Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅದ್ದೂರಿಯಾಗಿ ಪುರ ಪ್ರವೇಶಿಸಿದ ಹಿಂದೂ ಮಹಾ ಗಣಪತಿ : ಸೆಪ್ಟೆಂಬರ್ 7 ರಂದು ಪ್ರತಿಷ್ಟಾಪನೆ

---Advertisement---

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 04 : ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದಿಂದ ಪ್ರತಿ ವರ್ಷದಂತೆ ಈ ವರ್ಷವೂ ಪ್ರತಿಷ್ಠಾಪನೆಯಾಗಲಿರುವ ಹಿಂದೂ ಮಹಾ ಗಣಪತಿ ಬುಧವಾರ ಪುರ ಪ್ರವೇಶಿಸಿತು.

ನಗರದ ಹೊರವಲಯದಲ್ಲಿರುವ ಮಾದಾರ ಚನ್ನಯ್ಯ ಗುರುಪೀಠದಿಂದ ಅದ್ದೂರಿ ಮೆರವಣಿಗೆ ಮೂಲಕ ಹೊರಟ ಹಿಂದೂ ಮಹಾ ಗಣಪತಿ ಹೆದ್ದಾರಿಯಿಂದ ಚಳ್ಳಕೆರೆ ಗೇಟ್ ಮೂಲಕ ಪಂಚಾಚಾರ್ಯ ಕಲ್ಯಾಣ ಮಂಟಪ ಪಕ್ಕದಲ್ಲಿರುವ ಪೆಂಡಾಲ್‍ಗೆ ಆಗಮಿಸಿತು.

ಕೇಸರಿ ಭಾವುಟ, ಜೈಶ್ರೀರಾಮ್ ಎಂದು ಬರೆದಿದ್ದ ಹನುಮನ ಭಾವಚಿತ್ರವುಳ್ಳ ಭಾವುಟಗಳು, ಶಾರದಾ ಬ್ರಾಸ್ ಬ್ಯಾಂಡ್‍ನ ವಾದ್ಯ ಮೆರವಣಿಗೆಯಲ್ಲಿ ರಾರಾಜಿಸಿದವು. ಸಾವಿರಾರು ಯುವಕರು ಬೈಕ್‍ಗಳಲ್ಲಿ ಆಗಮಿಸಿ ಮೆರವಣಿಗೆಯಲ್ಲಿ ಪಾಲ್ಗೊಂಡು, ಹಿಂದೂ ಮಹಾಗಣಪತಿಕೀ ಜೈ ಎಂದು ಕೂಗುತ್ತಾ ಕುಣಿದು ಕುಪ್ಪಳಿಸಿದರು. ಚಳ್ಳಕೆರೆ ಗೇಟ್‍ನಲ್ಲಿ ಡೊಳ್ಳು, ತಮಟೆ ಮೂಲಕ ಹಿಂದೂ ಮಹಾ ಗಣಪತಿಯನ್ನು ಬರಮಾಡಿಕೊಳ್ಳಲಾಯಿತು.

ಗರುಡನ ಮೇಲೆ ವಿರಾಜಮಾನವಾಗಿರುವ ಹಿಂದೂ ಮಹಾಗಣಪತಿಯನ್ನು ವೀಕ್ಷಿಸಲು ಸಹಸ್ರಾರು ಜನ ಜಮಾಯಿಸಿದ್ದರು. ನೆರೆದಿದ್ದ ಜನರು ತಮ್ಮ ಮೊಬೈಲ್ ಗಳಲ್ಲಿ ಹಿಂದೂ ಮಹಾಗಣಪತಿ ಆಗಮಿಸಿದ್ದ ದೃಶ್ಯಗಳನ್ನು ಸೆರೆಹಿಡಿದು, ಸೆಲ್ಫಿ ತೆಗೆದುಕೊಂಡು ಸಂಭ್ರಮಿಸಿದರು.

ಸೆಪ್ಟೆಂಬರ್ 7 ರಂದು ಮಹಾಗಣಪತಿ ಪ್ರತಿಷ್ಠಾಪನೆ ನಡೆಯಲಿದ್ದು 21 ದಿನಗಳ ಕಾಲ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ. 26 ರಂದು ಕನಕ ವೃತ್ತದಿಂದ ಹೊರಡುವ ಬೈಕ್ ರ್ಯಾಲಿ ನಗರದೆಲ್ಲೆಡೆ ಸಂಚರಿಸಲಿದ್ದು, 28 ರಂದು ಬೃಹತ್ ಶೋಭಾಯಾತ್ರೆ ಮೂಲಕ ವಿಸರ್ಜಿಸಲಾಗುವುದು.

ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಪ್ರಮುಖರು ಹಿಂದೂ ಮಹಾ ಗಣಪತಿ ಪುರ ಪ್ರವೇಶದಲ್ಲಿ ಭಾಗವಹಿಸಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment