ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ಹಿರಿಯೂರು, ನವೆಂಬರ್. 26 : ಜಗತ್ತಿನಲ್ಲೇ ಅತ್ಯಂತ ವಿಸ್ತೃತ ಮತ್ತು ಸಮಗ್ರ ಭಾರತ ಸಂವಿಧಾನದ ಹೊಂದಿದೆ ಎಂದು ತಹಶೀಲ್ದಾರ್ ಎಂ. ಸಿದ್ದೇಶ್ ತಿಳಿಸಿದರು.
ನಗರದ ಟಿಬಿ ವೃತ್ತದ ಅಂಬೇಡ್ಕರ್ ಪ್ರತಿಮೆ ಮುಂಭಾಗದಲ್ಲಿ ತಾಲೂಕು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಡಾ. ಬಿಆರ್. ಅಂಬೇಡ್ಕರವರ ನಾಯಕತ್ವದಲ್ಲಿ ರಚಿಸಿರುವ ಸಂವಿಧಾನ ತಾರತಮ್ಯವಿಲ್ಲದ ಚಿಂತನೆಗಳು ಭಾರತವನ್ನು ಪ್ರಗತಿಯತ್ತ ಕೊಂಡೊಯ್ಯುತ್ತಿವೆ. ಸಂವಿಧಾನದ ಉದ್ದೇಶ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು ಸಮಾನವಾಗಿ ವಿತರಿಸುವುದು ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸುವುದಾಗಿದೆ. ಸಂವಿಧಾನದ ಅರ್ಥ, ಮಹತ್ವ ಹಾಗೂ ಜವಾಬ್ದಾರಿಯನ್ನು ನಮ್ಮ ಜನ ಅರ್ಥ ಮಾಡಿಕೊಳ್ಳಬೇಕು ಎಂಬುದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯವಾಗಿತ್ತು ಎಂದು ತಿಳಿಸಿದರು.

ತಾಪಂ ಇಒ ಡಾ. ಪ್ರಮೋದ್ ಮಾತನಾಡಿ ಸಂವಿಧಾನವು ನಮ್ಮೆಲ್ಲರಿಗೂ ಮೂಲಭೂತ ಹಕ್ಕುಗಳನ್ನು ನೀಡಿದೆ. ಸಮಾನತೆ, ಅಭಿವ್ಯಕ್ತಿ ಸ್ವಾತಂತ್ರ್ಯ, ಶಿಕ್ಷಣ ಮತ್ತು ಸಂರಕ್ಷಣೆ, ಕಾನೂನು, ಜವಾಬ್ದಾರಿ, ರಾಷ್ಟ್ರ ನಿರ್ಮಾಣ ಸೇರಿದಂತೆ ಎಲ್ಲಾ ಅಂಶಗಳು ಸಂವಿಧಾನ ಪೀಠಿಕೆಯಲ್ಲಿ ಅಡಗಿವೆ ಎಂದು ಹೇಳಿದರು.
ವಾಣಿ ಕಾಲೇಜಿನ ಪ್ರಾಧ್ಯಾಪಕ ಡಾ. ಗಂಗಾಧರ್ ಕಾರ್ಯಕ್ರಮ ಕುರಿತು ಉಪನ್ಯಾಸ ನೀಡಿದರು. ನಗರಸಭೆ ಪೌರಾಯುಕ್ತ ಎ ವಾಸೀಂ ಅವರು ಸಂವಿಧಾನ ಪೀಠಿಕೆ ಓದಿ ಪ್ರತಿಜ್ಞೆ ಬೋಧಿಸಿದರು. ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ಮತ್ತು ಸಂವಿಧಾನ ದಿನ ಕುರಿತು ನನ್ನ ಮತ ನನ್ನ ಹಕ್ಕು ಭಾಷಣ ಸ್ಪರ್ಧೆಯಲ್ಲಿ ದೇವರಕೊಟ್ಟ ಮೂರಾರ್ಜಿ ವಸತಿ ಶಾಲೆಯ ಆರ್.ಡಿ. ಅನನ್ಯ ಪ್ರಥಮ, ಜೆಜಿ ಹಳ್ಳಿ ಇಂದಿರಾಗಾಂಧಿ ವಸತಿ ಶಾಲೆಯ ಎಂ. ಅಶ್ವಿನಿ ದ್ವಿತೀಯ ಹಾಗೂ ದೇವರಕೊಟ್ಟ ಮೂರಾರ್ಜಿ ವಸತಿ ಶಾಲೆಯ ಇ. ಪುಷ್ಪಲತಾ ತೃತೀಯ ಚಿತ್ರಕಲಾ ಸ್ಪರ್ಧೆಯಲ್ಲಿ ವಿಭಾಗದಲ್ಲಿ ವಿಜೇತರಾದ ಜೆಜಿ ಹಳ್ಳಿ 10ನೇ ತರಗತಿ ಬಿ. ಶ್ರೀನಿವಾಸ್ ಪ್ರಥಮ, ಪಬ್ಲಿಕ್ ಶಾಲೆಯ 9ನೇ ತರಗತಿ ಆರ್. ಹರ್ಷಾ ದ್ವಿತೀಯ ಹಾಗೂ ರಂಗೇನಹಳ್ಳಿಯ 10ನೇ ತರಗತಿ ಆರ್. ಸ್ಪೂರ್ತಿ ತೃತೀಯ ಸ್ಥಾನ ಪಡೆದವರಿಗೆ ಸನ್ಮಾನಿಸಿ ಬಹುಮಾನ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಡಿವೈಎಸ್ಪಿ ಶಿವಕುಮಾರ್, ಸಿಡಿಪಿಒ ರಾಘವೇಂದ್ರ, ವಾಣಿ ಕಾಲೇಜು ಪ್ರಾಂಶುಪಾಲ ಮಹೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಶಿವಕುಮಾರ್,ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಮೇಶ್, ರೈತ ಸಂಘದ ಜಿಲ್ಲಾಧ್ಯಕ್ಷ ಕೆಟಿ ತಿಪ್ಪೇಸ್ವಾಮಿ, ದಲಿತ ಮುಖಂಡರಾದ ಓಂಕಾರಪ್ಪ, ಕೇಶವಮೂರ್ತಿ, ರಾಮಚಂದ್ರಪ್ಪ, ತಿಮ್ಮರಾಜು, ವಿವಿಧ ದಲಿತಪರ ಸಂಘಟನೆಗಳ ಮುಖಂಡರು, ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಇದ್ದರು. ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಜೆ. ದಿನೇಶ್ ಕಾರ್ಯಕ್ರಮ ಸ್ವಾಗತಿಸಿದರು. ಮಹಮದ್ ಫಯಾಜ್ ನಿರೂಪಿಸಿದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್