಶಿ ಸಿಎಂ ಮಾಡಿ ಅಂತ ಹೇಳ್ತಾರೆ. ಅವರಲ್ಲೇ ಇಷ್ಟೆಲ್ಲಾ ಗೊಂದಲ ಇದೆ ಜನರ ಕಷ್ಟ ಇನ್ನೆಲ್ಲಿ ತಿಳಿಯುತ್ತೆ. ಸರ್ಕಾರದಲ್ಲಿ ಮುಕ್ತಿ ಕ್ಯಾಬಿನೆಟ್ ಆಗಿದೆ. ಕೇಸ್ ಇದ್ದವರಿಗೆ ಮುಕ್ತಿ ಕೊಡುವ ಕೆಲಸ ಮಾಡ್ತಿದೆ. ಬಳ್ಳಾರಿಯ ನಾಗೇಂದ್ರಗೆ ಮುಕ್ತಿ ಕೊಟ್ಬಿಡಿ, ಅವ್ರ ಮೇಲೆ 25 ಸಿಬಿಐ ಕೇಸ್ ಇದೆ ಮುಕ್ತಿ ಕೊಡಿ
ಮುಕ್ತಿಯ ಕ್ಯಾಬಿನೆಟ್ ಅಂತ ಬೋರ್ಡ್ ಹಾಕಿ, ಇತ್ತ ಗಣಿಧಣಿ ಜನಾರ್ದನ್ ರೆಡ್ಡಿಗೂ ಮುಕ್ತಿ ಕೊಡಿಸುವಂತೆ ಹೇಳಿದ್ದಾರೆ ಎಂದು ಮಾತಿನೂದ್ದಕ್ಕೂ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!