Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜಕೀಯ ಕೆಸರೆರಚಾಟಕ್ಕೆ ತಿರುಗಿದ ಕಮಲಾಕರ್ ಭಟ್ ವಿಚಾರ

---Advertisement---

ಬೆಂಗಳೂರು: ಸಿದ್ಧಾಪುರ ಮೂಲದ ಕಮಲಾಕರ್ ಭಟ್ ಜ್ಯೋತಿಷ್ಯ ಹೇಳುವ ಮೂಲಕ ಖ್ಯಾತಿ ಪಡೆದಿದ್ದರು. ಆದ್ರೆ ನಿನ್ನೆ ಅವರ ವಿಚಾರದಲ್ಲಿ ಸುದ್ದಿ ಆಗಿದ್ದೆ ಬೇರೆ. ಮದುವೆಯಾದ ಮಹಿಳೆ ಜೊತೆಗೆ ಅಕ್ರಮ ಸಂಬಂಧ ಇಟ್ಟುಕೊಂಡ ವಿಚಾರ ಹೊರಗೆ ಬಂದು, ಗಲಾಟೆಯಲ್ಲಿ ಒಂದು ಜೀವವೇ ಹೋಗಿದೆ. ಕಮಲಾಕರ್ ಭಟ್ ಸೇರಿದಂತೆ ಈ ಕೇಸಲ್ಲಿ ಏಳು ಜನ ಅರೆಸ್ಟ್ ಕೂಡ ಆಗಿದ್ದಾರೆ. ಆದರೆ ಇಂದು ಕಮಲಾಕರ್ ಭಟ್ ವಿಚಾರ ರಾಜಕೀಯ ಕೆಸರೆರಚಾಟಕ್ಕೆ ತಿರುಗಿದೆ. ಬಿ.ಕೆ.ಹರಿಪ್ರಸಾದ್ ಹಾಗೂ ಎಸ್.ಸುರೇಶ್ ಕುಮಾರ್ ನಡುವೆ ಪೋಸ್ಟ್ ವಾರ್ ಶುರುವಾಗಿದೆ.

ಇದೇ ಕಮಲಾಕರ್ ಭಟ್ 2019ರಲ್ಲಿ ಸುರೇಶ್ ಕುಮಾರ್ ಅವರನ್ನ ಭೇಟಿಯಾಗಿದ್ದರು. ಅಂದಿನ ಭೇಟಿಯ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕಿ ಕಮಲಾಕರ ಭಟ್ ಎಂಬ ಜೋತಿಷಿ ಭಾಗಿಯಾದ ಕೊಲೆ ಕೇಸ್ ನಲ್ಲಿ ರಾಜಾಜಿನಗರ ಶಾಸಕ @nimmasuresh ಅವರಂತವರ ಪಾತ್ರವಿಲ್ಲವೇ? ಕೊಲೆ ಆರೋಪಿ ಜೋತಿಷಿ “ಗುರೂಜಿ” ಕಮಲಾಕರ ಭಟ್ಟನನ್ನು ಒರ್ವ ಶಾಸಕನಾಗಿ ಪ್ರೋತ್ಸಾಹಿಸಿ ಬೆಳೆಸಿದ್ದು ಸಂವಿಧಾನಕ್ಕೆ ಮಾಡುವ ಅಪಚಾರವಲ್ಲವೇ ? ಒರ್ವ ಮಾಜಿ ಕಾನೂನು ಸಚಿವನಿಗೆ ಇಷ್ಟೂ ಅರಿವಿಲ್ಲದಿರುವುದು ಈ ರಾಜ್ಯದ ದುರಂತವಾಗಿದೆ. ಕೊಲೆಗಡುಕ, ಮಹಿಳಾ ಪೀಡಕ ಕಮಲಾಕರ ಭಟ್ ತನ್ನಲ್ಲಿಗೆ ಜೋತಿಷ್ಯ ಕೇಳಲು ಬರುವ ಗ್ರಾಹಕರನ್ನು ಲೈಂಗಿಕವಾಗಿ ಶೋಷಿಸುತ್ತಿದ್ದ. ಅದರ ಭಾಗವಾಗಿಯೇ ಮಹಿಳೆಯ ಜೊತೆ ಅಕ್ರಮ ಸಂಬಂಧ ಹೊಂದಿ ಅದು ಕೊಲೆಯವರೆಗೂ ಹೋಗಿದೆ. ಈ ರೀತಿ ಜನರ ಮೂಢನಂಬಿಕೆಯನ್ನೇ ಬಳಸಿಕೊಂಡು ಹಲವು ‘ಅಕ್ರಮ’ಗಳನ್ನು ಸಂಪಾದಿಸಿಕೊಂಡು ಇಂತಹ “ಜೀ-ಗುರೂಜಿ”ಗಳು ಸಮಾಜ ಸೇವೆಯ ಹೆಸರಿನಲ್ಲಿ ಸಮಾಜವನ್ನೇ ಯಾಮಾರಿಸುತ್ತಾರೆ. ಇಂತಹ ಮೂಢನಂಬಿಕೆಯ ‘ಅಕ್ರಮ ದಂಧೆ’ಗಳನ್ನು ಬಿಜೆಪಿಯ ಸ್ವಯಂ ಘೋಷಿತ ಸಜ್ಜನ ಶಾಸಕ ಬಿರುದಾಂಕಿತ ಬಿಜೆಪಿಯ ಸುರೇಶ್ ಕುಮಾರ್ ಬೆನ್ನುತ್ತಟ್ಟಿ ಪ್ರೋತ್ಸಾಹಿಸಿ ಬೆಳೆಸಿದ್ದಾರೆ. ಹಾಗಾಗಿ ಈ ಕೊಲೆಯಲ್ಲಿ ಸುರೇಶ್ ಕುಮಾರ್ ಅಂತವರ ಪಾತ್ರ ಬಹಳ ಮುಖ್ಯವಾಗುತ್ತದೆ ಎಂದು ಬಿಕೆ ಹರಿಪ್ರಸಾದ್ ಅವರು ಟ್ವೀಟ್ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸುರೇಶ್ ಕುಮಾರ್ ಅವರು, ಈ ಫೋಟೋ ಬಗ್ಗೆ ತಮ್ಮ ಅಭಿಪ್ರಾಯ.? ಈ ಕೊಲೆ ಪ್ರಕರಣದಲ್ಲಿ ರಾಜ್ಯದ ಮುಖ್ಯಮಂತ್ರಿಯೂ ಭಾಗಿಯೇ? ಕೊಳೆತ ಮನಸ್ಸಿಗೆ ಕೊಳೆತ ವಿಚಾರಗಳೇ ಬರುವುದು ಅಲ್ಲವೇ ಹರಿಪ್ರಸಾದ್ ಎಂದು ಪ್ರಶ್ನೆ ಮಾಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now