Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೇವಲ ಟಿಕೆಟ್ ಪಡೆಯುವ ಉದ್ದೇಶ ಇರೋದಲ್ಲ.. ಮಂಡ್ಯದಿಂದಾನೇ ಸ್ಪರ್ಧೆ ಖಚಿತ : ಸುಮಲತಾ ಅಂಬರೀಶ್

---Advertisement---

 

ಮಂಡ್ಯ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರ ಸಿಕ್ಕಾಪಟ್ಟೆ ಸುದ್ದಿಯಲ್ಲಿದೆ. ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಮಂಡ್ಯ ಕ್ಷೇತ್ರವನ್ನು ಕೇಳಿದೆ. ಸ್ವತಂತ್ರವಾಗಿ ಗೆದ್ದಿದ್ದ ಸುಮಲತಾ ಈ ಬಾರಿ ಬಿಜೆಪಿ ಸೇರಿದ್ದಾರೆ. ಈ ಮೂಲಕ ಟಿಕೆಟ್ ಹಂಚಿಕೆಯ ವಿಚಾರಕ್ಕೆ ಮಂಡ್ಯ ಸುದ್ದಿಯಲ್ಲಿದೆ.

 

ಸುಮಲತಾ ಮತ್ತೆ ಮಂಡ್ಯ ಬಿಟ್ಟುಕೊಡುವುದಕ್ಕೆ ಸಾಧ್ಯವೇ ಇಲ್ಲ ಎನ್ನುತ್ತಿದ್ದಾರೆ. ಇಂದು ದಿಶಾ ಸಭೆಯಲ್ಲಿ ಭಾಗಿಯಾಗಿದ್ದ ಸುಮಲತಾ ಅವರು, ಮತ್ತೆ ಸ್ಟ್ರಾಂಗ್ ಆಗಿನೇ ಮಂಡ್ಯದ ಬಗ್ಗೆ ಮಾತನಾಡಿದ್ದಾರೆ. ಮಂಡ್ಯದಿಂದಾನೇ ಸ್ಪರ್ಧೆ ಮಾಡ್ತೀನಿ ಎಂದಿದ್ದಾರೆ.

 

‘ಜೆಡಿಎಸ್ ಗೆ ಮಂಡ್ಯ ಬಿಟ್ಟುಕೊಡುವ ಅಂತೆ-ಕಂತೆ ಮೊದಲಿನಿಂದಾನೂ ಇದೆ. ಆದರೆ ಈ ಬಾರಿಯೂ ಮಂಡ್ಯದಿಂದಾನೇ ಸ್ಪರ್ಧೆ ಮಾಡಲಿದ್ದೇನೆ. ಬಿಜೆಪಿ ಹೈಕಮಾಂಡ್ ಕೂಡ ಇನ್ನು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಅಧಿಕೃತ ನಿರ್ಧಾರ ಬರುವ ತನಕ ಕಾಯೋಣಾ. ಮಂಡ್ಯ ಬಿಜೆಪಿಗೆ ಸಿಗುವ ವಿಶ್ವಾಸ ನನಗಿದೆ. ಜೆಡಿಎಸ್ ನಾಯಕರು ಏನು ಬೇಕಾದರೂ ಹೇಳಬಹುದು, ಆದರೆ ಅಧಿಕೃತವಾಗಿ ನಿರ್ಧಾರವಾಗಬೇಕು ಅಲ್ವಾ. ಮಂಡ್ಯದಲ್ಲಿ ನಾನು ನನ್ನ ಟಿಕೆಟ್ ಗಾಗಿ ಹೋರಾಟ ಮಾಡುತ್ತಿಲ್ಲ. ನನ್ನ ಹೋರಾಟವೇನೆ ಇದ್ದರು ಅದು ಮಂಡ್ಯದ ಜನರಿಗೋಸ್ಕರ. ಮಂಡ್ಯದಲ್ಲಿ ಬಿಜೆಪಿ ಸಂಘಟನೆ ಮಾಡಲು ಹೋರಾಟ ಮಾಡುತ್ತಿದ್ದೇನೆ. ನನಗೆ ಟಿಕೆಟ್ ಪಡೆಯುವ ಉದ್ದೇಶ ಒಂದಿದ್ದರೆ ಎಲ್ಲಾದರೂ ಟಿಕೆಟ್ ಪಡೆಯುತ್ತಿದ್ದೆ. ಆದರೆ ನಾನು ಹೋರಾಟ‌ ಮಾಡುತ್ತಿರುವುದೇ ಬಿಜೆಪಿ ಪಕ್ಷ ಸಂಘಟನೆ ಮಾಡುವುದಕ್ಕೆ. ಹೀಗಾಗಿ ನಾನು ಮಂಡ್ಯದಿಂದಾನೇ ಸ್ಪರ್ಧೆ ಮಾಡುತ್ತೇನೆ ಎಂದು ಸುಮಲತಾ, ಮುಂದಿನ ಲೋಕಸಭೆಯಲ್ಲಿ ತಮ್ಮ ಚಿತ್ತ ಯಾವ ಕಡೆಗೆ ಎಂಬುದರ ಸ್ಪಷ್ಟನೆ ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...