Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹೈಕಮಾಂಡ್ ಅವ್ರು ನಂಗೂ, ಅವ್ರು ಇಬ್ರಿಗೂ ಫೋನ್ ಮಾಡಿದ್ರು : ಸಿದ್ದರಾಮಯ್ಯ

---Advertisement---

ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಕುರ್ಚಿ ಕದನ ಜೋರಾಗಿಯೇ ಇದೆ. ಇದನ್ನ ಹೈಕಮಾಂಡ್ ನಾಯಕರೇ ಬಗೆಹರಿಸಬಹುದಾದ ಸಮಸ್ಯೆ ಇದಾಗಿದೆ. ಹೀಗಾಗಿ ಹೈಕಮಾಂಡ್ ಕೂಡ ಎಂಟ್ರಿಯಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಹೈಕಮಾಂಡ್ ನಾಯಕರು ನಂಗೆ ಹಾಗೂ ಅವರಿಗೆ ಇಬ್ಬರಿಗೂ ಹೈಕಮಾಂಡ್ ನಾಯಕರು ಕರೆದಿದ್ದಾರೆ ಎಂಬ ಮಾಹಿತಿಯನ್ನ ನೀಡಿದ್ದಾರೆ.

ಬ್ರೇಕ್ ಫಾಸ್ಟ್ ಗೆ ಕರೆದಿದ್ದೀವಿ. ಬ್ರೇಕ್ ಫಾಸ್ಟ್ ಗೆ ಬಂದಾಗ ಇದೆಲ್ಲ ಚರ್ಚೆ ಮಾಡ್ತೀವಿ. ನನ್ನ ಸ್ಟ್ಯಾಂಡ್ ನಲ್ಲಿಯೇ ಇರ್ತೀನಿ. ಹೈಕಮಾಂಡ್ ನಾಯಕರು ಏನು ಹೇಳುತ್ತಾರೆ, ಅದನ್ನೇ ಫಾಲೋ ಮಾಡ್ತೀನಿ. ಇಂದು ಅದನ್ನೇ ಹೇಳೋದು ನಾಳೆಯು ಅದನ್ನೇ ಹೇಳೋದು. ಅವರು ಕೂಡ ಸಾಕಷ್ಟು ಸಲ ಅದನ್ನೇ ಹೇಳಿದ್ದಾರೆ ಎಂದು ಹೇಳಿದ್ದಾರೆ.

ಕಳೆದ ಕೆಲವು ದಿನಗಳಿಂದಾನೂ ಈ ಕುರ್ಚಿ ಕದನದ ಬಗ್ಗೆ ಸಾಕಷ್ಟು ಚರ್ಚೆಯಾಗಿದೆ. ಸಿದ್ದರಾಮಯ್ಯ ಅವರು ಕೂಡ ಹೈಕಮಾಂಡ್ ನಾಯಕರು ಏನು ಹೇಳ್ತಾರೋ ಹಾಗೇ ಇರ್ತೀನಿ ಅಂತಾರೆ. ಇನ್ನೊಂದು ಕಡೆ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ಟಾಕ್ ವಾರ್ ಹಾಗೇ ಸೈಲೆಂಟ್ ಆಗಿ ನಡೀತಾ ಇದೆ. ಕಡೆಗೆ ಈ ಯುದ್ಧ ಎಲ್ಲಿ ಹೋಗಿ ನಿಲ್ಲುತ್ತೆ ಎಂಬುದು ಮಾತ್ರ ಗೊತ್ತಿಲ್ಲ. ಸದ್ಯ ಹೈಕಮಾಂಡ್ ಕಡೆಯಿಂದ ಇಬ್ಬರಿಗೂ ಬುಲಾವ್ ಬಂದಿದ್ದು, ಭೇಟಿಯ ಬಳಿಕವಷ್ಟೇ ಸಮಸ್ಯೆ ಪರಿಹಾರದ ಬಗ್ಗೆ ಫೈನಲ್ ಆನ್ಸರ್ ಸಿಗಲಿದೆ. ಸದ್ಯಕ್ಕಂತು ರಾಜ್ಯದ ಜನತೆ ನಿಂತು ನೋಡುವಂತ ಪರಿಸ್ಥಿತಿ ಸಿಎಂ ಕುರ್ಚಿಯ ವಿಚಾರಕ್ಕೆ ಶುರುವಾಗಿದೆ. ಎರಡೂವರೆ ವರ್ಷವಾದ ಮೇಲೆ ಅಧಿಕಾರ ಹಸ್ತಾಂತರ ಮಾಡಬೇಕು ಎಂಬ ಡೀಲ್ ಆಗಿತ್ತು ಅಂತ ಗೊತ್ತೆ ಇಲ್ಲ ಅಂತ ಹಲವರು ಹೇಳ್ತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...