Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇಂದು ನಡೆಯಬೇಕಿದ್ದ ಕಾವೇರಿ ವಿಚಾರ ಬುಧವಾರಕ್ಕೆ ಮುಂದೂಡಿಕೆ

---Advertisement---

 

ನವದೆಹಲಿ: ರಾಜ್ಯದಲ್ಲಿ ಮಳೆಯಿಲ್ಲದೆ ರೈತರು ಕಂಗಲಾಗಿದ್ದಾರೆ. ಕಾವೇರಿ ದಿನೇ ದಿನೇ ಕಡಿಮೆಯಾಗುತ್ತಿದ್ದಾಳೆ. ಈ ರೀತಿಯಾದಂತ ಪರಿಸ್ಥಿತಿ ಇದ್ದರು ರಾಜ್ಯ ಸರ್ಕಾರ ಮಾತ್ರ ತಮಿಳುನಾಡಿಗೆ ಪ್ರತಿದಿನ ನೀರನ್ನು ಹರಿಸುತ್ತಿರುವುದನ್ನು ರೈತರು ವಿರೋಧಿಸುತ್ತಿದ್ದಾರೆ. ರೈತರ ಜೊತೆಗೆ ಜೆಡಿಎಸ್ ಮತ್ತು ಬಿಜೆಪು ನಾಯಕರು ಕೈಜೋಡಿಸಿದ್ದಾರೆ.

ಈ ಸಂಬಂಧ ಇಂದು ಸುಪ್ರೀಂ ಕೋರ್ಟ್ ನಲ್ಲಿ ಕಾವೇರಿ ವಿಚಾರಣೆ ನಡೆಯಬೇಕಿತ್ತು. ಇಂದು ನಡೆಯಬೇಕಿದ್ದ ವಿಚಾರಣೆ ಮುಂದೂಡಿಕೆಯಾಗಿದೆ. ಸೆಪ್ಟೆಂಬರ್6 ಕ್ಕೆ ವಿಚಾರಣೆ ಮುಂದೂಡಿಕೆ ಮಾಡಲಾಗಿದೆ. ಕಾವೇರಿ ಭಾಗದ ಜನ ಇಂದು ನಿರೀಕ್ಷೆ ಇಟ್ಟುಕೊಂಡಿದ್ದರು. ಕರ್ನಾಟಕದ ಪರಿಸ್ಥಿತಿ ನೋಡಿ ತೀರ್ಪು ಕೂಡ ಕರ್ನಾಟಕದ ಪರವಾಗಿ ಬರುತ್ತೆ ಎಂಬ ನಿರೀಕ್ಷೆ ಇತ್ತು. ಆದ್ರೆ ಜಸ್ಟೀಸ್ ಗವಾಯಿ ಅವರು ಬೇರೆ ಪೀಠದಲ್ಲಿ ಇದ್ದ ಕಾರಣ, ಇಂದು ನಡೆಯಬೇಕಿದ್ದ ವಿಚಾರಣೆ ಮುಂದೂಡಿಕೆಯಾಗಿದೆ.

ಇನ್ನು ಕಾವೇರಿಗಾಗಿ ನಾಳೆ ದೇವೇಗೌಡ ಅವರ ನೇತೃತ್ವದಲ್ಲಿ ಕಾವೇರಿ ಚಳುವಳಿ ಆರಂಭವಾಗಲಿದೆ. ಕಾಂಗ್ರೆಸ್ ವಿರುದ್ಧ ಹೋರಾಟಕ್ಕೆ ಜೆಡಿಎಸ್ ಮತ್ತು ಬಿಜೆಪಿ ಸಿದ್ಧತೆ ನಡೆಸಲಿದ್ದಾರೆ. ಮಂಡ್ಯದಲ್ಲಿ ಚಳುವಳಿ ಆರಂಭವಾಗಲಿದೆ. ಇನ್ನು ಕುಮಾರಸ್ವಾಮಿ ಅವರು ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಆಸ್ಪತ್ರೆಯಿಂದಾನೇ ಕಾವೇರಿ ಚಳುವಳುಗೆ ಕರೆ ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...