ನವದೆಹಲಿ; ಬಹಳಷ್ಟು ಚರ್ಚೆಗೆ ಗ್ರಾಸವಾಗಿರುವಂತ ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ಇಷ್ಟು ದಿನದಿಂದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಹೆಸರು ಇತ್ತು. ಈಗ ನೋಡಿದ್ರೆ ಈ ಕೇಸಲ್ಲಿ ಡಿಕೆ ಬ್ರದರ್ಸ್ ಹೆಸರು ತಳುಕು ಹಾಕಿಕೊಂಡಿದೆ. ಯಂಗ್ ಇಂಡಿಯಾ ಲಿಮಿಟೆಡ್ ಡಿಕೆ ಬ್ರದರ್ಸ್ ಬರೋಬ್ಬರಿ 5.80 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ ಎಂದು ಆರೋಪಿಸಿಲಾಗಿದೆ. ನ್ಯಾಷನಲ್ ಹೆರಾಲ್ಡ್ ಆಸ್ತಿಗಳನ್ನ ತನ್ನ ಸುಪರ್ದಿಗೆ ತೆಗೆದುಕೊಂಡಿದ್ದ ಯಂಗ್ ಇಂಡಿಯಾ ಲಿಮಿಟೆಡ್ ಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರು ನಿರ್ದೇಶಕರಾಗಿದ್ದಾರೆ. ಈ ಯಂಗ್ ಇಂಡಿಯಾ ಲಿಮಿಟೆಡ್ ಗೆ ಡಿಕೆ ಶಿವಕುಮಾರ್, ಡಿಕೆ ಸುರೇಶ್ ಅವರು ದೇಣಿಗೆ ನೀಡಿದ್ದಾರೆ ಎನ್ನಲಾಗಿದೆ.
ಇನ್ನು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರಿಂದಲೂ ಯಂಗ್ ಇಂಡಿಯಾ ಲಿಮಿಟೆಡ್ ಗೆ ದೇಣಿಗೆ ನೀಡಲಾಗಿದೆ. ರೇವಂತ್ ರೆಡ್ಡಿ ಅವರು ದೇಣಿಗೆ ನೀಡುವುದಲ್ಲದೆ ಬೇರೆ 4 ನಾಯಕರಿಗೆ 80 ಲಕ್ಷ ರೂಪಾಯಿ ದೇಣಿಗೆ ನೀಡಲು ಸೂಚನೆ ನೀಡಲಾಗಿದೆ ಎನ್ನಲಾಗಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರು 142 ಕೋಟಿ ರೂಪಾಯಿ ಹಣ ದುರ್ಬಳಕೆ ಮಾಡಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಹೇಳಿದೆ.
ಯಂಗ್ ಇಂಡಿಯಾ ಲಿಮಿಟೆಡ್ ಕಂಪನಿಗೆ ತೆಗೆದುಕೊಂಡಿರುವ ದೇಣಿಗೆ ಸದುದ್ದೇಶ ಹೊಂದಿಲ್ಲ ಎನ್ನಲಾಗಿದೆ. ಈ ಎಲ್ಲಾ ಅಂಶಗಳನ್ನು ಇಡಿ ಕೋರ್ಟ್ ಸಲ್ಲಿಸಿರುವ ಜಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ. ಇದೀಗ ಡಿಕೆ ಶಿವಕುಮಾರ್ ಹಾಗೂ ಡಿಕೆ ಸುರೇಶ್ ಅವರ ಹೆಸರು ಕೂಡ ಕೇಳಿ ಬಂದಿದೆ. ಈ ವಿಚಾರ ರಾಜ್ಯರಾಜಕಾರಣದಲ್ಲೂ ಚರ್ಚೆಯಾಗ್ತಾ ಇದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















