Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೃಹತ್ ಬೆಂಗಳೂರಿನ ಅಭಿವೃದ್ಧಿಯಲ್ಲಿ ಜನರ ಪಾಲ್ಗೊಳ್ಳುವಿಕೆ ಅಗತ್ಯ- ಸಿಎಂ

Facebook
Twitter
Telegram
WhatsApp

ಬೆಂಗಳೂರು : ಬೃಹತ್ ಬೆಂಗಳೂರಿನ ಅಭಿವೃದ್ಧಿಯಲ್ಲಿ ಜನರ ಪಾಲ್ಗೊಳ್ಳುವಿಕೆ ಅಗತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಮುಖ್ಯಮಂತ್ರಿ ನಗರೋತ್ಥಾನ ಯೋಜನೆಯಡಿ ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಶಿವನಗರ ೧ ಮತ್ತು ೮ನೇ ಮುಖ್ಯರಸ್ತೆ ಕೂಡು ಸ್ಥಳದಲ್ಲಿ ೭೧.೯೮ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಇಂಟಿಗ್ರೇಟೆಡ್ ಮೇಲ್ಸೇತುವೆಯನ್ನು ಉದ್ಘಾಟಿಸಿದರು.

ಜನರಿಂದ ಸಲಹೆ ಸೂಚನೆಗಳನ್ನು ಪಡೆಯಲು ಯೋಜನೆ ರೂಪಿಸಲಾಗುತ್ತಿದೆ. ಬೆಂಗಳೂರಿನ ಎಲ್ಲಾ ಸೇವೆಗಳನ್ನು ಒಂದೇ ಸೂರಿನಡಿ ಮೊಬೈಲ್‌ನಲ್ಲಿ ಲಭ್ಯವಾಗುವಂತೆ ಮಾಲಾಗುತ್ತಿದ್ದು, ಆಧುನಿಕ ತಂತ್ರಜ್ಞಾನದ ಬಳಕೆಯಿಂದ ಶೀಘ್ರದಲ್ಲಿಯೇ ಎಲ್ಲಾ ೨೮ ಕ್ಷೇತ್ರಗಳಲ್ಲಿ ಪ್ರಾರಂಭ ಮಾಡಲಾಗುವುದು. ಅತಿ ಹೆಚ್ಚು ಜನದಟ್ಟಣೆ ಇರುವ ಶಿವನಗರ ಸುತ್ತಮುತ್ತಲಿನ ಪ್ರದೇಶದಲ್ಲಿ ವಾಹನದಟ್ಟನೆ ಕಡಿಮೆ ಮಾಡಲು ಇಂಟಿಗ್ರೇಟೆಡ್ ಮೇಲ್ಸೇತುವೆ ಬಹಳ ಸಹಕಾರಿಯಾಗಿದೆ. ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಬಡಾವಣೆಯನ್ನು ಒಟ್ಟುಗೂಡಿಸಿರುವ ಕೆಲಸ ಅಭಿನಂದನೀಯ. ತುಮಕೂರು- ಮೈಸೂರು ಹೆದ್ದಾರಿ ಹೈ ಡೆನ್ಸಿಟಿ ಕಾರಿಡಾರ್ ಆಗಿದ್ದು, ವೆಸ್ಟ್ ಆಫ್ ಕರ್ಡ್ ರೋಡ್ ಬಳಿ ವಾಹನ ದಟ್ಟಣೆ ಜಾಸ್ತಿ ಇರುತ್ತದೆ. ಸೋಪ್ ಫ್ಯಾಕ್ಟರಿ ಯಿಂದ ಮೈಸೂರು ರೋಡ್ ತನಕ ತಡೆರಹಿತ ರಸ್ತೆ ನಿರ್ಮಾಣ ಮಾಡಲು ಬಸವೇಶ್ವರ ನಗರ ಲಿಂಕ್ ಮಾಡುವ ಮಹತ್ವದ ಕಾಮಗಾರಿಯನ್ನು ಶೀಘ್ರದಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದರು.

