Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅದ್ದೂರಿಯಾಗಿ ಪುರ ಪ್ರವೇಶಿಸಿದ ಹಿಂದೂ ಮಹಾ ಗಣಪತಿ : ಕಣ್ತುಂಬಿಕೊಂಡ ಚಿತ್ರದುರ್ಗದ ಮಹಾಜನತೆ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಸೆ.17 :ತೀವ್ರ ಕುತೂಹಲದಿಂದ ಕಾಯುತ್ತಿದ್ದ ಹಿಂದೂ ಮಹಾ ಗಣಪತಿಯ ಪುರ ಪ್ರವೇಶವನ್ನು ಚಿತ್ರದುರ್ಗದ ಮಹಾಜನತೆ ಕೊನೆಗೂ ಕಣ್ತುಂಬಿಕೊಂಡರು.

ವಿಶ್ವ ಹಿಂದೂ ಪರಿಷದ್-ಬಜರಂಗದಳ ನೇತೃತ್ವದಲ್ಲಿ ಹಿಂದೂ ಮಹಾ ಗಣಪತಿ ಮಹೋತ್ಸವವು ಎಂದಿನಂತೆ ಈ ಬಾರಿಯೂ ಅದ್ದೂರಿಯಾಗಿ ಪುರ ಪ್ರವೇಶಿಸಿತು.

ಶ್ರೀ ಮಾದಾರ ಚನ್ನಯ್ಯ ಗುರುಪೀಠಕ್ಕೆ ಮಧ್ಯಾನ್ಹ 3  ಗಂಟೆ ವೇಳೆಗೆ ಆಗಮಿಸುತ್ತಿದ್ದಂತೆ ಮಠದ ಆವರಣದಲ್ಲಿ ನೆರೆದಿದ್ದ ಅಪಾರ ಸಂಖ್ಯೆಯ ಕಾರ್ಯಕರ್ತರು, ಭಕ್ತಾದಿಗಳು 13 ಅಡಿ ಎತ್ತರದ ಬೃಹತ್ ಗಾತ್ರದ ಗಣಪತಿ ಮೂರ್ತಿಯನ್ನು
ಅಲ್ಲಿ ಅದ್ದೂರಿಯಾಗಿ  ಸ್ವಾಗತಿಸಲಾಯಿತು.
ಕಂಡೊಡನೇ ಹಿಂದೂ ಮಹಾಗಣಪತಿ ಕೀ ಜೈ, ಭಾರತ್ ಮಾತಾಕೀ ಜೈ, ವಂದೇ ಮಾತರಂ ಎಂಬ ಜಯಘೋಷ ಕೂಗುತ್ತಾ ಸಂಭ್ರಮಿಸಿದರು. ನಂತರ ಧಾರ್ಮಿಕ ಪೂಜಾವಿಧಿಗಳನ್ನು ನೆರವೇರಿಸಿದ ಬಳಿಕ
ಮಾದಾರ ಚನ್ನಯ್ಯ ಗುರುಪೀಠದಿಂದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಯವರ ನೇತೃತ್ವದಲ್ಲಿ ಸಹಸ್ರಾರು ಸಂಖ್ಯೆಯ ಭಕ್ತಾಧಿಗಳು, ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ ಮೂಲಕ ಚಳ್ಳಕೆರೆ ಗೇಟ್ ನಿಂದ ಬಿ.ಡಿ.ರಸ್ತೆಯ ಜೈನಧಾಮಕ್ಕೆ 4:30 ರ ವೇಳೆಗೆ ಆಗಮಿಸಿತು. ಈ ವೇಳೆ ಅಲ್ಲಿ ನೆರೆದಿದ್ದ ಭಕ್ತ ಸಮೂಹದ ಸಂಭ್ರಮ ಮುಗಿಲು ಮುಟ್ಟಿತ್ತು. ಮೊಬೈಲ್ ಗಳಲ್ಲಿ ಫೋಟೋ ಮತ್ತು ವಿಡಿಯೋ ತೆಗೆದುಕೊಂಡು ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಹಿಂದೂ ಮಹಾಗಣಪತಿಯ ಸಮಿತಿಯ ಅಧ್ಯಕ್ಷರಾದ ಜಿ.ಎಂ. ಸುರೇಶ್,  ಸಮಿತಿಯ ಮಾರ್ಗದರ್ಶಕರಾದ ಬದ್ರಿನಾಥ್, ಬಜರಂಗದಳ ಪ್ರಾಂತ ಸಹ ಸಂಯೋಜಕರು ಪ್ರಭಜನ್ , ವಿಶ್ವ ಹಿಂದೂ ಪರಿಷದ್ ಜಿಲ್ಲಾ ಕಾರ್ಯದರ್ಶಿ ಪಿ.ರುದ್ರೇಶ್ , ಜಿಲ್ಲಾ ಸಹ ಕಾರ್ಯದರ್ಶಿ ಕೇಶವ್  , ಬಜರಂಗದಳ ಜಿಲ್ಲಾ ಸಂಯೋಜಕರು,  ಜಿಲ್ಲಾ ಮುಖಂಡರಾದ ಅಶೋಕ್ ,  ವಿಶ್ವ ಹಿಂದೂ ಪರಿಷದ್  ನಗರ ಅಧ್ಯಕ್ಷರು ಶ್ರೀನಿವಾಸ್,  ನಗರ ಸಹ ಕಾರ್ಯದರ್ಶಿ ರಂಗಸ್ವಾಮಿ  , ಗ್ರಾಮಾಂತರ ಕಾರ್ಯದರ್ಶಿ ಶ್ರೀನಿವಾಸ್ ಡೈರಿ ,  ನಗರ ಸಂಯೋಜಕರು ರಂಗಸ್ವಾಮಿ,  ನಗರಸಭೆ ಸದಸ್ಯರು ನವೀನ್ ಚಾಲುಕ್ಯ, ಶಶಿಧರ್, ಸಮಿತಿಯ ಸದಸ್ಯರಾದ ಪ್ರಶಾಂತ್ ಅಪ್ಪಾಜಿ ಪರಿಸರ, ವಿಫಲ್ ಜೈನ್, ಇತರರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

ಮುರುಘಾಮಠದಲ್ಲಿ ಮೇ 8 ರಿಂದ 10 ರವರೆಗೆ ಬಸವ ಜಯಂತಿ ,:  ಕಾರ್ಯಕ್ರಮಗಳ ವಿವರ ಇಂತಿದೆ..!

ಸುದ್ದಿಒನ್,ಚಿತ್ರದುರ್ಗ, ಮೇ. 06 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 8 ರಿಂದ 10ರವರೆಗೆ ಮಹಾಮಾನವತಾವಾದಿ ಸಾಂಸ್ಕøತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಚಿತ್ರದುರ್ಗ ಆಕಾಶವಾಣಿಯಲ್ಲಿ ಮೇ

ನಾಳೆ ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಉತ್ಸವ :   ಸಿದ್ದತೆ ಹೇಗಿದೆ ?

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಸಹೋದರಿಯರ ನಡುವೆ ಜಗಳ, ಮುನಿಸು ಇರುವುದು ಸಹಜ. ಆದ್ರೆ, ಕೋಟೆನಾಡಿನಲ್ಲಿ ಮಾತ್ರ ಮುನಿದು

error: Content is protected !!