Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಅದ್ದೂರಿಯಾಗಿ ಪುರ ಪ್ರವೇಶಿಸಿದ ಹಿಂದೂ ಮಹಾ ಗಣಪತಿ : ಕಣ್ತುಂಬಿಕೊಂಡ ಚಿತ್ರದುರ್ಗದ ಮಹಾಜನತೆ

---Advertisement---

ಸುದ್ದಿಒನ್, ಚಿತ್ರದುರ್ಗ, ಸೆ.17 :ತೀವ್ರ ಕುತೂಹಲದಿಂದ ಕಾಯುತ್ತಿದ್ದ ಹಿಂದೂ ಮಹಾ ಗಣಪತಿಯ ಪುರ ಪ್ರವೇಶವನ್ನು ಚಿತ್ರದುರ್ಗದ ಮಹಾಜನತೆ ಕೊನೆಗೂ ಕಣ್ತುಂಬಿಕೊಂಡರು.

ವಿಶ್ವ ಹಿಂದೂ ಪರಿಷದ್-ಬಜರಂಗದಳ ನೇತೃತ್ವದಲ್ಲಿ ಹಿಂದೂ ಮಹಾ ಗಣಪತಿ ಮಹೋತ್ಸವವು ಎಂದಿನಂತೆ ಈ ಬಾರಿಯೂ ಅದ್ದೂರಿಯಾಗಿ ಪುರ ಪ್ರವೇಶಿಸಿತು.

ಶ್ರೀ ಮಾದಾರ ಚನ್ನಯ್ಯ ಗುರುಪೀಠಕ್ಕೆ ಮಧ್ಯಾನ್ಹ 3  ಗಂಟೆ ವೇಳೆಗೆ ಆಗಮಿಸುತ್ತಿದ್ದಂತೆ ಮಠದ ಆವರಣದಲ್ಲಿ ನೆರೆದಿದ್ದ ಅಪಾರ ಸಂಖ್ಯೆಯ ಕಾರ್ಯಕರ್ತರು, ಭಕ್ತಾದಿಗಳು 13 ಅಡಿ ಎತ್ತರದ ಬೃಹತ್ ಗಾತ್ರದ ಗಣಪತಿ ಮೂರ್ತಿಯನ್ನು
ಅಲ್ಲಿ ಅದ್ದೂರಿಯಾಗಿ  ಸ್ವಾಗತಿಸಲಾಯಿತು.
ಕಂಡೊಡನೇ ಹಿಂದೂ ಮಹಾಗಣಪತಿ ಕೀ ಜೈ, ಭಾರತ್ ಮಾತಾಕೀ ಜೈ, ವಂದೇ ಮಾತರಂ ಎಂಬ ಜಯಘೋಷ ಕೂಗುತ್ತಾ ಸಂಭ್ರಮಿಸಿದರು. ನಂತರ ಧಾರ್ಮಿಕ ಪೂಜಾವಿಧಿಗಳನ್ನು ನೆರವೇರಿಸಿದ ಬಳಿಕ
ಮಾದಾರ ಚನ್ನಯ್ಯ ಗುರುಪೀಠದಿಂದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಯವರ ನೇತೃತ್ವದಲ್ಲಿ ಸಹಸ್ರಾರು ಸಂಖ್ಯೆಯ ಭಕ್ತಾಧಿಗಳು, ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ ಮೂಲಕ ಚಳ್ಳಕೆರೆ ಗೇಟ್ ನಿಂದ ಬಿ.ಡಿ.ರಸ್ತೆಯ ಜೈನಧಾಮಕ್ಕೆ 4:30 ರ ವೇಳೆಗೆ ಆಗಮಿಸಿತು. ಈ ವೇಳೆ ಅಲ್ಲಿ ನೆರೆದಿದ್ದ ಭಕ್ತ ಸಮೂಹದ ಸಂಭ್ರಮ ಮುಗಿಲು ಮುಟ್ಟಿತ್ತು. ಮೊಬೈಲ್ ಗಳಲ್ಲಿ ಫೋಟೋ ಮತ್ತು ವಿಡಿಯೋ ತೆಗೆದುಕೊಂಡು ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಹಿಂದೂ ಮಹಾಗಣಪತಿಯ ಸಮಿತಿಯ ಅಧ್ಯಕ್ಷರಾದ ಜಿ.ಎಂ. ಸುರೇಶ್,  ಸಮಿತಿಯ ಮಾರ್ಗದರ್ಶಕರಾದ ಬದ್ರಿನಾಥ್, ಬಜರಂಗದಳ ಪ್ರಾಂತ ಸಹ ಸಂಯೋಜಕರು ಪ್ರಭಜನ್ , ವಿಶ್ವ ಹಿಂದೂ ಪರಿಷದ್ ಜಿಲ್ಲಾ ಕಾರ್ಯದರ್ಶಿ ಪಿ.ರುದ್ರೇಶ್ , ಜಿಲ್ಲಾ ಸಹ ಕಾರ್ಯದರ್ಶಿ ಕೇಶವ್  , ಬಜರಂಗದಳ ಜಿಲ್ಲಾ ಸಂಯೋಜಕರು,  ಜಿಲ್ಲಾ ಮುಖಂಡರಾದ ಅಶೋಕ್ ,  ವಿಶ್ವ ಹಿಂದೂ ಪರಿಷದ್  ನಗರ ಅಧ್ಯಕ್ಷರು ಶ್ರೀನಿವಾಸ್,  ನಗರ ಸಹ ಕಾರ್ಯದರ್ಶಿ ರಂಗಸ್ವಾಮಿ  , ಗ್ರಾಮಾಂತರ ಕಾರ್ಯದರ್ಶಿ ಶ್ರೀನಿವಾಸ್ ಡೈರಿ ,  ನಗರ ಸಂಯೋಜಕರು ರಂಗಸ್ವಾಮಿ,  ನಗರಸಭೆ ಸದಸ್ಯರು ನವೀನ್ ಚಾಲುಕ್ಯ, ಶಶಿಧರ್, ಸಮಿತಿಯ ಸದಸ್ಯರಾದ ಪ್ರಶಾಂತ್ ಅಪ್ಪಾಜಿ ಪರಿಸರ, ವಿಫಲ್ ಜೈನ್, ಇತರರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...