Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಮೈಸೂರು ದಸರಾ ವ್ಯಾಪಾರಕ್ಕೆ ಬಂದಿದ್ದ ಬಾಲಕಿಯನ್ನು ಅಮಾನುಷವಾಗಿ ಕೊಂದಿದ್ದವನ ಕಾಲಿಗೆ ಗುಂಡು..!

---Advertisement---

ಮೈಸೂರು: ದಸರಾ ಹಬ್ಬ ಅಂದ್ರೆ ಇಡೀ ನಾಡಿಗೆ ಹಬ್ಬ. ಈ ಸಂದರ್ಭದಲ್ಲಿ ಹೊಟ್ಟೆಪಾಡಿಗಾಗಿ ಎಲ್ಲೆಲ್ಲಿಂದಾನೋ ವ್ಯಾಪಾರಿಗಳು ಬರ್ತಾರೆ. ಮೂರು ಕಾಸು ದುಡಿದುಕೊಂಡು ಹೋಗೋಣಾ ಅಂತ ಬೀದಿಯಲ್ಲಿಯೇ ಬದುಕುತ್ತಾರೆ. ಅಂಥವರ ಮೇಲೆಯೇ ರಾಕ್ಷಸ ಕೃತ್ಯ ಮೆರೆದರೆ ಹೇಗೆ..? ಅಂತದ್ದೊಂದು ಘಟನೆ ನಿನ್ನೆ ಮೈಸೂರು ನಗರಿಯಲ್ಲಿ ಬೆಳಕಿಗೆ ಬಂದಿತ್ತು. ಕಲಬುರಗಿಯಿಂದ ಮೈಸೂರಿಗೆ ವ್ಯಾಪಾರಕ್ಕೆಂದು ಬಂದಿದ್ದ ಪುಟ್ಟ ಬಾಲಕಿಯ ಮೇಲೆ ಅಮಾನುಷ ಕೃತ್ಯ ಎಸಗಿದ್ದ. ಆ ಬಾಲಕಿ ಆತನ ಅಟ್ಟಹಾಸಕ್ಕೆ ಪ್ರಾಣವನ್ನೇ ಬಿಟ್ಟಿದ್ದಳು. ನಿನ್ನೆ ಶವ ಪತ್ತೆಯಾಗಿತ್ತು. ಇಂದು ಆರೋಪಿಯನ್ನ ಪತ್ತೆ ಹಚ್ಚಿದ ಪೊಲೀಸರು, ಕಾಲುಗೆ ಗುಂಡೇಟು ಹೊಡೆದು ಮಲಗಿಸಿದ್ದಾರೆ.

ನಿನ್ನೆ ಈ ರೀತಿಯ ಘಟನೆ ಬೆಳಕಿಗೆ ಬಂದೊಡನೆ ಪೊಲೀಸರು ಅಲರ್ಟ್ ಆಗಿದ್ದರು. ಘಟನೆ ನಡೆದ ಸುತ್ತಮುತ್ತ ಇರುವ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸಿದ್ದರು. ಬಳಿಕ ಆ ಕೃತ್ಯ ನಡೆಸಿದವ ಕಾರ್ತಿಕ್ ಎಂಬುದು ಗೊತ್ತಾಗಿತ್ತು. ಆತನ ಹುಡುಕಾಟ ಶುರು ಮಾಡಿದ ಪೊಲೀಸರಿಗೆ ಕೊಳ್ಳೆಗಾಲದಲ್ಲಿ ಸಿಕ್ಕಿಬಿದ್ದ. ಸದ್ಯ ಆತನನ್ನ ಬಂಧಿಸಿ, ಮೈಸೂರಿಗೆ ಕರೆತಂದಿದ್ದಾರೆ.

ಆತನನ್ನು ಹಿಡಿಯಲು ಹೋದಾಗ ಪೊಲೀಸರ ಮೇಲೆಯೇ ಹಲ್ಲೆ ಮಾಡಲು ಯತ್ನಿಸಿದ್ದಾನೆ. ತಕ್ಷಣ ತಮ್ಮಲ್ಲಿದ್ದ ತಮ್ಮ ಬಳಿ ಇದ್ದ ಪಿಸ್ತೂಲ್ ಮೂಲಕ ಕಾಲಿಗೆ ಗುಂಡು ಹಾರಿಸಿ, ಆತನನ್ನ ಸೆರೆಹಿಡಿದಿದ್ದಾರೆ. ಹೊಟ್ಟೆ ಪಾಡಿಗಾಗಿ ಬಂದಿದ್ದ ಆ ಪುಟ್ಟ ಬಾಲಕಿಯ ಮೇಲೆ ಕ್ರೌರ್ಯ ಮೆರೆದು ಆ ಮಗುವಿನ ಜೀವವನ್ನೇ ತೆಗೆದ. ಆ ತಾಯಿಯ ಸಂಕಟ ನಿನ್ನೆಯೆಲ್ಲಾ ನೋಡೋಕೆ ಆಗದಂತಿತ್ತು. ಬದುಕಿಗೊಂದಿಷ್ಟು ಹಣ ಮಾಡಿಕೊಳ್ಳೋಣಾ ಎಂದು ಬಂದಿದ್ದ ತಾಯಿ ಮಗಳನ್ನೇ ಬಲಿ ಕೊಟ್ಟಂತಾಯ್ತು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now