Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಖಾಯಂ ಹುದ್ದೆಗೆ ಆಗ್ರಹಿಸಿ ತುಮಕೂರಿನಿಂದ ಬೆಂಗಳೂರಿಗೆ ಪಾದಯಾತ್ರೆ ಶುರು ಮಾಡಿದ ಅತಿಥಿ ಉಪನ್ಯಾಸಕರು..!

---Advertisement---

ತುಮಕೂರು: ತಮ್ಮ ಸೇವೆ ಖಾಯಂಗಾಗಿ ಒತ್ತಾಯಿಸಿ, ಇಂದು ತುಮಕೂರಿನಿಂದ ಬೆಂಗಳೂರಿಗೆ ಪಾದಯಾತ್ರೆ ಮೂಲಕ ಹೊರಟಿದ್ದಾರೆ. ಸರ್ಕಾರದಿಂದ ಪರ್ಯಾಯ ವ್ಯವಸ್ಥೆ ಬಗ್ಗೆ ಸೂಚನೆ ಇದ್ದರು, ಅದಕ್ಕೆ ತಲೆಕೆಡಿಸಿಕೊಳ್ಳದ ಅತಿಥಿ ಉಪನ್ಯಾಸಕರು, ನಿಗದಿಯಂತೆ ಪಾದಯಾತ್ರೆ ಆರಂಭಿಸಿದ್ದಾರೆ.

ಸುಮಾರು 80 ಕಿ.ಮೀಟರ್ ತನಕ ಪಾದಯಾತ್ರೆ ಆರಂಭವಾಗಿದೆ. ಸಿದ್ಧಗಂಗಾ ಮಠದಿಂದ ಹಿಡಿದು, ಫ್ರೀಡಂ ಪಾರ್ಕ್ ತನಕ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಈ ಪಾದಯಾತ್ರೆ ಜನವರಿ 3ರಂದು ಫ್ರೀಡಂ ಪಾರ್ಕ್ ತಲುಪಲಿದೆ. ಬಳಿಕ ನಾನಾ ಕಡೆಗಳಿಂದ ಅತಿಥಿ ಉಪನ್ಯಾಸಕರು ಬಂದು ಸೇರುತ್ತಾರೆ. ಈ ಮೂಲಕ ಬೃಹತ್ ಪ್ರತಿಭಟನೆಗೆ ಫ್ರೀಡಂ ಪಾರ್ಕ್ ಸಾಕ್ಷಿಯಾಗಲಿದೆ. ಇದು ಸರ್ಕಾರಕ್ಕೆ ನಿಜಕ್ಕೂ ತಲೆ ನೋವಾಗಿ ಪರಿಣಮಿಸಬಹುದು.

ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿರೋಧ ಪಕ್ಷದಲ್ಲಿದ್ದಾಗ ಅತಿಥಿ ಉಪನ್ಯಾಸಕರ ಸೇವಾ ಭದ್ರತೆಗೆ ಸದನದಲ್ಲೇ ಅಂದಿನ ಬಿಜೆಪಿ ಸರ್ಕಾರವನ್ನು ಆಗ್ರಹಿಸಿದ್ದರು. ಈ ಸಂಬಂಧ ವಿಡಿಯೋ ಎಲ್ಲ ಕಡೆ ವೈರಲ್‌ ಆಗಿದೆ. ಈಗ ಅಧಿಕಾರಕ್ಕೆ ಬಂದಾಗ ಅದೇ ಮಾತಿನ ಮೇಲೆ ತಮ್ಮ ಸರ್ಕಾರ ಏಕೆ ನಿಲ್ಲುವುದಿಲ್ಲ? ಜೊತೆಗೆ ಪ್ರಣಾಳಿಕೆಯಲ್ಲೂ ಈ ಬಗ್ಗೆ ಭರವಸೆ ನೀಡಿದ್ದೀರಿ. ಹಾಗಾಗಿ ನುಡಿದಂತೆ ನಡೆಯುವ ಸರ್ಕಾರ ತಮ್ಮದು ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿ ಎಂಬುದು ಅತಿಥಿ ಉಪನ್ಯಾಸಕರ ಆಗ್ರಹವಾಗಿದೆ.

ಸರ್ಕಾರ ಅತಿಥಿ ಉಪನ್ಯಾಸಕರ ಬೇಡಿಕೆಯಲ್ಲಿ ವೇತನದ ವಿಚಾರದ ಕಡೆಗೆ ಗಮನ ನೀಡಿದೆ. ಅತಿಥಿ ಉಪನ್ಯಾಸಕರ ವೇತನ 5 ಸಾವಿರ ರೂಪಾಯಿ ಹೆಚ್ಚಳಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದ್ದರು ಸಚಿವ ಡಾ. ಎಂ ಸಿ ಸುಧಾಕರ್ ತಿಳಿಸಿದ್ದರು. ಆದರೆ ವೇತನ ಹೆಚ್ಚಳ ಒಂದಕ್ಕೆ ಸಮಾಧಾನಗೊಳ್ಳದ ಅತಿಥಿ ಉಪನ್ಯಾಸಕರು, ಖಾಯಂ ಸೇವೆಗೆ ಆಗ್ರಹಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಉದ್ಯೋಗ ಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕೈಗಾರಿಕಾ ಸಹಭಾಗಿತ್ವದ “ಹೈಪರ್-ಆಕ್ಟಿವ್ ಇನ್ನೋವೇಷನ್ ಹಬ್”ಗಳ ನಿರ್ಮಾಣ ಅತ್ಯಗತ್ಯ

ತೆಳ್ಳಗಿದ್ದರೆ ಮಾತ್ರ ಫಿಟ್ ಎಂದರ್ಥವಲ್ಲ: ನಿಜವಾದ ಫಿಟ್‌ನೆಸ್‌ನ ಗುರುತುಗಳೇನು? ತಜ್ಞರ ಸಲಹೆ ಇಲ್ಲಿದೆ

ಕೂದಲು ಉದುರುವಿಕೆ ತಡೆದು, ದಟ್ಟವಾಗಿ ಬೆಳೆಯಲು ಈ ‘ಸೂಪರ್‌ಫುಡ್‌’ಗಳನ್ನು ನಿಮ್ಮ ಆಹಾರದಲ್ಲಿ ತಪ್ಪದೇ ಸೇರಿಸಿ!

ಚಿತ್ರದುರ್ಗ : ಮೊಳಕಾಲ್ಮೂರಿನಲ್ಲಿ ಭೀಕರ ರಸ್ತೆ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

ಮೊಬೈಲ್‌-ಸ್ಕ್ರೀನ್‌ಗೆ ಬ್ರೇಕ್ ನೀಡಿ: ಮಾನಸಿಕ ಆರೋಗ್ಯ ಕಾಪಾಡಲು ‘ಡಿಜಿಟಲ್ ಡಿಟಾಕ್ಸ್’ ಏಕೆ ಮುಖ್ಯ?

ನೀತಿ ಕಥೆ: ನಂಬಿಕೆದ್ರೋಹಕ್ಕೆ ಕ್ಷಮೆಯಿಲ್ಲ (ಯುವರಾಜ ಮತ್ತು ಕರಡಿಯ ಕಥೆ)

Leave a Comment