ಜನರ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಪರಿಹಾರ ನೀಡಿದರೆ ಜನಸ್ಪಂದನೆಯುಳ್ಳ ಜನಪರ ಸರ್ಕಾರ ಎನಿಸಿಕೊಳ್ಳುತ್ತದೆ. ನಗರ ಯೋಜನೆಯ ದೃಷ್ಟಿಕೋನ ಬದಲಾವಣೆ ಆಗಿ, ಬೆಂಗಳೂರಿನ ಯೋಜನಾಬದ್ಧ ಸಮಗ್ರ ಅಭಿವೃದ್ಧಿಯಾಗಬೇಕು ಎಂದ ಅವರು, ಬಂಡವಾಳ ಹೂಡಿಕೆ , ಪ್ರವಾಸೋದ್ಯಮ ಮುಂತಾದ ಎಲ್ಲ ಕ್ಷೇತ್ರಗಳಿಗೂ ಬೆಂಗಳೂರನ್ನು ಗುರುತಿಸಲಾಗುತ್ತದೆ. ಆದ್ದರಿಂದ ಅಂತರರಾಷ್ಟ್ರೀಯ ಮಟ್ಟದ ಸೇವೆಯನ್ನು ನೀಡಲು ಎಲ್ಲ ರೀತಿಯ ಪ್ರಯತ್ನ ಮಾಡಲಾಗುವುದು. ಯೋಜನಾಬದ್ದ ಹಾಗೂ ಹೊಸ ಚಿಂತನೆಯ ಬೆಂಗಳೂರು ನಿರ್ಮಾಣ ಮಾಡಲಾಗುವುದು ಎಂದು ಭರವಸೆ ನೀಡಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ವಿದ್ಯಾರ್ಥಿಗಳು ಕಲೆ, ಸಾಹಿತ್ಯ, ಸಂಗೀತದ ಅಭಿರುಚಿ ಬೆಳೆಸಿಕೊಳ್ಳಬೇಕು: ಪ್ರೊ.ಬಿ.ಎಸ್.ಮಂಜುನಾಥ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ.21  :  ಪದವಿ ಶಿಕ್ಷಣ ಕಲಿಕೆಯ ಹಂತದಲ್ಲೆ ಕಲೆ, ಸಾಹಿತ್ಯ ಹಾಗೂ ಸಂಗೀತದ ಅಭಿರುಚಿ ಬೆಳೆಸಿಕೊಳ್ಳಬೇಕು

ಚಿತ್ರದುರ್ಗ | ಸಿಡಿಲಿಗೆ ಇಬ್ಬರ ಸಾವು

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಿತ್ರದುರ್ಗ, ಮೇ. 21 : ಸೋಮುವಾರ ರಾತ್ರಿ ಗುಡುಗು ಸಹಿತ ಮಳೆ ಸುರಿದ್ದಿದ್ದು ಸಿಡಿಲು ಬಡಿದು ಮಹಾರಾಷ್ಟ್ರ

ನೈರುತ್ಯ ಪದವೀಧರ ಚುನಾವಣೆ : ಬಂಡಾಯವೆದ್ದ ರಘುಪತಿ ಭಟ್ ಗೆ ಬೆಂಬಲ ನೀಡಿದ ಈಶ್ವರಪ್ಪ

ಶಿವಮೊಗ್ಗ: ಕೆ.ಎಸ್. ಈಶ್ವರಪ್ಪ ಹಾಗೂ ರಘುಪತಿ ಭಟ್ ಇಬ್ಬರು ಈಗ ಒಂದೇ ದೋಣಿಯ ಪಯಣಗಿರು. ಯಾಕಂದ್ರೆ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಈಶ್ವರಪ್ಪ ಅವರು ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾರೆ.

error: Content is protected !!