ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 04 : ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದಿಂದ ಪ್ರತಿ ವರ್ಷದಂತೆ ಈ ವರ್ಷವೂ ಪ್ರತಿಷ್ಠಾಪನೆಯಾಗಲಿರುವ ಹಿಂದೂ ಮಹಾ ಗಣಪತಿ ಬುಧವಾರ ಪುರ ಪ್ರವೇಶಿಸಿತು.
ನಗರದ ಹೊರವಲಯದಲ್ಲಿರುವ ಮಾದಾರ ಚನ್ನಯ್ಯ ಗುರುಪೀಠದಿಂದ ಅದ್ದೂರಿ ಮೆರವಣಿಗೆ ಮೂಲಕ ಹೊರಟ ಹಿಂದೂ ಮಹಾ ಗಣಪತಿ ಹೆದ್ದಾರಿಯಿಂದ ಚಳ್ಳಕೆರೆ ಗೇಟ್ ಮೂಲಕ ಪಂಚಾಚಾರ್ಯ ಕಲ್ಯಾಣ ಮಂಟಪ ಪಕ್ಕದಲ್ಲಿರುವ ಪೆಂಡಾಲ್ಗೆ ಆಗಮಿಸಿತು.
ಕೇಸರಿ ಭಾವುಟ, ಜೈಶ್ರೀರಾಮ್ ಎಂದು ಬರೆದಿದ್ದ ಹನುಮನ ಭಾವಚಿತ್ರವುಳ್ಳ ಭಾವುಟಗಳು, ಶಾರದಾ ಬ್ರಾಸ್ ಬ್ಯಾಂಡ್ನ ವಾದ್ಯ ಮೆರವಣಿಗೆಯಲ್ಲಿ ರಾರಾಜಿಸಿದವು. ಸಾವಿರಾರು ಯುವಕರು ಬೈಕ್ಗಳಲ್ಲಿ ಆಗಮಿಸಿ ಮೆರವಣಿಗೆಯಲ್ಲಿ ಪಾಲ್ಗೊಂಡು, ಹಿಂದೂ ಮಹಾಗಣಪತಿಕೀ ಜೈ ಎಂದು ಕೂಗುತ್ತಾ ಕುಣಿದು ಕುಪ್ಪಳಿಸಿದರು. ಚಳ್ಳಕೆರೆ ಗೇಟ್ನಲ್ಲಿ ಡೊಳ್ಳು, ತಮಟೆ ಮೂಲಕ ಹಿಂದೂ ಮಹಾ ಗಣಪತಿಯನ್ನು ಬರಮಾಡಿಕೊಳ್ಳಲಾಯಿತು.
ಗರುಡನ ಮೇಲೆ ವಿರಾಜಮಾನವಾಗಿರುವ ಹಿಂದೂ ಮಹಾಗಣಪತಿಯನ್ನು ವೀಕ್ಷಿಸಲು ಸಹಸ್ರಾರು ಜನ ಜಮಾಯಿಸಿದ್ದರು. ನೆರೆದಿದ್ದ ಜನರು ತಮ್ಮ ಮೊಬೈಲ್ ಗಳಲ್ಲಿ ಹಿಂದೂ ಮಹಾಗಣಪತಿ ಆಗಮಿಸಿದ್ದ ದೃಶ್ಯಗಳನ್ನು ಸೆರೆಹಿಡಿದು, ಸೆಲ್ಫಿ ತೆಗೆದುಕೊಂಡು ಸಂಭ್ರಮಿಸಿದರು.
ಸೆಪ್ಟೆಂಬರ್ 7 ರಂದು ಮಹಾಗಣಪತಿ ಪ್ರತಿಷ್ಠಾಪನೆ ನಡೆಯಲಿದ್ದು 21 ದಿನಗಳ ಕಾಲ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ. 26 ರಂದು ಕನಕ ವೃತ್ತದಿಂದ ಹೊರಡುವ ಬೈಕ್ ರ್ಯಾಲಿ ನಗರದೆಲ್ಲೆಡೆ ಸಂಚರಿಸಲಿದ್ದು, 28 ರಂದು ಬೃಹತ್ ಶೋಭಾಯಾತ್ರೆ ಮೂಲಕ ವಿಸರ್ಜಿಸಲಾಗುವುದು.
ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಪ್ರಮುಖರು ಹಿಂದೂ ಮಹಾ ಗಣಪತಿ ಪುರ ಪ್ರವೇಶದಲ್ಲಿ ಭಾಗವಹಿಸಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್