Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ತಿರುಪತಿಯಲ್ಲಿ 6 ವರ್ಷದ ಬಾಲಕಿಯನ್ನು ಕೊಂದಿದ್ದ ಚಿರತೆ ಸೆರೆ..!

---Advertisement---

ಇತ್ತಿಚೆಗಷ್ಟೇ ಪಾದಯಾತ್ರೆ ಮೂಲಕ ಕುಟುಂಬವೊಂದು ತಿರುಪತಿ ಬೆಟ್ಟ ಏರುತ್ತಿತ್ತು. ಆದರೆ ಈ ವೇಳೆ ಚಿರತೆಯೊಂದು ಆರು ವರ್ಷದ ಬಾಲಕಿಯನ್ನು ಹೊತ್ತೊಯ್ದು, ಪ್ರಾಣ ತೆಗೆದಿರುವ ಘಟನೆ ನಡೆದಿತ್ತು. ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿತ್ತು. ಬಳಿಕ ಹುಡುಕಾಟ ನಡೆಸಿದಾಗ ಬಾಲಕಿಯ ಮೃತದೇಹವೂ ಪತ್ತೆಯಾಗಿತ್ತು. ಇದೀಗ ಬಾಲಕಿಯನ್ನು ಕೊಂದಿದ್ದ ಚಿರತೆಯನ್ನು ಸೆರೆಹಿಡಿಯಲಾಗಿದೆ.

ಘಟನೆ ನಡೆದ ಬಳಿಕ ಚಿರತೆಯನ್ನು ಹಿಡಿಯಲು ಪೊಲೀಸರು ಪ್ಲ್ಯಾನ್ ಮಾಡಿದ್ದರು. ಅದಕ್ಕೆಂದೆ ಬೋನುಗಳನ್ನು ಹಾಕಿದ್ದರು. ಸುತ್ತ ಮುತ್ತ ಹನ್ನೆರಡು ಸಿಸಿಟಿವಿಗಳನ್ನು ಅಳವಡಿಸಿ, ಕಾವಲಿಗಿದ್ದರು. ಚಿರತೆಯ ಚಲನವಲನವನ್ನು ಗಮನಿಸುತ್ತಿದ್ದರು. ಶನಿವಾರ ರಾತ್ರಿ ಕಡೆಗೂ ಚಿರತೆ ಬೋನಿಗೆ ಬಿದ್ದಿದೆ.

ಘಟನೆ ಬಳಿಕ ಟಿಟಿಡಿ ತನ್ನ ಭಕ್ತರಿಗೆ ಒಂದಷ್ಟು ನಿಯಮಗಳನ್ನು ಅನುಸರಿಸುವಂತೆ ಸೂಚಿಸಿದೆ. ಬೆಳಗ್ಗೆ 6 ರಿಂದ ಮಧ್ಯಾಹ್ನ 2 ರ ತನಕ ಮಾತ್ರ ಮಕ್ಕಳೊಂದಿಗೆ ಬೆಟ್ಟ ಹತ್ತುವುದು. ಚಾರಣ ಮಾಡುವಾಗ ಎಚ್ಚರಿಕೆಯಿಂದ ಇರಲು ಸೂಚಿಸಿದೆ.

ಹಾಗೇ ದ್ವಿಚಕ್ರ ವಾಹನಗಳ ಸಂಚಾರವನ್ನು ಸಂಜೆ 6 ರಿಂದ ಬೆಳಗ್ಗೆ 6 ರವರೆಗೆ ನಿರ್ಬಂಧಿಸಲಾಗಿದೆ. ಪಾದಚಾರಿ ಮಾರ್ಗಗಳು ಮತ್ತು ಘಾಟ್ ರಸ್ತೆಗಳಲ್ಲಿ ಯಾತ್ರಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದು ಟಿಟಿಡಿ ಅಧ್ಯಕ್ಷ ಬಿ ಕರುಣಾಕರ ರೆಡ್ಡಿ ತಿಳಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment