Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೃಹತ್ ದೂರದರ್ಶಕ ಉದ್ಘಾಟಿಸಿದ ಹವ್ಯಾಸಿ ಖಗೋಳ ವೀಕ್ಷಕ ಹೆಚ್.ಎಸ್.ಟಿ.ಸ್ವಾಮಿ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ, (ಜ.28): ದೂರದರ್ಶಕಗಳ ಆವಿಷ್ಕಾರದ ನಂತರ ಬಾಹ್ಯಾಕಾಶ ಕ್ಷೇತ್ರದಲ್ಲಿ ಅನೇಕ ಸಂಶೋಧನೆಗಳನ್ನು ಕೈಗೊಳ್ಳಲು ಖಗೋಳ ವಿಜ್ಞಾನಿಗಳಿಗೆ ಅನುಕೂಲವಾಯಿತೆಂದು ಹವ್ಯಾಸಿ ಖಗೋಳ ವೀಕ್ಷಕರು ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ರಾಜ್ಯ ಖಚಾಂಚಿ ಎಚ್.ಎಸ್.ಟಿ.ಸ್ವಾಮಿ ತಿಳಿಸಿದರು.

ಇಲ್ಲಿನ ಡಾನ್‍ಬೋಸ್ಕೋ ಶಾಲೆಯಲ್ಲಿ ಬೃಹತ್ ದೂರದರ್ಶಕ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತ ಖಗೋಳ ವಿಜ್ಞಾನ ತುಂಬಾ ಅಭಿವೃದ್ದಿ ಪಥದಲ್ಲಿ ಸಾಗುತ್ತಿದೆ. ಕ್ರಿ.ಶ. 1610 ರಲ್ಲಿ ಗೆಲಿಲಿಯೋ ದೂರದರ್ಶಕವನ್ನು ತಯಾರಿಸಿ ಜಗತ್ತೆ ಬೆರಗಾಗುವಂತೆ ಮಾಡಿದ್ದಾನೆ.

ಈಗ ಸಂಶೋಧನೆಗಳಿಗೆ ನೆರವಾಗಲು ಹೆಚ್ಚು ಸಾಮರ್ಥ್ಯವನ್ನು ದೂರದರ್ಶಕಗಳು ಮಾರುಕಟ್ಟೆಯಲ್ಲಿ ಬಳಕೆಗೆ ಸಿಗುತ್ತಿವೆ. ಅವುಗಳ ಮೂಲಕ ಕೋಟಿ ಕೋಟಿ ಕಿ.ಮೀ. ದೂರದಲ್ಲಿರುವ ಆಕಾಶಕಾಯಗಳನ್ನು ತುಂಬಾ ಹತ್ತಿರದಿಂದ ವೀಕ್ಷಿಸಬಹುದಾಗಿದೆ.

ಗ್ರಹಗಳು, ಉಪಗ್ರಹಗಳು, ಧೂಮಕೇತುಗಳು,ನೆಬುಲಾಗಳು, ಗ್ಯಾಲಕ್ಸಿಗಳನ್ನು ನೋಡಿ ಆನಂದಿಸಬಹುದಾಗಿದೆ ಎಂದು ಮಕ್ಕಳಲ್ಲಿ ಕುತೂಹಲ ಮೂಡಿಸಿದರು.

ಪ್ರಾಂಶುಪಾಲ ಫಾದರ್ ವಿಜಯ ಮಾರ್ಟಿನ್ ಮಾತನಾಡಿ ನಮ್ಮ ಜಿಲ್ಲೆಯಲ್ಲಿಯೇ ಅತಿ ದೊಡ್ಡ ದೂರದರ್ಶಕ ಇದಾಗಿದ್ದು, ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.

ಡಾನ್‍ಬೋಸ್ಕೋ ಶಾಲೆಯ ವಿಜ್ಞಾನ ಶಿಕ್ಷಕರಾದ ಸಂದೀಪ್, ಇಂಧೂದರ್, ಮಾನಸ, ಲಕ್ಷ್ಮಿದೇವಿ, ಪಂಕಜ, ದೀಪ, ಸುಷ್ಮಾ, ಶ್ವೇತ ಹಾಗೂ ಎಲ್ಲಾ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬರ ಪರಿಹಾರ ಕೊಡದ ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ

ಬೆಂಗಳೂರು: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಬರ ಪರಿಹಾರ ನೀಡದಿರುವುದಕ್ಕೆ ಇಂದು ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸುತ್ತಿದ್ದು, ಸಿಎಂ ಸಿದ್ದರಾಮಯ್ಯ ಕೂಡ ಭಾಗಿಯಾಗಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಮಾತನಾಡಿ,

ಬೇಸಿಗೆಯಲ್ಲಿ ಕಣ್ಣುಗಳ ಆರೋಗ್ಯಕ್ಕೆ ಹೀಗೆ ಮಾಡಿ…

ಸುದ್ದಿಒನ್ : ಕಣ್ಣಿನ ಉರಿಯು ಬೇಸಿಗೆಯಲ್ಲಿ ಯಾರನ್ನಾದರೂ ಬಾಧಿಸುವ ಸಾಮಾನ್ಯ ಸಮಸ್ಯೆಯಾಗಿದೆ. ಸೂರ್ಯನ ಬಿಸಿಲು, ಧೂಳು ಮತ್ತು ವಾಯು ಮಾಲಿನ್ಯವು ಕಣ್ಣುಗಳ ಉರಿ, ಕಿರಿಕಿರಿ ಮತ್ತು ಕೆಂಪಗಾಗುವುದು ಆಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಕಣ್ಣಿನ ಕಿರಿಕಿರಿಯನ್ನು

ಈ ರಾಶಿಯವರು ತುಂಬಾ ಪ್ರಯತ್ನಶಾಲಿ ಆದರೆ ಅದೃಷ್ಟ ಕೈ ಕೊಡುತ್ತಿದೆ

ಈ ರಾಶಿಯವರು ತುಂಬಾ ಪ್ರಯತ್ನಶಾಲಿ ಆದರೆ ಅದೃಷ್ಟ ಕೈ ಕೊಡುತ್ತಿದೆ, ಈ ರಾಶಿಯ ಪ್ರೀತಿಸಿ ಮದುವೆ ಆದವರ ಗೋಳಾಟ ಕೇಳಲಾಗದು, ಮಂಗಳವಾರ ರಾಶಿ ಭವಿಷ್ಯ -ಏಪ್ರಿಲ್-23,2024 ಹನುಮಾನ ಜಯಂತಿ ಸೂರ್ಯೋದಯ: 05:58, ಸೂರ್ಯಾಸ್ತ :

error: Content is protected !!