Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರಟಕ ದಮನಕ ಚಿತ್ರದಲ್ಲಿ ನೀರಿನ ಮಹತ್ವದ ಬಗ್ಗೆ ಉತ್ತಮ ಸಂದೇಶವಿದೆ | ಚಿತ್ರದುರ್ಗದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಹೇಳಿಕೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್.11 : ಚಿತ್ರದುರ್ಗದಲ್ಲಿ ನಡೆದ ಅನೇಕ ಸಮಾರಂಭಗಳಿಗೆ ನಾನು ಬಂದಿದ್ದೇನೆ. ಇಲ್ಲಿಗೆ ಬರಬೇಕೆಂದರೆ ನನಗೆ ಎಲ್ಲಿಲ್ಲದ ಆನಂದ ಎಂದು ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ತಮ್ಮ ಸಂತಸ ಹಂಚಿಕೊಂಡರು.

ಬಸವೇಶ್ವರ ಚಿತ್ರಮಂದಿರಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಭುದೇವ್ ನಾನು ನಟಿಸಿರುವ ಕರಟಕ ದಮನಕ ಚಿತ್ರದಲ್ಲಿ ನೀರಿಗೆ ಎಷ್ಟೊಂದು ಮಹತ್ವವಿದೆ ಎನ್ನುವ ಸಂದೇಶವಿದೆ. ಬೇಸಿಗೆ ಕಾಲವಾಗಿರುವುದರಿಂದ ಎಲ್ಲಾ ಕಡೆ ನೀರಿನ ಸಮಸ್ಯೆಯಿದೆ. ಅಮೂಲ್ಯವಾದ ನೀರನ್ನು ವ್ಯರ್ಥಮಾಡಬಾರದು ಎನ್ನುವ ಸಂದೇಶವನ್ನು ಅಭಿಮಾನಿಗಳಿಗೆ ನೀಡಿದ್ದೇವೆ. ಹೆಚ್ಚಿನ ಹಣ ಗಳಿಸುವ ಆಸೆಗಾಗಿ ಬೇರೆ ದೇಶಗಳಿಗೆ ಹೋದವರು ತಮ್ಮ ಹುಟ್ಟೂರನ್ನು ಮರೆಯಬಾರದು.

ನಾನು ಹುಟ್ಟಿದ್ದು, ತಮಿಳುನಾಡಿನಲ್ಲಿ ನನ್ನ ತಂದೆ ಜನಸಿದ್ದು, ಗಾಜನೂರಿನಲ್ಲಿ ಹಾಗಾಗಿ ನಾನು ಗಾಜನೂರಿಗೆ ಹೋದರೆ ಸಿಗುವ ಖುಷಿ ಅಷ್ಟಿಷ್ಟಲ್ಲ. ಇದು ನನ್ನ 126 ನೇ ಸಿನಿಮಾ. ಅಪ್ಪುನನ್ನು ಮಿಸ್ ಮಾಡಿಕೊಂಡಿದ್ದೇವೆಂದು ಎಲ್ಲಿಯೂ ನನಗೆ ಅನಿಸುತ್ತಿಲ್ಲ. ಅಭಿಮಾನಿಗಳ ಮನಸ್ಸಿನಲ್ಲಿದ್ದಾನೆಂದುಕೊಂಡಿದ್ದೇನೆ. ಹುಟ್ಟಿದ ಊರಿನ ಬೇರು ನಂಟನ್ನು ಕಾಪಾಡಿಕೊಳ್ಳಬೇಕು. ಊರು ನಮಗೇನು ಕೊಟ್ಟಿದೆ ಎನ್ನುವುದಕ್ಕಿಂತ ಹೆಚ್ಚಾಗಿ ಪ್ರತಿಯೊಬ್ಬರು ಊರಿಗೆ ನಾವೇನು ಕೊಟ್ಟಿದ್ದೇನೆಂದು ಚಿಂತಿಸಿಬೇಕಿದೆ. ತಪ್ಪದೆ ಎಲ್ಲರೂ ಕರಟಕ ದಮನಕ ಚಿತ್ರ ನೋಡಿ ಉತ್ತಮ ಸಂದೇಶವಿದೆ ಎಂದು ಅಭಿಮಾನಿಗಳಲ್ಲಿ ಶಿವರಾಜ್‍ಕುಮಾರ್ ಮನವಿ ಮಾಡಿದರು.
ಈ ಚಿತ್ರದಲ್ಲಿ ಕೇವಲ ಮನರಂಜನೆಯಷ್ಟೆ ಅಲ್ಲ. ಸಾಮಾಜಿಕ ಸಂದೇಶ ಕೂಡ ಅಡಗಿದೆ. ಅಭಿಮಾನಿಗಳ ಪ್ರೀತಿ ವಿಶ್ವಾಸಕ್ಕೆ ನಾನು ಚಿರಋಣಿ ಎಂದರು.

ಚಿತ್ರದ ನಿರ್ದೇಶಕ ಯೋಗರಾಜ್‍ಭಟ್, ನಿರ್ಮಾಪಕ ನಗರಸಭೆ ಮಾಜಿ ಅಧ್ಯಕ್ಷ ಬಿ.ಕಾಂತರಾಜ್, ನಗರಸಭೆ ಸದಸ್ಯ ದೀಪು, ಮಾಜಿ ಸದಸ್ಯ ತಿಪ್ಪೇಸ್ವಾಮಿ, ಬಸವೇಶ್ವರ ಚಿತ್ರಮಂದಿರದ ಮಾಲೀಕರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment