Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿಜೃಂಭಣೆಯಿಂದ ಜರುಗಿದ ನಿಡುಮಾಮಿಡೇಶ್ವರಿ, ಕೊಲ್ಲಾಪುರದಮ್ಮ, ಆಂಜನೇಯಸ್ವಾಮಿಯ ಜಾತ್ರಾ ಮಹೋತ್ಸವ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 19 : ಭೀಮಸಮುದ್ರ ಸಮೀಪವಿರುವ ವಿ.ಪಾಳ್ಯದಲ್ಲಿ ನಿಡುಮಾಮಿಡೇಶ್ವರಿ, ಕೊಲ್ಲಾಪುರದಮ್ಮ, ಆಂಜನೇಯಸ್ವಾಮಿಯ ಜಾತ್ರಾ ಮಹೋತ್ಸವ ಹಾಗೂ ನಾಲ್ಕನೆ ವರ್ಷದ ರಥೋತ್ಸವ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.

ಬಾಳೆಕಂದು, ಹೊಂಬಾಳೆ, ಮಲ್ಲಿಗೆ, ಸುಗಂಧರಾಜ, ಕನಕಾಂಬರ, ಸೇವಂತಿಗೆ, ಗುಲಾಬಿ, ಹಸಿರು ಪತ್ರೆ, ಬೃಹಧಾಕಾರವಾದ ಹಾರ ಹಾಗೂ ವಿವಿಧ ವರ್ಣಗಳ ಬಾವುಟಗಳಿಂದ ರಥವನ್ನು ಅಲಂಕರಿಸಲಾಗಿತ್ತು.

ನಿಡಮಾಮಿಡೇಶ್ವರಿ, ಆಂಜನೇಯ, ಕೊಲ್ಲಾಪುರದಮ್ಮ, ಕರಿಮಾರಮ್ಮ, ಯಲ್ಲಮ್ಮ, ಕುಕ್ಕುವಾಡೇಶ್ವರಿ, ದುರುಗಮ್ಮ ದೇವರುಗಳನ್ನು ವಿಶೇಷವಾಗಿ ಸಿಂಗರಿಸಿ ರಥದಲ್ಲಿ ಕೂರಿಸಿದ ನಂತರ ನೂರಾರು ಭಕ್ತರು ರಥವನ್ನು ಎಳೆದರು. ರಥೋತ್ಸವ ವೇಳೆಯಲ್ಲಿ ಜಮಾಯಿಸಿದ್ದ ಭಕ್ತರು ರಥದ ಕಳಸಕ್ಕೆ ಬಾಳೆಹಣ್ಣುಗಳನ್ನು ಎಸೆದು ಹರಕೆ ತೀರಿಸಿಕೊಂಡರು.

ರಥೋತ್ಸವಕ್ಕೆ ಆಗಮಿಸಿದ್ದ ಭಕ್ತರಿಗೆ ಅಲ್ಲಲ್ಲಿ ತಂಪಾದ ಮಜ್ಜಿಗೆಯನ್ನು ವಿತರಿಸಲಾಯಿತು. ಸುತ್ತಮುತ್ತಲಿನ ಹತ್ತಾರು ಗ್ರಾಮಗಳ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಜಾತ್ರೆಯಲ್ಲಿ ಪಾಲ್ಗೊಂಡು ಭಕ್ತಿ ಸಮರ್ಪಿಸಿದರು.

ನಿಡುಮಾಮಿಡೇಶ್ವರಿ ದೇವಸ್ಥಾನ ಜೀರ್ಣೋದ್ದಾರ ಸೇವಾ ಸಮಿತಿ ಅಧ್ಯಕ್ಷ ನವೀನ್‍ಕುಮಾರ್, ಜಂಟಿ ಕಾರ್ಯದರ್ಶಿ ಸ್ವಾಮಿ, ಖಜಾಂಚಿ ಕೃಷ್ಣಪ್ಪ, ವಿ.ಪಾಳ್ಯದ ಮುಖಂಡರುಗಳಾದ ಕೊಟ್ರೇಶಪ್ಪ, ಸತೀಶ್, ನಾಗಪ್ಪ, ಹನುಮಂತಪ್ಪ, ಕರಿಯಪ್ಪ, ಕೆಂಚವೀರಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಕೆ.ಎಸ್.ಜಯಪ್ರತಿಭಾ ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...