Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ದ್ವಾರಕೀಶ್ ಇನ್ನಿಲ್ಲ ಎಂಬ ಸುದ್ದಿ : ನಗುತ್ತಲೇ ಉತ್ತರಿಸಿದ ಹಿರಿಯ ನಟ..!

---Advertisement---

 

ಬೆಂಗಳೂರು: ಈ ನಟ-ನಟಿಯರ ಬಗ್ಗೆ ಆಗಾಗ ಕೆಲವೊಂದು ರೀತಿಯ ಸುಳ್ಳು ಸುದ್ದಿಗಳು ಹಬ್ಬುತ್ತಲೇ ಇರುತ್ತವೆ. ಅದು ಅವರ ಬದುಕಿನ ಬಗ್ಗೆ. ಇದೀಗ ಹಿರಿಯ ನಟ ದ್ವಾರಕೀಶ್ ಅವರ ಬಗ್ಗೆಯೂ ಅಂತದ್ದೊಂದು ಸುಳ್ಳು ಸುದ್ದಿ ಹಬ್ಬಿತ್ತು. ದ್ವಾರಕೀಶ್ ಇಲ್ಲವಂತೆ. ಅನಾರೋಗ್ಯಕ್ಕೆ ತುತ್ತಾಗಿ, ಎಲ್ಲರನ್ನು ಅಗಲಿ ಹೋಗಿಯೇ ಬಿಟ್ಟರಂತೆ ಎಂದು. ಆದ್ರೆ ಈ ವಿಚಾರ ಎಲ್ಲೆಡೆ ಸುದ್ದಿಯಾಗುತ್ತಿದ್ದಂತೆ ಹಿರಿಯ ನಟ ದ್ವಾರಕೀಶ್ ಅವರೇ ವಿಡಿಯೋ ಮೂಲಕ ಸ್ಪಷ್ಟಪಡಿಸಿದ್ದಾರೆ.

ವಿಡಿಯೋವೊಂದನ್ನು ಮಾಡಿದ ದ್ವಾರಕೀಶ್ ಅವರು, ಈ ಸುದ್ದಿಗೆ ಆಶ್ಚರ್ಯಕ್ಕಿಂತ ನಗು ವ್ಯಕ್ತಪಡಿಸಿದ್ದಾರೆ. ಬದುಕಿದ್ದವರನ್ನೇ ಸಾಯಿಸಿ ಬಿಟ್ಟವರಲ್ಲ ಎಂದು ಶಾಕ್ ಆಗಿದ್ದಾರೆ. ಈ ವಿಡಿಯೋ ಮೂಲಕ “ಎಲ್ಲರಿಗೂ ನಮಸ್ಕಾರ ನಮಸ್ಕಾರ ನಮಸ್ಕಾರ. ನಾನು‌ ದ್ವಾರಕೀಶ್. ನೀವೂ ಸಾಕಿದ ದ್ವಾರಕೀಶ್, ನೀವೂ ಬೆಳೆಸಿದ ದ್ವಾರಕೀಶ್. ಚೆನ್ನಾಗಿದ್ದೀನಿ. ನಿಮ್ಮೆಲ್ಲರ ಆಶೀರ್ವಾದ ಬೇಕು. ಗಟ್ಟಿ‌ಮುಟ್ಟಾಗಿದ್ದೀನಿ. ಯಾವುದೇ ಚಿಂತೆ‌ಇಲ್ಲ. ನಗು ನಗುತ್ತಾ ಇದ್ದೀನಿ. ನಿಮ್ಮ ವಿಶ್ವಾಸ, ಪ್ರೀತಿ ಇದೆ ರೀತಿ ಇರಲಿ.ನಿಮ್ಮ ಆಶೀರ್ವಾದ ಇರುವ ತನಕ ನನಗೆ ಏನು ಆಗಲ್ಲ” ಎಂದಿದ್ದಾರೆ.

ದ್ವಾರಕೀಶ್ ಬಗ್ಗೆ ಈ ರೀತಿಯ ಸುದ್ದಿ ಇದೆ ಮೊದಲಲ್ಲ. ಸಾಕಷ್ಟು ಸಲ ಅವರ ಆರೋಗ್ಯದ ಬಗ್ಗೆಯೂ ಸುದ್ದಿ ಹಬ್ಬಿದೆ. ದ್ವಾರಕೀಶ್ ಮಾತ್ರವಲ್ಲ ಬೇರೆ ಬೇರೆ ಹಿರಿಯ ಕಲಾವಿದರ‌ ಬಗ್ಗೆ ಹೀಗೆ ಸುದ್ದಿಗಳು ಹರಿದಾಡಿದ್ದಾಗ ಸ್ಪಷ್ಟನೆ ಕೂಡ ನೀಡಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...